ಭಾರತದ ತ್ರಿವರ್ಣ ಧ್ವಜ ಬಳಸುವ ಕ್ರಮ: ಜನ ಸಾಮಾನ್ಯರಿಗೆ ಕಾನೂನು ಅರಿವು

ರಾಷ್ಟ್ರಧ್ವಜ ಒಂದು ರಾಷ್ಟ್ರವನ್ನು ಪ್ರತಿನಿಧಿಸುವ ಸಾಂಕೇತಿಕ ಧ್ವಜ. ರಾಷ್ಟ್ರಧ್ವಜವನ್ನು ಸರ್ಕಾರದಿಂದ ಹಾರಿಸಲಾಗುತ್ತದೆ, ಆದರೆ ಸಾಮಾನ್ಯವಾಗಿ ದೇಶದ ನಾಗರಿಕರು ಸಹಾ ಹಾರಿಸಬಹುದು. ರಾಷ್ಟ್ರೀಯ ಧ್ವಜವನ್ನು ಅದರ ಬಣ್ಣಗಳು ಮತ್ತು ಸಂಕೇತಗಳ ನಿರ್ದಿಷ್ಟ ಅರ್ಥಗಳೊಂದಿಗೆ ವಿನ್ಯಾಸಗೊಳಿಸಲಾಗಿದೆ.

ನಮ್ಮ ದೇಶಾದ್ಯಂತ 74ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಸಿದ್ಧತೆ ಕರೊನಾ ಮೂರನೇ ಅಲೆಯ ಆತಂಕದ ನಡುವೆಯೂ ಅದ್ದೂರಿಯಾಗಿ ನಡೆದಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರಮುಖ ಸ್ಥಳಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತದೆ. ಇನ್ನು ಸೈಕಲ್, ಬೈಕ್, ಕಾರು, ಆಟೊ, ವಾಹನಗಳ ಮೇಲೆ, ಮನೆಯ ತಾರಸಿಗಳ ಮೇಲೆ ತ್ರಿವರ್ಣ ಧ್ವಜಗಳು ರಾರಾಜಿಸುತ್ತವೆ. 

ದೇಶಪ್ರೇಮವನ್ನು ತೋರಿಸುವ ಉತ್ಸಾಹದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಾಗ ಪಾಲಿಸಬೇಕಾದ ನಿಯಮಗಳನ್ನು ಅರಿವಿಲ್ಲದೇ ಗಾಳಿಗೆ ತೂರುತ್ತಿದ್ದೇವೆ. ರಾಷ್ಟ್ರಧ್ವಜಕ್ಕೆ ಅಗೌರವ, ಅಪಮಾನ ಆಗದಂತೆ ನೋಡಿಕೊಳ್ಳಲು ಈ ಕೆಳಗಿನ ನಿಯಮಗಳನ್ನು ಪಾಲಿಸುವುದು ಕಡ್ಡಾಯ.

ದೇಶದ ಅಸ್ಮಿತೆಯ ಪ್ರತೀಕವಿರುವ ರಾಷ್ಟ್ರಧ್ವಜವನ್ನು ಹಾರಿಸುವಾಗ ಯಾವುದೇ ಅಗೌರವ ಉಂಟಾಗಬಾರದು ಎಂಬ ಕಾರಣಕ್ಕೆ ಕೇಂದ್ರೀಯ ಗೃಹ ಮಂತ್ರಾಲಯದವತಿಯಿಂದ ಭಾರತೀಯ ರಾಷ್ಟ್ರಧ್ವಜ ಸಂಹಿತೆ ಮಾಡಲಾಗಿದೆ.

ಲಾಂಛನ ಮತ್ತು ಅಭಿದಾನ (ಅಸಮರ್ಪಕ ಬಳಕೆಯ ತಡೆ) ಕಾಯ್ದೆ-1950 ಮತ್ತು ರಾಷ್ಟ್ರ ಘನತೆಯೆಡೆಗಿನ ಅಪಮಾನ ತಡೆ ಕಾಯ್ದೆ-1971ಕ್ಕೆ ಅನುಗುಣವಾಗಿ ಭಾರತದ ರಾಷ್ಟ್ರಧ್ವಜ ಒಂದು ರಾಷ್ಟ್ರವನ್ನು ಪ್ರತಿನಿಧಿಸುವ ಸಾಂಕೇತಿಕ ಧ್ವಜ.

ರಾಷ್ಟ್ರಧ್ವಜವನ್ನು ಸರ್ಕಾರದಿಂದ ಹಾರಿಸಲಾಗುತ್ತದೆ. ಆದರೆ ಸಾಮಾನ್ಯವಾಗಿ ದೇಶದ ನಾಗರಿಕರು ಕೂಡ ಹಾರಿಸಬಹುದು. ರಾಷ್ಟ್ರೀಯ ಧ್ವಜವನ್ನು ಅದರ ಬಣ್ಣಗಳು ಮತ್ತು ಸಂಕೇತಗಳ ನಿರ್ದಿಷ್ಟ ಅರ್ಥಗಳೊಂದಿಗೆ ವಿನ್ಯಾಸಗೊಳಿಸಲಾಗಿದೆ.

ಧ್ವಜ ಸಂಹಿತೆಗನುಸಾರ, ರಾಷ್ಟ್ರೀಯ ಧ್ವಜವನ್ನು ಹಾರಿಸಿದಾಗ ಅದಕ್ಕೆ ಸನ್ಮಾನ ಪೂರ್ವಕವಾಗಿ ಉಚ್ಛ ಸ್ಥಾನವನ್ನು ನೀಡಬೇಕು. ಅದು ಎಲ್ಲರಿಗೂ ಕಾಣಿಸುವ ರೀತಿ ಸ್ಥಳವನ್ನು ಆಯ್ಕೆಮಾಡಿಕೊಂಡು ಅಲ್ಲಿ ಧ್ವಜವನ್ನು ಹಾರಿಸಬೇಕು. ಸೂರ್ಯಾಸ್ತವಾಗುವುದರೊಳಗೆ ಧ್ವಜಾವರೋಹಣ (ಇಳಿಸುವುದು) ಮಾಡಬೇಕು

ರಾಷ್ಟ್ರಧ್ವಜವನ್ನು ಯಾವಾಗಲೂ ಸ್ಫೂರ್ತಿಯಿಂದ ಏರಿಸಬೇಕು ಮತ್ತು ಗೌರವದಿಂದ ಕೆಳಗಿಳಿಸಬೇಕು.ಏರಿಸುವಾಗ ಮತ್ತು ಕೆಳಗಿಳಿಸುವಾಗ ತುತ್ತೂರಿಯನ್ನು ಊದಲೇಬೇಕು.  ಕಟ್ಟಡದ ಕಿಟಕಿ, ಬಾಲ್ಕನಿ, ಮನೆ ಮೇಲೆ ಅಥವಾ ಅಡ್ಡವಾಗಿ ಹಾರಿಸುವಾಗ ಧ್ವಜದಲ್ಲಿರುವ ಕೇಸರಿ ಬಣ್ಣದ ಪಟ್ಟಿಯು ಮೇಲಿರಬೇಕು.

ಧ್ವಜಾರೋಹಣ ಮಾಡಿದವರು ಧ್ವಜಸ್ತಂಭದ ಬಲಭಾಗದಲ್ಲಿ ಸಭಿಕರ ಕಡೆಗೆ ಮುಖಮಾಡಿ ನಿಲ್ಲಬೇಕು. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜಕೋಲಿನಿಂದ ಅದನ್ನು ಹಾರಿಸಬೇಕು.

ಯಾವುದೇ ಮೆರವಣಿಗೆಯ ವೇಳೆ ಅಥವಾ ಪರೇಡಿನ ವೇಳೆ ವ್ಯಕ್ತಿಯ ಬಲಗೈಯಲ್ಲಿ ಧ್ವಜ ಇರಬೇಕು. ಇತರ ಧ್ವಜಗಳಿದ್ದರೆ ರಾಷ್ಟ್ರಧ್ವಜವು ಮಧ್ಯದಲ್ಲಿರಬೇಕು. ಅಲ್ಲದೇ, ಇತರ ಧ್ವಜ ಹಾಗೂ ಪತಾಕೆಗಳನ್ನು ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಹಾರಿಸಬಾರದು. ಬೇರೆ ದೇಶದ ಧ್ವಜಗಳಿದ್ದರೆ ಅವು ದೇಶದ ಧ್ವಜದ ಎಡಭಾಗದಲ್ಲೇ ಇರಬೇಕು.

ಹರಿದ, ಮುದ್ದೆಯಾದ ಧ್ವಜದ ಆರೋಹಣ ಮಾಡುವಂತಿಲ್ಲ, ಪ್ರದರ್ಶಿಸುವಂತಿಲ್ಲ ಅಲ್ಲದೇ ಅದನ್ನು ಸುಡುವಂತಿಲ್ಲ. ಯಾವುದೇ ವ್ಯಕ್ತಿಗೆ ಅಥವಾ ವಸ್ತುವಿಗೆ ವಂದಿಸುವಾಗ ಧ್ವಜವನ್ನು ಭೂಮಿಯ ದಿಕ್ಕಿನೆಡೆಗೆ ಬಗ್ಗಿಸಬಾರದು. ಅಂತೆಯೇ ಬಲವಂತವಾಗಿ ಧ್ವಜಕ್ಕೆ ಮಣ್ಣು ಹಾಗೂ ನೀರಿನ ಸ್ಪರ್ಶವಾಗಬಾರದು. ವಾಹನದ ಮೇಲೆ ಧ್ವಜವನ್ನು ಹಾರಿಸುವಾಗ ವಾಹನದ ಬ್ಯಾನೆಟಿನ ಹಾರಿಸಬೇಕು ಎಂದು ಸಂಹಿತೆ ತಿಳಿಸುತ್ತದೆ.

ಕೇಸರಿ ಪಟ್ಟಿಯು ಕೆಳಗೆ ಬರುವಂತೆ ಧ್ವಜಾರೋಹಣ ಮಾಡಬಾರದು. ಧ್ವಜಾರೋಹಣ ಮಾಡುವಾಗ ಹರಿಯದಂತೆ ಕಟ್ಟಬೇಕು.

ಅಲಂಕಾರಕ್ಕಾಗಿ, ಮನೆಯ ಪರದೆಗಾಗಿ ಉಪಯೋಗಿಸಬಾರದು ಮತ್ತು ಧ್ವಜದ ಬಣ್ಣದ ಬಟ್ಟೆಗಳನ್ನು ಧರಿಸಬಾರದು. ಅಂತೆಯೇ ರಾಷ್ಟ್ರಧ್ವಜವನ್ನು ಕರವಸ್ತ್ರದ ಮೇಲೆ ಬಿಡಿಸಬಾರದು. ಧ್ವಜದ ಮೇಲೆ ಯಾವುದೇ ಬರವಣಿಗೆ, ಜಾಹೀರಾತು ಇರಬಾರದು. ಅಂತೆಯೇ ಧ್ವಜಸ್ತಂಭದ ಮೇಲೆಯೂ ಯಾವುದೇ ಜಾಹೀರಾತು ಹಾಕಬಾರದು.

ಕೇವಲ ಗಣರಾಜ್ಯೋತ್ಸವ ದಿನ ಹಾಗೂ ಸ್ವಾತಂತ್ರ್ಯ ದಿನದಂದು ಧ್ವಜದಲ್ಲಿ ಹೂವು, ಹೂವಿನ ಎಸಳನ್ನು ಕಟ್ಟಿ ಧ್ವಜಾರೋಹಣವನ್ನು ಮಾಡಬೇಕು. ರಾಷ್ಟ್ರಧ್ವಜವನ್ನು ಏರಿಸುವಾಗ ಅಥವಾ ಇಳಿಸುವಾಗ ಉಪಸ್ಥಿತರು ಕವಾಯತಿನ ‘ಅಟೆಂನ್ಶನ್‌’ (ಸಾವಧಾನ) ಸ್ಥಿತಿಯಲ್ಲಿರಬೇಕು.

ಧ್ವಜಾರೋಹಣವಾದಾಗ ಸಮವಸ್ತ್ರ ಧರಿಸಿರುವ ಸರ್ಕಾರಿ ಅಧಿಕಾರಿಗಳು ಧ್ವಜಕ್ಕೆ ಸಲ್ಯೂಟ್‌ (ವಂದನೆ) ಮಾಡಬೇಕು. ಧ್ವಜವು ಸೈನ್ಯದಳದ ಸೈನಿಕನ ಕೈಯಲ್ಲಿದ್ದರೆ ಆತ ಸಾವಧಾನ ಸ್ಥಿತಿಯಲ್ಲಿ ನಿಂತುಕೊಳ್ಳುವನು. ಪರೇಡ್‌ ವೇಳೆ ಹತ್ತಿರದಿಂದ ಧ್ವಜವು ಹೋಗುತ್ತಿರುವಾಗ ಸರ್ಕಾರಿ ಅಧಿಕಾರಿಗಳು ಅದಕ್ಕೆ ವಂದನೆ ಸಲ್ಲಿಸಬೇಕು.

ಧ್ವಜದ ದುರುಪಯೋಗವನ್ನು ತಡೆಯಲು ಸ್ಪಷ್ಟ ನಿಲುವನ್ನು ಹೊಂದಲಾಗಿದೆ. ಅದರಂತೆ ರಾಜಕೀಯ ವ್ಯಕ್ತಿ, ಕೇಂದ್ರೀಯ ಸೈನ್ಯ ದಳಕ್ಕೆ ಸಂಬಂಧಿತ ವ್ಯಕ್ತಿಯ ಅಂತಿಮ ಯಾತ್ರೆಯ ಹೊರತು ಬೇರೆ ಯಾವ ಸಂದರ್ಭದಲ್ಲಿಯೂ ರಾಷ್ಟ್ರಧ್ವಜವನ್ನು ಉಪಯೋಗಿಸಬಾರದು ಎಂದು ಧ್ವಜ ಸಂಹಿತೆ ಉಲ್ಲೇಖಿಸಿದೆ. @ ಟಿ.ಕೆ.ಹನುಮಂತರಾಜು, ವಕೀಲರು, 9916186002

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್ (JDS) ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲಾಧ್ಯಕ್ಷರನ್ನು ಬದಲಿಸುವ ಚಿಂತನೆ ನಡೆದಿದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

[ccc_my_favorite_select_button post_id="117015"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!