ರಾಜ್ಯದಲ್ಲಿ ಲಾಕ್‍ಡೌನ್ ಮಾಡಬೇಕಾದ ಪರಿಸ್ಥಿತಿ ಆಗದಂತೆ ತಡೆಯುವ ಪ್ರಯತ್ನ ನನ್ನದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು: ಕೋವಿಡ್ 3ನೇ ಅಲೆಯನ್ನು ತಡೆಯಲು ನಮ್ಮ ಗಮನ ಕೇಂದ್ರೀಕರಿಸಿದ್ದೇವೆ. ಮುಂಜಾಗೃತವಾಗಿ ಸೂಕ್ತ ಹಾಗೂ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡರೆ ಕೋವಿಡ್ 3ನೇ ಅಲೆಯನ್ನು ತಡೆಯಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು.

ಮೈಸೂರಿನ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಕೋವಿಡ್-19 ಕುರಿತ ಪರಿಶೀಲನಾ ಸಭೆ ನಡೆಸಿದ ಅವರು 1ನೇ ಮತ್ತು 2ನೇ ಅಲೆಯು ಮೊದಲು ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಾಗಿ, ನಂತರ ನಮ್ಮ ರಾಜ್ಯದಲ್ಲಿ ಹರಡಿದೆ. ಈ ಹಿನ್ನೆಲೆಯಲ್ಲಿ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಈ ಎರಡು ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.

ಈ ರಾಜ್ಯಗಳ ಗಡಿಯಿಂದ ಕೋವಿಡ್ ನೆಗಿಟಿವ್ ವರದಿ ಇಲ್ಲದೆ ಪ್ರಯಾಣಿಕರು ಬರುವಂತಿಲ್ಲ. ಇದರಲ್ಲಿ ಲೋಪವಾಗದಂತೆ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಗಡಿಯಲ್ಲಿ ಅಧಿಕಾರಿಗಳು 3 ಪಾಳಿಯಲ್ಲಿ ಕೆಲಸ ಮಾಡಲು ನಿಯೋಜಿಸಲಾಗಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಆಗಾಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಸೂಚಿಸಲಾಗಿದೆ ಎಂದರು.

ಗಡಿಯಲ್ಲಿ ಚೆಕ್‍ಪೋಸ್ಟ್ ಹೊರತುಪಡಿಸಿಯೂ ಹಲವಾರು ದಾರಿಗಳು ಇರುತ್ತವೆ. ಅಲ್ಲೆಲ್ಲ ಪೆÇಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಗಡಿ ಭಾಗದ 10 ಕಿ.ಮೀ. ವ್ಯಾಪ್ತಿಯಲ್ಲಿ ಶೇ. 100ರಷ್ಟು ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಸೂಚಿಸಿದ್ದೇನೆ ಎಂದರು.

3ನೇ ಅಲೆ ಎದುರಿಸಲು ಐ.ಸಿ.ಯು. ಬೆಡ್ ಹೆಚ್ಚಳ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಆಮ್ಲಜನಕಯುಕ್ತ ಹಾಸಿಗೆಗಳ ಸೌಲಭ್ಯ, ಮಕ್ಕಳ ತಜ್ಞರ ನಿಯೋಜನೆ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ನೀಡಿದ ಸಲಹೆಗೆ ಅನುಗುಣವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ 14 ಆಕ್ಸಿಜನ್ ಜನರೇಟರ್ ಸ್ಥಾಪಿಸಲು ಮಂಜೂರಾಗಿದೆ. ಈ ಪೈಕಿ ಈಗಾಗಲೇ 3 ಪ್ಲಾಂಟ್‍ಗಳು ಆಗಿವೆ. ಇನ್ನು 6 ಆಕ್ಸಿಜನ್ ಜನರೇಟರ್ ಸ್ಥಾಪನೆ ಪ್ರಗತಿಯಲ್ಲಿದೆ. ಉಳಿದ 5 ಜನರೇಟರ್ ಬರಬೇಕಾಗಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯ ಹೆಚ್ಚಿಸಬೇಕು ಎಂದರು.

ಪ್ರತಿ ಹಳ್ಳಿಯಲ್ಲೂ ಮಕ್ಕಳ ಆರೋಗ್ಯ ಸ್ಥಿತಿಗತಿಯನ್ನು ಅರಿಯಲು ಆರೋಗ್ಯ ಶಿಬಿರ ಮಾಡಬೇಕು. ಅಪೌಷ್ಠಿಕ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕ ಆಹಾರ ನೀಡಬೇಕು. ಆರೋಗ್ಯ ಇಲಾಖೆಯಿಂದ ಪೋಷಕಾಂಶ ಔಷಧಿಗಳನ್ನು ನೀಡಬೇಕು ಎಂದರು.

ಪ್ರಸ್ತುತ 60-65 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬರುತ್ತಿದೆ. ಈ ಪ್ರಮಾಣವನ್ನು 1.5 ಕೋಟಿಗೆ ಹೆಚ್ಚಿಸುವಂತೆ ಕೇಳುತ್ತಿದ್ದೇವೆ. ಅದು ಬಂದರೆ ಬಹುತೇಕ ಎಲ್ಲರಿಗೂ ಲಸಿಕೆ ಸಿಗಲಿದೆ ಎಂದರು.

ಮೈಸೂರಿನಿಂದ ಬೆಂಗಳೂರಿಗೆ ಹೋಗಿ ಬರುವವರ ಸಂಖ್ಯೆ ತುಂಬಾ ಹೆಚ್ಚಿದೆ. ಗಡಿ ಜಿಲ್ಲೆಯಾಗಿರುವ ಇಲ್ಲಿ ನಿಯಂತ್ರಣ ಸಾಧ್ಯವಾದರೆ ರಾಜ್ಯದಲ್ಲಿ ನಿಯಂತ್ರಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗಮನ ಹರಿಸಲಾಗಿದೆ ಎಂದರು.

ರಾಜ್ಯದಲ್ಲಿ ಲಾಕ್‍ಡೌನ್ ಮಾಡಬೇಕಾದ ಪರಿಸ್ಥಿತಿ ಆಗದಂತೆ ತಡೆಯುವ ಪ್ರಯತ್ನ ನನ್ನದು. ಸೂಕ್ತ ಮುಂಜಾಗೃತ ಕ್ರಮಗಳನ್ನು ಈಗಿನಿಂದಲೇ ತೆಗೆದುಕೊಂಡರೆ ಇದು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಸಾ.ರಾ.ಮಹೇಶ್, ಮರಿತಿಬ್ಬೇಗೌಡ, ಸಂದೇಶ್ ನಾಗರಾಜು, ಎಲ್. ನಾಗೇಂದ್ರ, ಹೆಚ್.ಪಿ.ಮಂಜುನಾಥ್, ಡಾ. ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ಧನ್, ಕೆ. ಮಹದೇವ, ಕೆ.ಟಿ.ಶ್ರೀಕಂಠೇಗೌಡ, ಎಂ.ಅಶ್ವಿನ್ ಕುಮಾರ್, ಉಪ ಮೇಯರ್ ಅನ್ವರ್ ಬೇಗ್, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯಿತಿ ಸಿ.ಇ.ಓ ಎ.ಎಂ. ಯೋಗೀಶ್, ಎಸ್‍ಪಿ ಆರ್. ಚೇತನ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!