ಕಾವೇರಿ ಕೂಗು ಅಭಿಯಾನದ ಮೂಲಕ ರೈತರ ಸಹಾಯಕ್ಕೆ ಮುಂದಾಗಿದೆ ಈಶ ಫೌಂಡೇಷನ್: ಜಯಮ್ಮಪ್ರಭು

ದೊಡ್ಡಬಳ್ಳಾಪುರ: ನದಿಗಳ ರಕ್ಷಿಸಿ ಅಭಿಯಾನದ ರೂವಾರಿ ಈಶ ಫೌಂಡೇಷಶನ್ ಸಂಸ್ಥಾಪಕ ಜಗ್ಗಿ ವಾಸುದೇವ (ಸದ್ಗುರು) ಅವರು ರಾಜ್ಯದ ಪ್ರಮುಖ ಜೀವನದಿ ಕಾವೇರಿ ಪುನಶ್ಚೇತನಕ್ಕಾಗಿ ಕಾವೇರಿ ಕೂಗು ಎಂಬ ಅಭಿಯಾನದ ಮೂಲಕ ರೈತರನ್ನು ಅರಣ್ಯ ಕೃಷಿಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೂಢಿ ಗ್ರಾಮಪಂಚಾಯಿತಿ‌ ಅಧ್ಯಕ್ಷೆ ಜಯಮ್ಮಪ್ರಭು ತಿಳಿಸಿದರು.

ತಾಲೂಕಿನ‌ಆರೂಢಿ ಗ್ರಾಮಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಬೃಹತ್‌ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನದಲ್ಲಿ ಅವರು ಮಾತಾನಾಡಿದರು.

ಕಾವೇರಿ ಅಚ್ಚುಕಟ್ಟು ಪಾತ್ರದಲ್ಲಿ ಗಿಡಗಳನ್ನು ಬೆಳೆಸುವ ಹಾಗೂ ರೈತರ ಆದಾಯವನ್ನೂ ದ್ವಿಗುಣ ಮಾಡುವ ಮಹತ್ವಾಕಾಂಕ್ಷಿ ಅಭಿಯಾನ ಇದಾಗಿದೆ. ಈ ಅಭಿಯಾನದ ಮೂಲಕ ರೈತ ಸಂಕುಲಕ್ಕೆ ಸರ್ಕಾರದ ನೆರವು ಕೊಡಿಸುವುದು ಹಾಗೂ ಅರಣ್ಯ ಕೃಷಿ ಪರಿಕಲ್ಪನೆಯಡಿ 242 ಕೋಟಿ ಮರ ಬೆಳೆಸುವ ಮಹತ್ವದ ಗುರಿ ಹೊಂದಿದ್ದಾರೆ.

ಸಾಮಾನ್ಯ ಜನರಿಗೆ ಅರಣ್ಯ ಕೃಷಿ ಕುರಿತು ಪರಿಕಲ್ಪನೆಯಿಲ್ಲ. ಈ ಕಾರಣದಿಂದಾಗಿ ತಮಿಳುನಾಡಿನಲ್ಲಿ ಯಶಸ್ಸು ಕಂಡ ನಂತರ ಕರ್ನಾಟಕದಲ್ಲಿ ಅರಣ್ಯ ಕೃಷಿ ಯೋಜನೆಯಡಿ ಸಹಾಯಧನ ಕೊಡಿಸಿ ಕೃಷಿಕರೂ ಅಭಿಯಾನದಲ್ಲಿ ಭಾಗಿಯಾಗುವಂತೆ ಮಾಡಿದ್ದಾರೆ ಎಂದವರು ತಿಳಿಸಿದರು.

ಈಶಾ ಪೌಂಡೇಶನ್ ಸ್ವಯಂ ಸೇವಕ ಲಿಖಿತ್ ಮಾತನಾಡಿ, ಗ್ರಾಮ ಸಂಪರ್ಕ ಅಭಿಯಾನವು ಆ. 2ರಿಂದ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ 1,785 ಗ್ರಾಮ ಪಂಚಾಯತ್‌ಗಳಲ್ಲಿ ನಡೆಯುತ್ತಿದೆ.

ರೈತರಿಗೆ ಯಾವ ರೀತಿಯ ಗಿಡಗಳು ಬೇಕು ಎಂಬ ಮಾಹಿತಿ ಪಡೆಯುವ ಉದ್ದೇಶದಿಂದ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ ತಂಡವು ಎಲ್ಲ 1785 ಪಂಚಾಯತ್​ಗಳಲ್ಲಿಯೂ ‘ಮರ ಮಿತ್ರ’ ಎಂಬ ಹಸರಿನಲ್ಲಿ ಸಂಯೋಜಕರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಈಶಾ ಪೌಂಡೇಶನ್ ಸ್ವಯಂ ಸೇವಕ ರಾಹುಲ್, ಅರಣ್ಯ ಇಲಾಖೆ ಸಿಬ್ಬಂದಿ ವಿನಯ್ ಕುಮಾರ್ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!