ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಉದ್ಘಾಟನೆ / ಕ್ಯಾನ್ಸರ್, ಮಧುಮೇಹ ಜಾಗೃತಿಗೆ ನೂತನ ಕ್ಲಬ್ ಆದ್ಯತೆ

ದೊಡ್ಡಬಳ್ಳಾಪುರ: ಸೇವೆಯೇ ಪರಮೋಚ್ಛ ಧ್ಯೇಯವಾಗಿರುವ ಲಯನ್ಸ್ ಕ್ಲಬ್ ಅಂಧತ್ವ ನಿವಾರಣೆಯಲ್ಲಿ ಜಗತ್ತು ಮೆಚ್ಚುವ ಬದ್ದತೆ ಪ್ರದರ್ಶಿಸಿದೆ ಎಂದು ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಬಿ.ವಿ.ಅಚ್ಯುತಾನಂದರೆಡ್ಡಿ ಹೇಳಿದರು.

ನಗರದ ಪ್ರತಿಷ್ಠಿತ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾದ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟೂಷನ್ಸ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವದ 210 ದೇಶಗಳಲ್ಲಿ ತನ್ನ ಸಾಮಾಜಿಕ ಚಟುವಟಿಕೆಗಳನ್ನು ವಿಸ್ತರಿಸಿಕೊಂಡಿರುವ ಲಯನ್ಸ್ ಕ್ಲಬ್ ನಲ್ಲಿ ತೊಡಗಿಕೊಳ್ಳುವುದೇ ಮಹತ್ವದ ವಿಚಾರವಾಗಿದೆ. ಬುದ್ದಿಮತ್ತೆ, ಸಮಯ ಹಾಗೂ ಸಂಪನ್ಮೂಲಗಳ ಸದ್ಭಳಕೆಗೆ ಇದೊಂದು ವಿಶಿಷ್ಟ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು.

ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ.ಎಚ್.ನಾಗರಾಜ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಸಾಮಾಜಿಕ ಕಾಳಜಿ ಹಾಗೂ ಬದ್ದತೆಯನ್ನು ಉತ್ತೇಜಿಸುವ ಸಲುವಾಗಿ ಲಯನ್ಸ್ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದೆ. ಸೇವಾ ಚಟುವಟಕೆಗಳಿಗೆ ಕೋಲಾರದ ಆರ್.ಎಲ್.ಜಾಲಪ್ಪ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗ ನೀಡಲಾಗುವುದು ಎಂದರು.

ನೂತನ ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್ ಮಾತನಾಡಿ, ಹೊಸ ಕ್ಲಬ್ ಮುಖ್ಯವಾಗಿ ಕ್ಯಾನ್ಸರ್, ಮಧುಮೇಹ ರೋಗಗಳ ಜಾಗೃತಿ, ಚಿಕಿತ್ಸೆ ಹಾಗೂ ನಿರ್ವಹಣಾ ಕ್ರಮಗಳು, ಪರಿಸರ ಕಾಳಜಿಯನ್ನು ಆದ್ಯತೆಯಾಗಿಟ್ಟುಕೊಂಡು ತನ್ನ ಕಾರ್ಯಯೋಜನೆಯನ್ನು ಜಾರಿಗೆ ತರಲಿದೆ ಎಂದು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಜಿ.ಗೋಪಾಲ್, ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ವತಿಯಿಂದ ನೂತನ ಸಂಸ್ಥೆ ಪ್ರಾಯೋಜನೆಗೊಳ್ಳುತ್ತಿದೆ ಎಂದು ತಿಳಿಸಿದರು.

ಎಂಜೆಎಫ್ ಬಿ.ಎಸ್.ರಾಜಶೇಖರಯ್ಯ, ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪಿಎಂಜೆಎಫ್ ಬಿ.ಎಸ್.ನಾಗರಾಜ್ ಕಾರ್ಯಕಾರಿ ಸಮಿತಿ ಸದಸ್ಯರ ಕರ್ತವ್ಯಗಳ ಅರಿವು ಮೂಡಿಸಿದರು.

ಲಯನ್ಸ್ ಪಿಎಂಜೆಎಫ್ ಅಜಿತ್ಬಾಬು, ರೀಜನಲ್ ಛೇರ್ಪರ್ಸನ್ ಕೆ.ವಿ.ಪ್ರಭುಸ್ವಾಮಿ, ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಟ್ರಸ್ಟಿ ಜೆ.ರಾಜೇಂದ್ರ, ಎಂಜೆಎಫ್ ನಾಗರಾಜಶೆಟ್ಟಿ, ಕಾರ್ಯದರ್ಶಿ ಕೆ.ಶಿವಶಂಕರ್, ಖಜಾಂಚಿ ರೇಖಾ ವೆಂಕಟೇಶ್, ಲಯನ್ಸ್ ಚಾರಿಟೀಸ್ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಮತ್ತಿತರರು ಪಾಲ್ಗೊಂಡಿದ್ದರು..

ನೂತನ ಪದಾಧಿಕಾರಿಗಳು: ಎಂ.ಆರ್.ಶ್ರೀನಿವಾಸ್(ಅಧ್ಯಕ್ಷ), ಎನ್.ಎಸ್.ಬಾಬುರೆಡ್ಡಿ(ಕಾರ್ಯದರ್ಶಿ), ಸುಮಿತ್ ಪಾಲ್(ಖಜಾಂಚಿ), ಕೆ.ವೀಣಾ(ಜಂಟಿ ಕಾಯದರ್ಶಿ), ಎಲ್.ಎನ್.ಪ್ರದೀಪ್ ಕುಮಾರ್, ಡಾ.ಎಂ.ಶ್ರೀನಿವಾಸರೆಡ್ಡಿ, ಜೆ.ಆರ್.ರಾಕೇಶ್(ಉಪಾಧ್ಯಕ್ಷರು), ಕೆ.ಆರ್.ರವಿಕಿರಣ್(ಆಡಳಿತಾಧಿಕಾರಿ), ಬಿ.ಶ್ರೀನಿವಾಸ(ಟೇಲ್ ಟ್ವಿಸ್ಟರ್), ಕೆ.ತಿರುಮಲೇಶ್(ಲಯನ್ ಟೇಮರ್), ಕೆ.ಆರ್.ಮಂಜುಳಾ(ಸಂವಹನ ಮುಖ್ಯಸ್ಥೆ), ಟಿ.ಮಹಂತೇಶಪ್ಪ(ಎಲ್ಸಿಐಎಫ್ ಸಂಯೋಜಕ), ಎನ್.ಬಿ.ಶಂಕರ್(ಸೇವಾ ವಿಭಾಗ ಮುಖ್ಯಸ್ಥ), ಕೆ.ಎಂ.ಮುನಿರಾಮೇಗೌಡ(ಸದಸ್ಯತ್ವ ಸಮಿತಿ ಮುಖ್ಯಸ್ಥ), ಎಸ್.ರವಿಕುಮಾರ್(ಕಾರ್ಯಕ್ರಮ ಸಮಿತಿ ಮುಖ್ಯಸ್ಥ), ನಿರ್ದೇಶಕರಾಗಿ ಲಕ್ಷ್ಮೀ ಶ್ರೀನಿವಾಸ್, ಕೆ.ವಿ.ಪ್ರಸನ್ನಕುಮಾರ್, ನಂಜೇಗೌಡ, ಎಸ್.ಎಸ್.ದೇವಿಕಾರಾಣಿ, ಎಲ್.ಎನ್.ನಾಗರಾಜ್, ಎಸ್.ಮುಖೇಶ್ ಕಾರ್ಯನಿರ್ವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]