ವಿವಿಧ ಹಬ್ಬಗಳ ಆಚರಣೆ: ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮೂರನೇ ಅಲೆಯ ಹರಡುವಿಕೆಯನ್ನು ತಡೆಗಟ್ಟುವ ಕುರಿತು ರಾಜ್ಯ ಸರ್ಕಾರವು 2021ರ ಆಗಸ್ಟ್ 12ರಂದು ಹೊರಡಿಸಿರುವ ಮಾರ್ಗಸೂಚಿಯಂತೆ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಸಾಮಾಜಿಕ, ರಾಜಕೀಯ,‌ ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು ಮತ್ತು ಬೃಹತ್ ಸಭೆಗಳಿಗೆ ಅನುಮತಿ ಇಲ್ಲವೆಂದು ಆದೇಶಿಸಿರುವ ಹಿನ್ನೆಲೆ, 2021ನೇ ವರ್ಷದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತು ಇತರೆ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಕೋವಿಡ್-19 ಮಾರ್ಗಸೂಚಿಗಳು ಹೊರಡಿಸಲಾಗಿದ್ದು, ಜಿಲ್ಲೆಯ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಮೊಹರಂ ಹಬ್ಬವನ್ನು ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು/ ಪಂಜಾವನ್ನು ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ ಹಾಗೂ 2021ರ ಆಗಸ್ಟ್ 12ರಿಂದ 20 ರವರೆಗೆ ಜಿಲ್ಲೆಯಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದ್ದು, ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು.

ಪಂಜ , ಆಲಂ ಮತ್ತು ತಾಜಿಯತ್‌ಗಳನ್ನು ಸಾರ್ವಜನಿಕರು ಮುಟ್ಟದ ದೂರದಿಂದ ನೋಡತಕ್ಕದು.ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ, ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದ್ದು, ಖಬರಸ್ಥಾನ್‌ಗಳಿಗೆ ಕೇವಲ ದಫನ ಮಾಡಲು ಮಾತ್ರ ಅನುಮತಿ ನೀಡಲಾಗಿದೆ ಹಾಗೂ ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದು.

ಕೋವಿಡ್ -19 ಸಮುಚಿತ ವರ್ತನೆಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ, ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು.ಕೋವಿಡ್ -19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳತಕ್ಕದ್ದು ಹಾಗೂ ಕೈಗಳನ್ನು ಸೋಪು ಮತ್ತು ಸಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು ಹಾಗೂ ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು.

ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟುಬೇಕು. ಆಡಳಿತ ಮಂಡಳಿ/ ಮುತವಲ್ಲಿ/ ಆಡಳಿತಾಧಿಕಾರಿ ಇವರು ಭಕ್ತಾದಿಗಳು ಕುಳಿತುಕೊಳ್ಳುವ ಗರಿಷ್ಠ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಬೇಕು.ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು ಹಾಗೂ ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.

ಮಸೀದಿಗಳನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ.ಮೊಹರಂ ಪಯುಕ್ತ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಮಳಗಳಲ್ಲಿ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಹಾಗೂ ಭಕ್ತಾದಿಗಳ ಕೆಲಸ ಕಾರ್ಯದ ಕುರಿತು ಧ್ವನಿ ವರ್ಧಕದ ಮೂಲಕ ಸೂಚಿಸಬೇಕು.

ಗಣೇಶ ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳು: ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್,‌ ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ – ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ,‌ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಹಾಗೂ ಪಾರಂಪರಿಕ ಗೌರಿ – ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು  ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ , ಕಲ್ಯಾಣಿ, ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ, ಸ್ಯಾನಿಟೈಸೇಷನ್ ಮಾಡಬೇಕು  ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್ ಸ್ರ್ಕೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು.

ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್ -19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಗಣೇಶೋತ್ಸವ ಆಚರಣೆ ಕಾಲಕ್ಕೆ, ಸಂದರ್ಭಕ್ಕೆ ಅನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ಕೋವಿಡ್ -19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ , ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ , ಅಗ್ನಿಶಾಮಕ ಇಲಾಖೆ , ಜಿಲ್ಲಾಡಳಿತ ಹಾಗೂ ಇತರೆ ‘ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು / ಮಾರ್ಗಸೂಚಿಗಳು, ಪ್ರಾಮಾಣಿತ ಕಾರ್ಯವಿಧಾನ(SOP)ಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

2021ರ‌ ಆಗಸ್ಟ್ 06ರ ಮಾರ್ಗಸೂಚಿಯಲ್ಲಿ ಮನೋರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ – ಸಮಾರಂಭಗಳನ್ನು ನಿಷೇಧಿಸಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ, ಸಮಾರಂಭಗಳಿಗೆ ಅನುಮತಿ‌ ನೀಡದೆ ಇರುವುದರಿಂದ ಈ ಎಲ್ಲ ಹಬ್ಬಗಳ ಸಂದರ್ಭದಲ್ಲಿ ಯಾವುದೇ ವಿಧದ ಮೆರವಣಿಗೆಯನ್ನು ಜನರ ಒಗ್ಗೂಡುವಿಕೆಯನ್ನು ಮಾಡತಕ್ಕದ್ದಲ್ಲ.

ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಮೊಹರಂ ಮತ್ತು ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 50 ರಿಂದ 60 ರನ್ವಯ ಮತ್ತು ಭಾರತ ದಂಡ ಸಂಹಿತೆಯ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳಡಿಯಲ್ಲಿ ಶಿಸ್ತು ಕ್ರಮವನ್ನು ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!