ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ ಅವರಿಗೆ ಗೌರವ ಸಮರ್ಪಣೆ / ಸ್ವಾತಂತ್ರ್ಯ ಯೋಧರು ನಮ್ಮೆಲ್ಲರ ಭಾಗ್ಯ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಬ್ರಿಟಿಷರ ವಿರುದ್ಧ ಹೋರಾಡಿ ದೇಶವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ತ್ಯಾಗ ಬಲಿದಾನಗಳ ವಿಚಾರಗಳನ್ನು   ಇಂದಿನ ಯುವಪೀಳಿಗೆ ಮಾದರಿಯಾಗಿ ಸ್ವೀಕರಿಸಿ ಬಲಿಷ್ಠ ಭಾರತ ನಿರ್ಮಾಣಕ್ಕೆ ತಮ್ಮ ಶ್ರಮವನ್ನು ವಿನಿಯೋಗಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸಲಹೆ ಮಾಡಿದರು.

75 ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ  ಅಂಗವಾಗಿ  ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ನಾಗಪ್ಪ ಅವರನ್ನು  ಅವರ ಸ್ವಗೃಹದಲ್ಲಿ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಿ ಗೌರವ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವೇ ಅತ್ಯಂತ ರೋಚಕ ಮತ್ತು ಪ್ರೇರಣದಾಯಕವಾಗಿದೆ. ಈ ಸಂಗ್ರಾಮದಲ್ಲಿ  ಅವಿರತ ಹೋರಾಟ ಮಾಡಿ  ಸಾವಿರಾರು ದೇಶಪ್ರೇಮಿಗಳು ತಮ್ಮ ಇಡೀ ಬದುಕನ್ನೇ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಪರಕೀಯರ ದಾಸ್ಯದ ಕಪಿಮುಷ್ಠಿಯಿಂದ ದೇಶವನ್ನು ಬಿಡುಗಡೆ ಮಾಡಲು ಹಾಗೂ ದೇಶದ ಎಲ್ಲಾ ಪ್ರಜೆಗಳು ಸ್ವತಂತ್ರವಾಗಿ ಜೀವನ ಮಾಡಲು ಲೆಕ್ಕವಿಲ್ಲದಷ್ಟು ತ್ಯಾಗ ಬಲಿದಾನಗಳು ಆಗಿ ಹೋಗಿವೆ. ಇವೆಲ್ಲವನ್ನೂ ಯುವಪೀಳಿಗೆ ಗಂಭೀರವಾಗಿ ಪರಿಗಣಿಸಿ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಶದ ಋಣವನ್ನು ತೀರಿಸಬೇಕು. ಈ ಹಿಂದೆ ನಮ್ಮ ಹಿರಿಯರು ದೇಶಭಕ್ತಿಯ ಬದ್ಧತೆಯಿಂದ ಬ್ರಿಟಿಷರ ವಿರುದ್ಧ ಹೋರಾಟ ಮಾಡದೇ ಇದ್ದಿದ್ದರೆ ಇಂದಿಗೂ ಪರಕೀಯರ ಗುಲಾಮರಾಗಿಯೇ ಇರಬೇಕಾದ ಪರಿಸ್ಥಿತಿ ಇರುತ್ತಿತ್ತು. ಆದರೆ, ಅಂದಿನ ಹಿರಿಯರಲ್ಲಿ ಅನೇಕರು  ಇವೆಲ್ಲವನ್ನೂ ಮನಗಂಡು ತಮ್ಮ ವೈಯಕ್ತಿಕ ಜೀವನವನ್ನು ಸಂಪೂರ್ಣವಾಗಿ ಬದಿಗಿಟ್ಟು ಹಗಲಿರುಳು ದೇಶಸೇವೆ ಮಾಡಿದ್ದಾರೆ. ಅವರು ಮಾಡಿರುವ ಮಹತ್ಕಾರ್ಯಕ್ಕೆ ಎಂದೆಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಸ್ವಾತಂತ್ರ್ಯ ಸೇನಾನಿಗಳಲ್ಲಿ ಇಂದು ಬೆರಳೆಣಿಕೆಯಷ್ಟು ಮಂದಿಯಷ್ಟೇ ನಮ್ಮ ಮಧ್ಯೆ ಇದ್ದಾರೆ. ಅವರನ್ನು ಕಾಣುವ, ಅವರೊಂದಿಗೆ ಮಾತನಾಡುವುದು ನಮ್ಮೆಲ್ಲರ ಪುಣ್ಯ ಮತ್ತು ಹೆಮ್ಮೆಯಾಗಿದೆ. ಇಂದಿನ ಯುವಪೀಳಿಗೆಗೆ ಅವರ ಅನುಭವ, ತತ್ವಾದರ್ಶಗಳ ಜೊತೆಗೆ ದೇಶಪ್ರೇಮದ ಸಂದೇಶಗಳು ಉತ್ತಮ ಭವಿಷ್ಯ ಮತ್ತು ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಪಾಠಗಳಾಗಬೇಕು. ಜಿಲ್ಲಾಡಳಿತ ಸದಾ ಸ್ವಾತಂತ್ರ್ಯ ಹೋರಾಟಗಾರರ ಹಿತಕಾಯುವಲ್ಲಿ ಬದ್ಧವಾಗಿರುತ್ತದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ, ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಅವಿಭಜಿತ ಕೋಲಾರ ಜಿಲ್ಲೆಯ ಪಾತ್ರ ಹೆಚ್ಚಾಗಿದೆ. ಭಕ್ತರಹಳ್ಳಿಯಲ್ಲಿ ದೇಶಪ್ರೇಮಿಗಳ ವಿರುದ್ಧ ಗೋಲಿಬಾರ್ ಆದಂತಹ ಸಂದರ್ಭದಲ್ಲಿ ಮಳ್ಳೂರು ಜಿ.ಪಾಪಣ್ಣನವರ ನಾಯಕತ್ವದಲ್ಲಿ ಅನೇಕರು ಬ್ರಿಟಿಷರಿಗೆ ಸೆಡ್ಡು ಹೊಡೆದರು. ಆ ಸಂದರ್ಭದಲ್ಲಿ ರೈಲು ಹಳಿಗಳನ್ನು ಕಿತ್ತೊಗೆದು  ರಸ್ತೆಗಳ ಸಂಪರ್ಕಗಳನ್ನು ಕಡಿತಗೊಳಿಸಲಾಗಿತ್ತು. ಇದಕ್ಕೆ ಬ್ರಿಟಿಷರು ತುಂಬಾ ಕ್ರೌರ್ಯತನದ ಉತ್ತರ ನೀಡಿ ನಮ್ಮ ಅನೇಕ ಜನ ಸಹ ಹೋರಾಟಗಾರರನ್ನು ಜೈಲಿಗೆ ಅಟ್ಟಿದ್ದರು ಮತ್ತು ಕಾಡುಗಳಲ್ಲಿ ಬಿಟ್ಟು ಬಂದಿದ್ದರು. ಆದರೂ ಜಗ್ಗಲಿಲ್ಲ. ಭಕ್ತರಹಳ್ಳಿಯಲ್ಲಿ ಅಂದಿನ ಪೊಲೀಸರ ಬಂದೂಕಿಗೆ ಇಬ್ಬರು ಬಲಿಯಾದರು ಎಂದು ತಮ್ಮ ದಶಕಗಳ ನೆನಪಿನ ಬುತ್ತಿಯನ್ನು ಮೆಲುಕು ಹಾಕಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರ ಕಾರ್ಯವೈಖರಿ ಬಗ್ಗೆ ಮಳ್ಳೂರು ನಾಗಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿಯೂ ಉತ್ತಮ ಜನಪರ ಕೆಲಸಗಳನ್ನು ಮಾಡಬೇಕೆಂದು ಸಲಹೆ ನೀಡಿದರು. ನೀವು   ನನ್ನ  ಕುಟುಂಬದ  ಸದಸ್ಯರಂತೆ ಇದ್ದು,  ಬಡವರು ಮತ್ತು ಅಸಹಾಯಕರು ದುರ್ಬಲ ವರ್ಗಗಳ ಪರವಾದ ಕೆಲಸ ಮಾಡುತ್ತಿರುವುದರಿಂದ ನನ್ನ 

ಕುಟುಂಬದ ಸದಸ್ಯರ ಮೇಲಿರುವ ಆತ್ಮೀಯತೆ,ಪ್ರೀತಿ ನಿಮ್ಮ‌ಮೇಲಿದ್ದು ನೀವು ನನ್ನ ಮೊಮ್ಮಗಳಿದ್ದಂತೆ ಎಂದು ಹಸನ್ಮುಖಿಯಾದರು. ನಿಮ್ಮ ಮೇಲೆ 

ಆತ್ಮೀಯತೆ ಇರುವುದರಿಂದ ಹಾಗೂ ಹಿರಿಯನೆಂಬ ಸಲುಗೆ ತೆಗೆದುಕೊಂಡು ಕಿವಿಮಾತು  ಹೇಳುತ್ತಿದ್ದು  ತಪ್ಪು  ತಿಳಿಯುವುದು ಬೇಡ ಎಂದು ಹಲವು ಸಕಾರಾತ್ಮಕ ಸಲಹೆಗಳನ್ನು ನೀಡಿದರು. .  

ಇದೇ ವೇಳೆ ಜಿಲ್ಲಾಧಿಕಾರಿ ಆರ್.ಲತಾ ಅವರು ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಅವರ ಆಶೀರ್ವಾದ ಪಡೆಯುವ ಜೊತೆಗೆ ಅವರ ಕುಶಲೋಪರಿ ವಿಚಾರಿಸಿದರು  ಹಾಗೂ ಸ್ವಾತಂತ್ರ್ಯ ಯೋಧರು ದೇಶದ ಮತ್ತು ಸಮಾಜದ ಅತ್ಯಮೂಲ್ಯ ಆಸ್ತಿಯಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಕಿರಿಯರಿಗೆ ಸಲಹೆ, ಮಾರ್ಗದರ್ಶನ ನೀಡುತ್ತಿರಬೇಕು ಎಂದು ಮನವಿ ಮಾಡಿದರು.  

ಈ ಸಂದರ್ಭದಲ್ಲಿ  ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ತಹಸೀಲ್ದಾರ್ ರಾಜೀವ್, ತಾ.ಪಂ.ಇಒ ಚಂದ್ರಕಾಂತ್ ಹಾಗೂ ನಾಗಪ್ಪ ಅವರ ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!