ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಅಧಿಸೂಚನೆ ಪ್ರಕಟ / ನಗರಸಭೆಗೆ ಕೂಡಿಬಂದ ಚುನಾವಣೆ ಭಾಗ್ಯ / ರಾಜಕೀಯ ಚಟುವಟಿಕೆಗಳು ತೀವ್ರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸೆಪ್ಟಂಬರ್ 3ರಂದು ದಿನಾಂಕ ನಿಗದಿ ಪಡಿಸಿದ್ದು, ಚುನಾವಣೆ ಅಧಿಕಾರಿಗಳು ಇಂದು ಅಧಿಸೂಚನೆ‌ ಪ್ರಕಟಿಸುವ ಮೂಲಕ ಚುನಾವಣೆ ನಡೆಸಲು ಇದ್ದ ಆತಂಕಗಳು, ಅನುಮಾನಗಳು ನಿವಾರಣೆಯಾದಂತಾಗಿವೆ.

ಚುನಾವಣೆಗಿದ್ದ ಅಡೆತಡೆಗಳ ನಿವಾರಣೆ: ನಗರಸಭೆಯ ಸದಸ್ಯರ ಅಧಿಕಾರಾವಧಿ 2019ರ ಮಾ.12ರ ಸಂಜೆ ಮುಕ್ತಾಯವಾಗಿ, ನಗರಸಭೆ ಈಗ ಆಡಳಿತಾಧಿಕಾರಿಗಳ ಸುಪರ್ದಿನಲ್ಲಿದೆ. 2 ವರ್ಷ 5ತಿಂಗಳಾಗಿದ್ದರೂ ಚುನಾವಣೆಗೆ ಕಾಲ ಕೂಡಿ ಬಂದಿರಲಿಲ್ಲ. ವಾರ್ಡ್ ಗಳ ಗಡಿ ನಿಗದಿ, ವಾರ್ಡ್ ಗಳ ಮೀಸಲಾತಿ ಅಂತಿಮಗೊಳಿಸಿದ್ದರೂ ಸಹ ಇದು ಸರಿ ಇಲ್ಲ ಎನ್ನುವುದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆಹೋದ ಕಾರಣದಿಂದಾಗಿ ನಗರಸಭಾ ಚುನಾವಣೆ ವಿಳಂಬವಾಗುತ್ತಲೇ ಬರುತ್ತಿತ್ತು.

ಈ ಹಿಂದೆ ನಗರಸಭೆಗೆ ಚುನಾವಣಾ ಆಯೋಗದಿಂದ ಏ.27 ರಂದು ಚುನಾವಣೆ ನಡೆಸಲು, ಮಾರ್ಚ್ 29ರಂದು ವೇಳಾಪಟ್ಟಿಯ ಪ್ರಕಟಣೆ ಹೊರಡಿಸಲಾಗಿತ್ತು. ನಂತರ ಸಂಜೆ ವೇಳೆಗೆ ತಾಂತ್ರಿಕ ಕಾರಣ ನೀಡಿ ಚುನಾವಣೆ ವೇಳಾಪಟ್ಟಿಯನ್ನು ಹಿಂದಕ್ಕೆ ಪಡೆದು ಆದೇಶ ಹೊರಡಿಸಿತ್ತು.

ವಾರ್ಡ್ ಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಜಿ.ಎಸ್.ಸೋಮರುದ್ರಶರ್ಮ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೆಲ್ಲವು ಇತ್ಯರ್ಥವಾಗಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೆ ಬಂತು. ಈಗ ವಾರ್ಡ್ ತಕರಾರು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಕರೇನಹಳ್ಳಿ ಗಡಿಗೆ ಸಂಬಂದಿಸಿದಂತೆ ಈ ಹಿಂದಿನ ಮತದಾರರ ಪಟ್ಟಿಯನ್ನು ಪುರಸ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಚುನಾವಣೆಗೆ ಇದ್ದ ಆತಂಕಗಳು ನಿವಾರಣೆಯಾದಂತಾಗಿದೆ.

ತೀವ್ರವಾದ ರಾಜಕೀಯ ಚಟುವಟಿಕೆಗಳು: ಡಿಸೆಂಬರ್‌ವರೆಗೂ ಯಾವುದೇ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ರಾಜ್ಯದಲ್ಲಿ ಶಾಲಾ ಕಾಲೇಜು, ವಾಣಿಜ್ಯ ವ್ಯವಹಾರಗಳಿಗೆ ಕರೊನಾ ಅನ್‌ಲಾಕ್ ಮಾಡಿರುವ ರಾಜ್ಯ ಸರ್ಕಾರಕ್ಕೆ ಚುನಾವಣೆ ನಡೆಸಲು ಏನು ಅಡ್ಡಿ ಎಂದು  ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ  ಹಿನ್ನಲೆಯಲ್ಲಿ ಜರೂರಾಗಿ ಚುನಾವಣೆ ದಿನಾಂಕ ಪ್ರಕಟವಾಗಿದೆ.

ಯಾವ ಸಮಯದಲ್ಲದಾರೂ ಚುನಾವಣೆ ನಡೆಯಬಹುದೆಂಬ ನಿರೀಕ್ಷೆಯಿಂದ ವಿವಿಧ ರಾಜಕೀಯ ಪಕ್ಷಗಳಲ್ಲಿ ಆಕಾಂಕ್ಷಿಗಳ ಸಭೆಗಳನ್ನು ನಡೆಸಲಾಗುತ್ತಿತ್ತು. ವಿವಿಧ ರಾಜಕೀಯ ಮುಖಂಡರು ತಮ್ಮ ಪಕ್ಷಗಳನ್ನು ಬದಲಾಯಿಸಿ ಇತರೆ ಪಕ್ಷಗಳಿಗೆ ಸೇರ್ಪಡೆಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ವಾರ್ಡ್ಗಳ ಮೀಸಲಾತಿಯನ್ವಯ ತಾವು ಸ್ಪರ್ಧಿಸುವ ವಾರ್ಡ್ ಗಳಿಗೆ ಭೇಟಿ ನೀಡಿ ಮತದಾರರನ್ನು ಓಲೈಸುವುದು, ವಾರ್ಡ್ ಗಳು ತಮಗೊಪ್ಪದಿದ್ದರೆ ನಿರಾಶರಾಗುತ್ತಿರುವುದು ನಡೆಯುತ್ತಿದೆ.ಈಗ ನಗರಸಭೆ ಚುನಾವಣೆ ಘೋಷಣೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…… 

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!