ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಅಧಿಸೂಚನೆ ಪ್ರಕಟ / ನಗರಸಭೆಗೆ ಕೂಡಿಬಂದ ಚುನಾವಣೆ ಭಾಗ್ಯ / ರಾಜಕೀಯ ಚಟುವಟಿಕೆಗಳು ತೀವ್ರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸೆಪ್ಟಂಬರ್ 3ರಂದು ದಿನಾಂಕ ನಿಗದಿ ಪಡಿಸಿದ್ದು, ಚುನಾವಣೆ ಅಧಿಕಾರಿಗಳು ಇಂದು ಅಧಿಸೂಚನೆ‌ ಪ್ರಕಟಿಸುವ ಮೂಲಕ ಚುನಾವಣೆ ನಡೆಸಲು ಇದ್ದ ಆತಂಕಗಳು, ಅನುಮಾನಗಳು ನಿವಾರಣೆಯಾದಂತಾಗಿವೆ.

ಚುನಾವಣೆಗಿದ್ದ ಅಡೆತಡೆಗಳ ನಿವಾರಣೆ: ನಗರಸಭೆಯ ಸದಸ್ಯರ ಅಧಿಕಾರಾವಧಿ 2019ರ ಮಾ.12ರ ಸಂಜೆ ಮುಕ್ತಾಯವಾಗಿ, ನಗರಸಭೆ ಈಗ ಆಡಳಿತಾಧಿಕಾರಿಗಳ ಸುಪರ್ದಿನಲ್ಲಿದೆ. 2 ವರ್ಷ 5ತಿಂಗಳಾಗಿದ್ದರೂ ಚುನಾವಣೆಗೆ ಕಾಲ ಕೂಡಿ ಬಂದಿರಲಿಲ್ಲ. ವಾರ್ಡ್ ಗಳ ಗಡಿ ನಿಗದಿ, ವಾರ್ಡ್ ಗಳ ಮೀಸಲಾತಿ ಅಂತಿಮಗೊಳಿಸಿದ್ದರೂ ಸಹ ಇದು ಸರಿ ಇಲ್ಲ ಎನ್ನುವುದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆಹೋದ ಕಾರಣದಿಂದಾಗಿ ನಗರಸಭಾ ಚುನಾವಣೆ ವಿಳಂಬವಾಗುತ್ತಲೇ ಬರುತ್ತಿತ್ತು.

ಈ ಹಿಂದೆ ನಗರಸಭೆಗೆ ಚುನಾವಣಾ ಆಯೋಗದಿಂದ ಏ.27 ರಂದು ಚುನಾವಣೆ ನಡೆಸಲು, ಮಾರ್ಚ್ 29ರಂದು ವೇಳಾಪಟ್ಟಿಯ ಪ್ರಕಟಣೆ ಹೊರಡಿಸಲಾಗಿತ್ತು. ನಂತರ ಸಂಜೆ ವೇಳೆಗೆ ತಾಂತ್ರಿಕ ಕಾರಣ ನೀಡಿ ಚುನಾವಣೆ ವೇಳಾಪಟ್ಟಿಯನ್ನು ಹಿಂದಕ್ಕೆ ಪಡೆದು ಆದೇಶ ಹೊರಡಿಸಿತ್ತು.

ವಾರ್ಡ್ ಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಜಿ.ಎಸ್.ಸೋಮರುದ್ರಶರ್ಮ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೆಲ್ಲವು ಇತ್ಯರ್ಥವಾಗಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೆ ಬಂತು. ಈಗ ವಾರ್ಡ್ ತಕರಾರು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಕರೇನಹಳ್ಳಿ ಗಡಿಗೆ ಸಂಬಂದಿಸಿದಂತೆ ಈ ಹಿಂದಿನ ಮತದಾರರ ಪಟ್ಟಿಯನ್ನು ಪುರಸ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಚುನಾವಣೆಗೆ ಇದ್ದ ಆತಂಕಗಳು ನಿವಾರಣೆಯಾದಂತಾಗಿದೆ.

ತೀವ್ರವಾದ ರಾಜಕೀಯ ಚಟುವಟಿಕೆಗಳು: ಡಿಸೆಂಬರ್‌ವರೆಗೂ ಯಾವುದೇ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ರಾಜ್ಯದಲ್ಲಿ ಶಾಲಾ ಕಾಲೇಜು, ವಾಣಿಜ್ಯ ವ್ಯವಹಾರಗಳಿಗೆ ಕರೊನಾ ಅನ್‌ಲಾಕ್ ಮಾಡಿರುವ ರಾಜ್ಯ ಸರ್ಕಾರಕ್ಕೆ ಚುನಾವಣೆ ನಡೆಸಲು ಏನು ಅಡ್ಡಿ ಎಂದು  ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ  ಹಿನ್ನಲೆಯಲ್ಲಿ ಜರೂರಾಗಿ ಚುನಾವಣೆ ದಿನಾಂಕ ಪ್ರಕಟವಾಗಿದೆ.

ಯಾವ ಸಮಯದಲ್ಲದಾರೂ ಚುನಾವಣೆ ನಡೆಯಬಹುದೆಂಬ ನಿರೀಕ್ಷೆಯಿಂದ ವಿವಿಧ ರಾಜಕೀಯ ಪಕ್ಷಗಳಲ್ಲಿ ಆಕಾಂಕ್ಷಿಗಳ ಸಭೆಗಳನ್ನು ನಡೆಸಲಾಗುತ್ತಿತ್ತು. ವಿವಿಧ ರಾಜಕೀಯ ಮುಖಂಡರು ತಮ್ಮ ಪಕ್ಷಗಳನ್ನು ಬದಲಾಯಿಸಿ ಇತರೆ ಪಕ್ಷಗಳಿಗೆ ಸೇರ್ಪಡೆಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ವಾರ್ಡ್ಗಳ ಮೀಸಲಾತಿಯನ್ವಯ ತಾವು ಸ್ಪರ್ಧಿಸುವ ವಾರ್ಡ್ ಗಳಿಗೆ ಭೇಟಿ ನೀಡಿ ಮತದಾರರನ್ನು ಓಲೈಸುವುದು, ವಾರ್ಡ್ ಗಳು ತಮಗೊಪ್ಪದಿದ್ದರೆ ನಿರಾಶರಾಗುತ್ತಿರುವುದು ನಡೆಯುತ್ತಿದೆ.ಈಗ ನಗರಸಭೆ ಚುನಾವಣೆ ಘೋಷಣೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…… 

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]