ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ ಕಲಂ 25 ರನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‘ಬಿ’ ಪ್ರವರ್ಗದ 06 ಮತ್ತು ‘ಸಿ’ ಪ್ರವರ್ಗದ 16 ಒಟ್ಟು 22 ಅಧಿಸೂಚಿತ ದೇವಾಲಯಗಳಿಗೆ ಮೂರು ವರ್ಷಗಳ ಅವಧಿಗೆ 9 ಜನ ಸದಸ್ಯರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾಧಿಗಳು / ಸಾರ್ವಜನಿಕರಿಂದ ಆಹ್ವಾನಿಸಲಾಗಿದ್ದ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವರ್ಗ ‘ಬಿ’ ದೇವಾಲಯಗಳಾದ ದೊಡ್ಡಬಳ್ಳಾಪುರದ ತೇರಿನ ಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ, ನೆಲಮಂಗಲ ತಾಲ್ಲೂಕಿನ ದೇವರ ಹೊಸಹಳ್ಳಿಯ ಶ್ರೀ ವೀರಭದ್ರಸ್ವಾಮಿ ದೇವಾಲಯ, ಮಹಿಮಾಪುರದ ಶ್ರೀ ಮಹಿಮಾ ವೆಂಕಟರಮಣಸ್ವಾಮಿ ದೇವಾಲಯ.
ಪ್ರವರ್ಗ ‘ಸಿ’ ದೇವಾಲಯಗಳಾದ ಹೊಸಕೋಟೆ ತಾಲ್ಲೂಕಿನ ಹೊಸಕೋಟೆ ಟೌನ್ ನಲ್ಲಿರುವ ಶ್ರೀ ಕಾಶಿವಿಶ್ವೇಶ್ವರಸ್ವಾಮಿ ದೇವಾಲಯ, ಶ್ರೀ ಖಿಲ್ಲೇ ಆಂಜನೇಯ ಸ್ವಾಮಿ ದೇವಾಲಯ, ಅನುಗೊಂಡನಹಳ್ಳಿ ಹೋಬಳಿಯ ಕಲ್ಕುಂಟೆ ಅಗ್ರಹಾರದಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯ, ಜಡಿಗೇನಹಳ್ಳಿ ಹೋಬಳಿಯ ಜಡಿಗೇನಹಳ್ಳಿಯಲ್ಲಿರುವ ಶ್ರೀ ಬೈರೇದೇವರು ದೇವಾಲಯ, ಸೂಲಿಬೆಲೆ ಹೋಬಳಿಯ ಈಸ್ತೂರಿನಲ್ಲಿರುವ ಶ್ರೀ ಚನ್ನರಾಯಸ್ವಾಮಿ ದೇವಾಲಯ, ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಕಾರಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯ, ನೆಲಮಂಗಲ ತಾಲ್ಲೂಕಿನ ನೆಲಮಂಗಲ ಟೌನ್ ನಲ್ಲಿರುವ ಶ್ರೀ ಕಾಶೀವಿಶ್ವೇಶ್ವರ ದೇವಾಲಯ, ಸೋಂಪುರ ಹೋಬಳಿಯ ಹಳೇನಿಜಗಲ್ಲಿನಲ್ಲಿರುವ ಶ್ರೀ ಉದ್ದಾನ ವೀರಭದ್ರಸ್ವಾಮಿ ದೇವಾಲಯ, ತ್ಯಾಮಗೊಂಡ್ಲು ಹೋಬಳಿಯ ತಡಸೀಘಟ್ಟದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ, ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯ, ಕಸಬಾ ಹೋಬಳಿಯ ರಾಜಘಟ್ಟ (ಅಮಾನಿಕೆರೆ)ದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ, ತೂಬಗೆರೆಯಲ್ಲಿರುವ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಅಧಿನಿಯಮ 2011ರ ಕಲಂ 25ರನ್ವಯ ಮೇಲ್ಕಂಡ ‘ಬಿ’ ಪ್ರವರ್ಗದ 03 ಮತ್ತು ‘ಸಿ’ ಪ್ರವರ್ಗದ 12 ಒಟ್ಟು 15 ಅಧಿಸೂಚಿತ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಗಳನ್ನು ರಚಿಸಲು ನಿಗದಿತ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾಗದೆ ಇರುವುದರಿಂದ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ಈ ದೇವಾಲಯಗಳ ವ್ಯವಸ್ಥಾಪನಾ ಸಮಿತಿಗೆ ಕನಿಷ್ಟ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾಧಿಗಳು/ ಸಾರ್ವಜನಿಕರು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ-1 (ಬಿ) (22ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ 2021ರ ಆಗಸ್ಟ್ 31ರೊಳಗೆ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ 05, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ನ ಪದನಿಮಿತ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……