ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು – ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಇಂದಿನ ಜಾಗತಿಕ ಯುಗದಲ್ಲಿ  ಉದ್ಯೋಗವಕಾಶಗಳು ವಿಪುಲವಾಗಿವೆ. ಆದರೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಹಾಗೂ ಅಗತ್ಯ ಶಿಕ್ಷಣ ಹೊಂದಿದವರಿಗೆ ತಕ್ಷಣವೇ ಉದ್ಯೋಗಾವಕಾಶಗಳು ದೊರೆಯಲಿದ್ದು, ನಮ್ಮ ಶೈಕ್ಷಣಿಕ ಆಯ್ಕೆ ಇದಕ್ಕೆ ಪೂರಕವಾಗಿರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ತಿಳಿಸಿದರು.

ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ  ಎಸ್‌ಎಸ್‌ಎಲ್‌ಸಿ ನಂತರ ಮುಂದೇನು -ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಮೊದಲಾದ ಸಾಂಪ್ರದಾಯ ಶಿಕ್ಷಣಕ್ಕೆ ವಿದ್ಯಾರ್ಥಿಗಳು ದಾಖಲಾಗುವುದು ಸಹಜ. ತಮ್ಮ ಸಹಪಾಠಿ ತೆಗೆದುಕೊಂಡ ಎಂದು ಅಥವಾ ಪೋಷಕರ ಒತ್ತಾಯದಿಂದ ತಮಗಿಷ್ಟವಿರದೇ ಇರುವ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡು, ಮುಂದೆ ಪರಿತಪಿಸುವ ಉದಾಹರಣೆಗಳು ಸಹ ಸಾಕಷ್ಟಿವೆ. ಎಲ್ಲರೂ ಒಂದೇ ತೆರೆದ ಶಿಕ್ಷಣ ಪಡೆದರೆ ಸಹಜವಾಗಿ ಸ್ಪರ್ಧೆ ಏರ್ಪಡುತ್ತದೆ. ಈ ದಿಸೆಯಲ್ಲಿ ನಮ್ಮ ಆಯ್ಕೆ ವಿಭಿನ್ನವಾಗಿ ನಮ್ಮ ಆಸಕ್ತಿಗೆ ತಕ್ಕಂತೆ ಇರಬೇಕು. ಎಸ್‌ಎಸ್‌ಎಲ್‌ಸಿ ನಂತರ, ಐಟಿಐ, ವಿವಿಧ ವಿಷಯಗಳ ಡಿಪ್ಲೋಮೋ ಕೋರ್ಸ್ಗಳು ಸಾಕಷ್ಟಿವೆ. ಇವುಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. 

ಕೊವಿಡ್ ಸಂಕಷ್ಟದ ಎರಡು ವರ್ಷಗಳಿಂದ  ಶಿಕ್ಷಣ, ವಾಣಿಜ್ಯ ಮೊದಲಾದ ಹಲವಾರು ಕ್ಷೇತ್ರಗಳು ನಷ್ಟ ಅನುಭವಿಸಿವೆ. ಆದರೆ ವೈದ್ಯಕೀಯ ಕ್ಷೇತ್ರ ಹಿಂದೆಂದಿಗಿಂತಲೂ ಸಕ್ರಿಯವಾಗಿರುವ ಸಂದರ್ಭ ಎದುರಾಗಿದೆ. ಈ ದಿಸೆಯಲ್ಲಿ ಪ್ಯಾರಾಮೆಡಿಕಲ್ ಕೋರ್ಸ್ಗಳನ್ನು ಮಾಡಿಕೊಳ್ಳುವವರಿಗೆ ವಿಪುಲ ಉದ್ಯೋಗವಕಾಶಗಳಿವೆ. ಕೈಗಾರಿಕಾ ಪ್ರದೇಶಗಳು ಹೆಚ್ಚಾಗುತ್ತಿದ್ದು, ಇಲ್ಲಿ ಐಟಿಐ, ಡಿಪ್ಲೋಮೋ ಮಾಡಿದವರಿಗೆ ಉದ್ಯೋಗವಕಾಶಗಳಿವೆ. ಇದರಲ್ಲಿ ನಿಮ್ಮ ಸಾಮರ್ಥ್ಯ ತೋರಿಸಿದರೆ ಹೆಚ್ಚಿನ ಉತ್ತೇಜನ ನೀಡಿ, ಹಂತಹಂತವಾಗಿ ಮೇಲೇರಬಹುದಾಗಿದೆ ಎಂದು ತಿಳಿಸಿದರು.

ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹುತೇಕ ಯುವಕರು ಪದವಿಗಳನ್ನು ಪಡೆದು  ಕೌಶಲ್ಯವಿಲ್ಲದ ಕಾರಣ ಉದ್ಯೋಗದ ಸಮಸ್ಯೆ ಎದುರಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಹಂತದಲ್ಲಿಯೇ ತಾವು ಮುಂದೆ ಏನಾಗಬೇಕೆಂಬ ಗುರಿ ಇಟ್ಟುಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ.ಒಲಂಪಿಕ್ಸ್ನಲ್ಲಿ ಪದಕ ಗೆದ್ದ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧು 1ನೇ ತರಗತಿಯಿಂದಲೇ ಬ್ಯಾಡ್ಮಿಂಟನ್ ಆಟದಲ್ಲಿ ಆಸಕ್ತಿ ಮೂಡಿಸಿಕೊಂಡಿದ್ದರು.

ಕ್ರೀಡಾಪಟುಗಳಾದ, ಮೀರಾಬಾಯಿ ಚಾನು ತೂಕ ಎತ್ತುವುದರಲ್ಲಿ ನಿಸ್ಸೀಮರಾಗಿದ್ದರಿಂದ ಅವರ ಪ್ರತಿಭೆ ಗುರುತಿಸಲಾಯಿತು. ಯಾವುದೂ ಅಸಾಧ್ಯವಲ್ಲ. ಆದರೆ ಕೌಶಲ್ಯ ಹಾಗೂ ಸಾಧನೆಯ ಶ್ರಮ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ. ಎಸ್‌ಎಸ್‌ಎಲ್‌ಸಿ ನಂತರ ಪ್ಯಾರಾಮೆಡಿಕಲ್ ಕೋರ್ಸ್ ಮಾಡಿಕೊಂಡರೆ ಉದ್ಯೋಗ ಕಟ್ಟಿಟ್ಟ ಬುತ್ತಿ. ಇದರಲ್ಲಿ ನರ್ಸಿಂಗ್, ಲ್ಯಾಬ್ ಟೆಕ್ನೀಷಿಯನ್, ಓಟಿ ಟೆಕ್ನೀಷಿಯನ್,ಎಕ್ಸ್-ರೇ, ಆಪ್ತಾಮಾಲಾಜಿಸ್ಟ್ ಮೊದಲಾದ ಕೋರ್ಸ್ಗಳಿವೆ. ಬಿಬಿಎಂಪಿ ಮೊದಲಾಗಿ ಮುನಿಸಿಪಲ್ ಕಚೇರಿಗಳಲ್ಲಿ ಆರೋಗ್ಯ ನಿರೀಕ್ಷಕರಾಗುವ ಅವಕಾಶಗಳಿವೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಇ.ಎಚ್.ಎಸ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಪ್ರಾಂಶುಪಾಲ ರಾಮಮೂರ್ತಿ,  ಅನಿಕೇತನ ಟ್ರಸ್ಟಿನ ಎನ್.ಎಂ.ನಟರಾಜ್, ಉಪನ್ಯಾಸಕ ಎಂ.ಸಿ.ಮಂಜುನಾಥ್, ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!