ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು – ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಇಂದಿನ ಜಾಗತಿಕ ಯುಗದಲ್ಲಿ  ಉದ್ಯೋಗವಕಾಶಗಳು ವಿಪುಲವಾಗಿವೆ. ಆದರೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಹಾಗೂ ಅಗತ್ಯ ಶಿಕ್ಷಣ ಹೊಂದಿದವರಿಗೆ ತಕ್ಷಣವೇ ಉದ್ಯೋಗಾವಕಾಶಗಳು ದೊರೆಯಲಿದ್ದು, ನಮ್ಮ ಶೈಕ್ಷಣಿಕ ಆಯ್ಕೆ ಇದಕ್ಕೆ ಪೂರಕವಾಗಿರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ತಿಳಿಸಿದರು.

ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ  ಎಸ್‌ಎಸ್‌ಎಲ್‌ಸಿ ನಂತರ ಮುಂದೇನು -ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಮೊದಲಾದ ಸಾಂಪ್ರದಾಯ ಶಿಕ್ಷಣಕ್ಕೆ ವಿದ್ಯಾರ್ಥಿಗಳು ದಾಖಲಾಗುವುದು ಸಹಜ. ತಮ್ಮ ಸಹಪಾಠಿ ತೆಗೆದುಕೊಂಡ ಎಂದು ಅಥವಾ ಪೋಷಕರ ಒತ್ತಾಯದಿಂದ ತಮಗಿಷ್ಟವಿರದೇ ಇರುವ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡು, ಮುಂದೆ ಪರಿತಪಿಸುವ ಉದಾಹರಣೆಗಳು ಸಹ ಸಾಕಷ್ಟಿವೆ. ಎಲ್ಲರೂ ಒಂದೇ ತೆರೆದ ಶಿಕ್ಷಣ ಪಡೆದರೆ ಸಹಜವಾಗಿ ಸ್ಪರ್ಧೆ ಏರ್ಪಡುತ್ತದೆ. ಈ ದಿಸೆಯಲ್ಲಿ ನಮ್ಮ ಆಯ್ಕೆ ವಿಭಿನ್ನವಾಗಿ ನಮ್ಮ ಆಸಕ್ತಿಗೆ ತಕ್ಕಂತೆ ಇರಬೇಕು. ಎಸ್‌ಎಸ್‌ಎಲ್‌ಸಿ ನಂತರ, ಐಟಿಐ, ವಿವಿಧ ವಿಷಯಗಳ ಡಿಪ್ಲೋಮೋ ಕೋರ್ಸ್ಗಳು ಸಾಕಷ್ಟಿವೆ. ಇವುಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. 

ಕೊವಿಡ್ ಸಂಕಷ್ಟದ ಎರಡು ವರ್ಷಗಳಿಂದ  ಶಿಕ್ಷಣ, ವಾಣಿಜ್ಯ ಮೊದಲಾದ ಹಲವಾರು ಕ್ಷೇತ್ರಗಳು ನಷ್ಟ ಅನುಭವಿಸಿವೆ. ಆದರೆ ವೈದ್ಯಕೀಯ ಕ್ಷೇತ್ರ ಹಿಂದೆಂದಿಗಿಂತಲೂ ಸಕ್ರಿಯವಾಗಿರುವ ಸಂದರ್ಭ ಎದುರಾಗಿದೆ. ಈ ದಿಸೆಯಲ್ಲಿ ಪ್ಯಾರಾಮೆಡಿಕಲ್ ಕೋರ್ಸ್ಗಳನ್ನು ಮಾಡಿಕೊಳ್ಳುವವರಿಗೆ ವಿಪುಲ ಉದ್ಯೋಗವಕಾಶಗಳಿವೆ. ಕೈಗಾರಿಕಾ ಪ್ರದೇಶಗಳು ಹೆಚ್ಚಾಗುತ್ತಿದ್ದು, ಇಲ್ಲಿ ಐಟಿಐ, ಡಿಪ್ಲೋಮೋ ಮಾಡಿದವರಿಗೆ ಉದ್ಯೋಗವಕಾಶಗಳಿವೆ. ಇದರಲ್ಲಿ ನಿಮ್ಮ ಸಾಮರ್ಥ್ಯ ತೋರಿಸಿದರೆ ಹೆಚ್ಚಿನ ಉತ್ತೇಜನ ನೀಡಿ, ಹಂತಹಂತವಾಗಿ ಮೇಲೇರಬಹುದಾಗಿದೆ ಎಂದು ತಿಳಿಸಿದರು.

ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹುತೇಕ ಯುವಕರು ಪದವಿಗಳನ್ನು ಪಡೆದು  ಕೌಶಲ್ಯವಿಲ್ಲದ ಕಾರಣ ಉದ್ಯೋಗದ ಸಮಸ್ಯೆ ಎದುರಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಹಂತದಲ್ಲಿಯೇ ತಾವು ಮುಂದೆ ಏನಾಗಬೇಕೆಂಬ ಗುರಿ ಇಟ್ಟುಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ.ಒಲಂಪಿಕ್ಸ್ನಲ್ಲಿ ಪದಕ ಗೆದ್ದ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧು 1ನೇ ತರಗತಿಯಿಂದಲೇ ಬ್ಯಾಡ್ಮಿಂಟನ್ ಆಟದಲ್ಲಿ ಆಸಕ್ತಿ ಮೂಡಿಸಿಕೊಂಡಿದ್ದರು.

ಕ್ರೀಡಾಪಟುಗಳಾದ, ಮೀರಾಬಾಯಿ ಚಾನು ತೂಕ ಎತ್ತುವುದರಲ್ಲಿ ನಿಸ್ಸೀಮರಾಗಿದ್ದರಿಂದ ಅವರ ಪ್ರತಿಭೆ ಗುರುತಿಸಲಾಯಿತು. ಯಾವುದೂ ಅಸಾಧ್ಯವಲ್ಲ. ಆದರೆ ಕೌಶಲ್ಯ ಹಾಗೂ ಸಾಧನೆಯ ಶ್ರಮ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ. ಎಸ್‌ಎಸ್‌ಎಲ್‌ಸಿ ನಂತರ ಪ್ಯಾರಾಮೆಡಿಕಲ್ ಕೋರ್ಸ್ ಮಾಡಿಕೊಂಡರೆ ಉದ್ಯೋಗ ಕಟ್ಟಿಟ್ಟ ಬುತ್ತಿ. ಇದರಲ್ಲಿ ನರ್ಸಿಂಗ್, ಲ್ಯಾಬ್ ಟೆಕ್ನೀಷಿಯನ್, ಓಟಿ ಟೆಕ್ನೀಷಿಯನ್,ಎಕ್ಸ್-ರೇ, ಆಪ್ತಾಮಾಲಾಜಿಸ್ಟ್ ಮೊದಲಾದ ಕೋರ್ಸ್ಗಳಿವೆ. ಬಿಬಿಎಂಪಿ ಮೊದಲಾಗಿ ಮುನಿಸಿಪಲ್ ಕಚೇರಿಗಳಲ್ಲಿ ಆರೋಗ್ಯ ನಿರೀಕ್ಷಕರಾಗುವ ಅವಕಾಶಗಳಿವೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಇ.ಎಚ್.ಎಸ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಪ್ರಾಂಶುಪಾಲ ರಾಮಮೂರ್ತಿ,  ಅನಿಕೇತನ ಟ್ರಸ್ಟಿನ ಎನ್.ಎಂ.ನಟರಾಜ್, ಉಪನ್ಯಾಸಕ ಎಂ.ಸಿ.ಮಂಜುನಾಥ್, ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!