ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು – ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಇಂದಿನ ಜಾಗತಿಕ ಯುಗದಲ್ಲಿ  ಉದ್ಯೋಗವಕಾಶಗಳು ವಿಪುಲವಾಗಿವೆ. ಆದರೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಹಾಗೂ ಅಗತ್ಯ ಶಿಕ್ಷಣ ಹೊಂದಿದವರಿಗೆ ತಕ್ಷಣವೇ ಉದ್ಯೋಗಾವಕಾಶಗಳು ದೊರೆಯಲಿದ್ದು, ನಮ್ಮ ಶೈಕ್ಷಣಿಕ ಆಯ್ಕೆ ಇದಕ್ಕೆ ಪೂರಕವಾಗಿರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ತಿಳಿಸಿದರು.

ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ  ಎಸ್‌ಎಸ್‌ಎಲ್‌ಸಿ ನಂತರ ಮುಂದೇನು -ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಮೊದಲಾದ ಸಾಂಪ್ರದಾಯ ಶಿಕ್ಷಣಕ್ಕೆ ವಿದ್ಯಾರ್ಥಿಗಳು ದಾಖಲಾಗುವುದು ಸಹಜ. ತಮ್ಮ ಸಹಪಾಠಿ ತೆಗೆದುಕೊಂಡ ಎಂದು ಅಥವಾ ಪೋಷಕರ ಒತ್ತಾಯದಿಂದ ತಮಗಿಷ್ಟವಿರದೇ ಇರುವ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡು, ಮುಂದೆ ಪರಿತಪಿಸುವ ಉದಾಹರಣೆಗಳು ಸಹ ಸಾಕಷ್ಟಿವೆ. ಎಲ್ಲರೂ ಒಂದೇ ತೆರೆದ ಶಿಕ್ಷಣ ಪಡೆದರೆ ಸಹಜವಾಗಿ ಸ್ಪರ್ಧೆ ಏರ್ಪಡುತ್ತದೆ. ಈ ದಿಸೆಯಲ್ಲಿ ನಮ್ಮ ಆಯ್ಕೆ ವಿಭಿನ್ನವಾಗಿ ನಮ್ಮ ಆಸಕ್ತಿಗೆ ತಕ್ಕಂತೆ ಇರಬೇಕು. ಎಸ್‌ಎಸ್‌ಎಲ್‌ಸಿ ನಂತರ, ಐಟಿಐ, ವಿವಿಧ ವಿಷಯಗಳ ಡಿಪ್ಲೋಮೋ ಕೋರ್ಸ್ಗಳು ಸಾಕಷ್ಟಿವೆ. ಇವುಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. 

ಕೊವಿಡ್ ಸಂಕಷ್ಟದ ಎರಡು ವರ್ಷಗಳಿಂದ  ಶಿಕ್ಷಣ, ವಾಣಿಜ್ಯ ಮೊದಲಾದ ಹಲವಾರು ಕ್ಷೇತ್ರಗಳು ನಷ್ಟ ಅನುಭವಿಸಿವೆ. ಆದರೆ ವೈದ್ಯಕೀಯ ಕ್ಷೇತ್ರ ಹಿಂದೆಂದಿಗಿಂತಲೂ ಸಕ್ರಿಯವಾಗಿರುವ ಸಂದರ್ಭ ಎದುರಾಗಿದೆ. ಈ ದಿಸೆಯಲ್ಲಿ ಪ್ಯಾರಾಮೆಡಿಕಲ್ ಕೋರ್ಸ್ಗಳನ್ನು ಮಾಡಿಕೊಳ್ಳುವವರಿಗೆ ವಿಪುಲ ಉದ್ಯೋಗವಕಾಶಗಳಿವೆ. ಕೈಗಾರಿಕಾ ಪ್ರದೇಶಗಳು ಹೆಚ್ಚಾಗುತ್ತಿದ್ದು, ಇಲ್ಲಿ ಐಟಿಐ, ಡಿಪ್ಲೋಮೋ ಮಾಡಿದವರಿಗೆ ಉದ್ಯೋಗವಕಾಶಗಳಿವೆ. ಇದರಲ್ಲಿ ನಿಮ್ಮ ಸಾಮರ್ಥ್ಯ ತೋರಿಸಿದರೆ ಹೆಚ್ಚಿನ ಉತ್ತೇಜನ ನೀಡಿ, ಹಂತಹಂತವಾಗಿ ಮೇಲೇರಬಹುದಾಗಿದೆ ಎಂದು ತಿಳಿಸಿದರು.

ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹುತೇಕ ಯುವಕರು ಪದವಿಗಳನ್ನು ಪಡೆದು  ಕೌಶಲ್ಯವಿಲ್ಲದ ಕಾರಣ ಉದ್ಯೋಗದ ಸಮಸ್ಯೆ ಎದುರಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಹಂತದಲ್ಲಿಯೇ ತಾವು ಮುಂದೆ ಏನಾಗಬೇಕೆಂಬ ಗುರಿ ಇಟ್ಟುಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ.ಒಲಂಪಿಕ್ಸ್ನಲ್ಲಿ ಪದಕ ಗೆದ್ದ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧು 1ನೇ ತರಗತಿಯಿಂದಲೇ ಬ್ಯಾಡ್ಮಿಂಟನ್ ಆಟದಲ್ಲಿ ಆಸಕ್ತಿ ಮೂಡಿಸಿಕೊಂಡಿದ್ದರು.

ಕ್ರೀಡಾಪಟುಗಳಾದ, ಮೀರಾಬಾಯಿ ಚಾನು ತೂಕ ಎತ್ತುವುದರಲ್ಲಿ ನಿಸ್ಸೀಮರಾಗಿದ್ದರಿಂದ ಅವರ ಪ್ರತಿಭೆ ಗುರುತಿಸಲಾಯಿತು. ಯಾವುದೂ ಅಸಾಧ್ಯವಲ್ಲ. ಆದರೆ ಕೌಶಲ್ಯ ಹಾಗೂ ಸಾಧನೆಯ ಶ್ರಮ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ. ಎಸ್‌ಎಸ್‌ಎಲ್‌ಸಿ ನಂತರ ಪ್ಯಾರಾಮೆಡಿಕಲ್ ಕೋರ್ಸ್ ಮಾಡಿಕೊಂಡರೆ ಉದ್ಯೋಗ ಕಟ್ಟಿಟ್ಟ ಬುತ್ತಿ. ಇದರಲ್ಲಿ ನರ್ಸಿಂಗ್, ಲ್ಯಾಬ್ ಟೆಕ್ನೀಷಿಯನ್, ಓಟಿ ಟೆಕ್ನೀಷಿಯನ್,ಎಕ್ಸ್-ರೇ, ಆಪ್ತಾಮಾಲಾಜಿಸ್ಟ್ ಮೊದಲಾದ ಕೋರ್ಸ್ಗಳಿವೆ. ಬಿಬಿಎಂಪಿ ಮೊದಲಾಗಿ ಮುನಿಸಿಪಲ್ ಕಚೇರಿಗಳಲ್ಲಿ ಆರೋಗ್ಯ ನಿರೀಕ್ಷಕರಾಗುವ ಅವಕಾಶಗಳಿವೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಇ.ಎಚ್.ಎಸ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಪ್ರಾಂಶುಪಾಲ ರಾಮಮೂರ್ತಿ,  ಅನಿಕೇತನ ಟ್ರಸ್ಟಿನ ಎನ್.ಎಂ.ನಟರಾಜ್, ಉಪನ್ಯಾಸಕ ಎಂ.ಸಿ.ಮಂಜುನಾಥ್, ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!