ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು / ದಾಖಲೆಗಳ ವಿವರ

ಬೆಂಗಳೂರು: ನಗರಸಭೆ ಹಾಗು ಪುರಸಭೆಗೆ ಚುನಾವಣಾ ಇಲಾಖೆ ದಿನಾಂಕ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ನಾಮಪತ್ರ ಸಲ್ಲಿಕೆಗೆ ದಾಖಲೆ ಹಾಗೂ ನೀತಿ ನಿಯಮಗಳ ಕುರಿತು ಅಭ್ಯರ್ಥಿಗಳ ಗೊಂದಲವಿದೆ. ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆಯ ಗೊಂದಲ ನಿವಾರಿಸಲು ಹರಿತಲೇಖನಿ ವಿಶೇಷ ವರದಿ‌ ನೀಡುತ್ತಿದೆ.

1. ನಾಮಪತ್ರ ಪ್ರಪತ್ರ-2 ನಲ್ಲಿ ಸಲ್ಲಿಸಬೇಕು. ಸೂಚಕರು ಮತ್ತು ಅಭ್ಯರ್ಥಿಯು ಕಡ್ಡಾಯವಾಗಿ ಸಹಿ ಮಾಡಿರಬೇಕು. ಸಹಿ ಮಾಡದ ನಾಮಪತ್ರಗಳನ್ನ ತಿರಸ್ಕರಿಸಲಾಗುವುದು. 

2. ನಾಮ ಪತ್ರದಲ್ಲಿ ಹೆಸರು ಮತ್ತು ಅಂಚೆ ವಿಳಾಸವನ್ನು ಸ್ಪಷ್ಟವಾಗಿ ಹಾಗೂ ಪೂರ್ಣವಾಗಿ ನಮೂದಿಸಬೇಕು. 

3.> ಪ್ರಮಾಣ ಪತ್ರ / ಘೋಷಣಾ ಪತ್ರವನ್ನು ಅಫಿಡವಿಟ್ (ರೂ. 20 ರ ಛಾಪಾ ಕಾಗದಲ್ಲಿ) ಸಲ್ಲಿಸಬೇಕು. 2 (ಎರಡು) ಮೂಲಪ್ರ‍್ರತಿ ಹಾಗೂ 3 (ಮೂರು) ಜೆರಾಕ್ಸ್ ಪ್ರತಿ ಒಟ್ಟು 5 (ಐದು) ಪ್ರತಿ ನೀಡಬೇಕು.  

> ಅಭ್ಯರ್ಥಿಯು ಅಫಿಡವೀಟ್‌ನಲ್ಲಿ ಎಲ್ಲಾ ಪುಟಗಳಿಗೆ ಸಹಿ ಮಾಡಿರಬೇಕು. 

> ಅಫಿಡವೀಟ್‌ನ ಎಲ್ಲಾ ಕಾಲಂಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿರಬೇಕು. 

> ಅನ್ವಯವಾಗದ ಕಾಲಂಗಳಲ್ಲಿ “ಅನ್ವಯಿಸುವುದಿಲ್ಲ” / “NIL” ಎಂದು ಬರೆಯಬೇಕು 

> ನೋಟರಿ ಪಬ್ಲಿಕ್‌ರಿಂದ ದೃಢೀಕರಿಸಿರಬೇಕು. 

> ಅಫಿಡವಿಟ್ ಸಲ್ಲಿಸದಿದ್ದಲ್ಲೀ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಕಲಂ 36 ರಂತೆ ಅನರ್ಹತೆಯ ಮಾನದಂಡವಾಗುತ್ತದೆ. 

4. ಅಭ್ಯರ್ಥಿಯು ಕಡ್ಡಾಯವಾಗಿ ಸಂಬಂಧಿಸಿದ ವಾರ್ಡ್ ಮತದಾರರ ಪಟ್ಟಿಯ ದೃಢೀಕೃತ ಉದ್ದರಣವನ್ನು ಸಲ್ಲಿಸಬೇಕು. 

5. ಅಭ್ಯರ್ಥಿಯ ವಯಸ್ಸು 21 ವರ್ಷ ಕ್ಕಿಂತ ಕಡಿಮೆ ಇರಬಾರದು (ದಾಖಲೆ ಲಗತ್ತಿಸುವುದು)

6. ಒಬ್ಬ ಅಭ್ಯರ್ಥಿ 4 ನಾಮಪತ್ರಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. 

7.> ರಾಷ್ಟ್ರೀಯ / ರಾಜ್ಯ ಪಕ್ಷವಾಗಿದ್ದಲ್ಲಿ ಒಬ್ಬರು ಸೂಚಕರು

> ನೋಂದಾಯಿತ / ಪಕ್ಷೇತರವಾಗಿದ್ದಲ್ಲಿ 5 ಜನ ಸೂಚಕರ ಸಹಿ ಮಾಡಿರಬೇಕು

> ಸೂಚಕರು ಕಡ್ಡಾಯವಾಗಿ ಇದೇ ವಾರ್ಡ್ ಕ್ಷೇತ್ರದ ಮತದಾರರಾಗಿರಬೇಕು

8. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿದ್ದಲ್ಲಿ ಎ ಮತ್ತು ಬಿ ನಮೂನೆಗಳನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ದಿನಾಂಕ:23/08/201 ರಂದು 3.00 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಮೂಲ ಸಹಿಯುಳ್ಳ ಫಾರಂ “ಎ” ಮತ್ತು ಫಾರಂ “ಬಿ” ಅಭ್ಯರ್ಥಿಯು ಸಲ್ಲಿಸಬೇಕು (ಮೂಲ ಪ್ರತಿ) 

9. ಸಾಮಾನ್ಯ ಅಭ್ಯರ್ಥಿಗೆ ರೂ. 2000/- ಮತ್ತು ಹಿಂದುಳಿದ ವರ್ಗ/ ಅನುಸೂಚಿತ ಜಾತಿ/ ಅನುಸೂಚಿತ ಪಂಗಡ / ಮಹಿಳೆಗೆ ರೂ.1000/- ಠೇವಣಿ ಹಣ ನೀಡತಕ್ಕದ್ದು

10.> ಚುನಾವಣಾಧಿಕಾರಿಗಳ ಕಛೇರಿಯ 100 ಮೀ ಒಳಗೆ ಕೇವಲ ಎರಡು ವಾಹನಗಳು ಪ್ರವೇಶಿಸಬಹುದು. 

> ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು ಚುನಾವಣಾಧಿಕಾರಿಗಳ ಕೊಠಡಿ ಒಳಗೆ ಅಭ್ಯರ್ಥಿಯ ಜೊತೆಗೆ 2 ಜನರಿಗೆ ಮಾತ್ರ ಪ್ರವೇಶವಿರುತ್ತದೆ. 

11. 4 (ನಾಲ್ಕು) ಪಾಸ್‌ಪೋರ್ಟ್ + 4 (ನಾಲ್ಕು) ಸ್ಟ್ಯಾಂಪ್ ಸೈಜ್ (2.5* 2 ಸೆಂ.ಮೀ     ಅಳತೆಯ) ಇತ್ತೀಚಿನ ಭಾವಚಿತ್ರವಾಗಿದ್ದು ಅದು ಬಿಳಿ / ಅರೆ ಬಿಳಿ ಹಿನ್ನೆಲೆಯಲ್ಲಿ ಸಂಪೂರ್ಣ ಮುಖ ಚಿತ್ರದೊಂದಿಗೆ ಸಲ್ಲಿಸಬೇಕು. 

12. ಭಾರತದ ಸಂವಿಧಾನ, ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿಗಳಲ್ಲಿ ತಮ್ಮ ಆರ್ಹತೆ ಮತ್ತು ಅನರ್ಹತೆಗಳ ಬಗ್ಗೆ ಮಾಹಿತಿ ಹೊಂದಿರಬೇಕು.

13. ಮತಪತ್ರಗಳಲ್ಲಿ ಮುದ್ರಿತವಾಗಬೇಕಾದ ಅಭ್ಯರ್ಥಿಯ ಹೆಸರಿನ ಮಾದರಿ 

14. ಅಭ್ಯರ್ಥಿಯ ಮಾದರಿ ಸಹಿ 

15. ಮೀಸಲಿರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವವರು ತಹಸೀಲ್ದಾರ್‌ರವರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]