ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು / ದಾಖಲೆಗಳ ವಿವರ

ಬೆಂಗಳೂರು: ನಗರಸಭೆ ಹಾಗು ಪುರಸಭೆಗೆ ಚುನಾವಣಾ ಇಲಾಖೆ ದಿನಾಂಕ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ನಾಮಪತ್ರ ಸಲ್ಲಿಕೆಗೆ ದಾಖಲೆ ಹಾಗೂ ನೀತಿ ನಿಯಮಗಳ ಕುರಿತು ಅಭ್ಯರ್ಥಿಗಳ ಗೊಂದಲವಿದೆ. ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆಯ ಗೊಂದಲ ನಿವಾರಿಸಲು ಹರಿತಲೇಖನಿ ವಿಶೇಷ ವರದಿ‌ ನೀಡುತ್ತಿದೆ.

1. ನಾಮಪತ್ರ ಪ್ರಪತ್ರ-2 ನಲ್ಲಿ ಸಲ್ಲಿಸಬೇಕು. ಸೂಚಕರು ಮತ್ತು ಅಭ್ಯರ್ಥಿಯು ಕಡ್ಡಾಯವಾಗಿ ಸಹಿ ಮಾಡಿರಬೇಕು. ಸಹಿ ಮಾಡದ ನಾಮಪತ್ರಗಳನ್ನ ತಿರಸ್ಕರಿಸಲಾಗುವುದು. 

2. ನಾಮ ಪತ್ರದಲ್ಲಿ ಹೆಸರು ಮತ್ತು ಅಂಚೆ ವಿಳಾಸವನ್ನು ಸ್ಪಷ್ಟವಾಗಿ ಹಾಗೂ ಪೂರ್ಣವಾಗಿ ನಮೂದಿಸಬೇಕು. 

3.> ಪ್ರಮಾಣ ಪತ್ರ / ಘೋಷಣಾ ಪತ್ರವನ್ನು ಅಫಿಡವಿಟ್ (ರೂ. 20 ರ ಛಾಪಾ ಕಾಗದಲ್ಲಿ) ಸಲ್ಲಿಸಬೇಕು. 2 (ಎರಡು) ಮೂಲಪ್ರ‍್ರತಿ ಹಾಗೂ 3 (ಮೂರು) ಜೆರಾಕ್ಸ್ ಪ್ರತಿ ಒಟ್ಟು 5 (ಐದು) ಪ್ರತಿ ನೀಡಬೇಕು.  

> ಅಭ್ಯರ್ಥಿಯು ಅಫಿಡವೀಟ್‌ನಲ್ಲಿ ಎಲ್ಲಾ ಪುಟಗಳಿಗೆ ಸಹಿ ಮಾಡಿರಬೇಕು. 

> ಅಫಿಡವೀಟ್‌ನ ಎಲ್ಲಾ ಕಾಲಂಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿರಬೇಕು. 

> ಅನ್ವಯವಾಗದ ಕಾಲಂಗಳಲ್ಲಿ “ಅನ್ವಯಿಸುವುದಿಲ್ಲ” / “NIL” ಎಂದು ಬರೆಯಬೇಕು 

> ನೋಟರಿ ಪಬ್ಲಿಕ್‌ರಿಂದ ದೃಢೀಕರಿಸಿರಬೇಕು. 

> ಅಫಿಡವಿಟ್ ಸಲ್ಲಿಸದಿದ್ದಲ್ಲೀ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಕಲಂ 36 ರಂತೆ ಅನರ್ಹತೆಯ ಮಾನದಂಡವಾಗುತ್ತದೆ. 

4. ಅಭ್ಯರ್ಥಿಯು ಕಡ್ಡಾಯವಾಗಿ ಸಂಬಂಧಿಸಿದ ವಾರ್ಡ್ ಮತದಾರರ ಪಟ್ಟಿಯ ದೃಢೀಕೃತ ಉದ್ದರಣವನ್ನು ಸಲ್ಲಿಸಬೇಕು. 

5. ಅಭ್ಯರ್ಥಿಯ ವಯಸ್ಸು 21 ವರ್ಷ ಕ್ಕಿಂತ ಕಡಿಮೆ ಇರಬಾರದು (ದಾಖಲೆ ಲಗತ್ತಿಸುವುದು)

6. ಒಬ್ಬ ಅಭ್ಯರ್ಥಿ 4 ನಾಮಪತ್ರಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. 

7.> ರಾಷ್ಟ್ರೀಯ / ರಾಜ್ಯ ಪಕ್ಷವಾಗಿದ್ದಲ್ಲಿ ಒಬ್ಬರು ಸೂಚಕರು

> ನೋಂದಾಯಿತ / ಪಕ್ಷೇತರವಾಗಿದ್ದಲ್ಲಿ 5 ಜನ ಸೂಚಕರ ಸಹಿ ಮಾಡಿರಬೇಕು

> ಸೂಚಕರು ಕಡ್ಡಾಯವಾಗಿ ಇದೇ ವಾರ್ಡ್ ಕ್ಷೇತ್ರದ ಮತದಾರರಾಗಿರಬೇಕು

8. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿದ್ದಲ್ಲಿ ಎ ಮತ್ತು ಬಿ ನಮೂನೆಗಳನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ದಿನಾಂಕ:23/08/201 ರಂದು 3.00 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಮೂಲ ಸಹಿಯುಳ್ಳ ಫಾರಂ “ಎ” ಮತ್ತು ಫಾರಂ “ಬಿ” ಅಭ್ಯರ್ಥಿಯು ಸಲ್ಲಿಸಬೇಕು (ಮೂಲ ಪ್ರತಿ) 

9. ಸಾಮಾನ್ಯ ಅಭ್ಯರ್ಥಿಗೆ ರೂ. 2000/- ಮತ್ತು ಹಿಂದುಳಿದ ವರ್ಗ/ ಅನುಸೂಚಿತ ಜಾತಿ/ ಅನುಸೂಚಿತ ಪಂಗಡ / ಮಹಿಳೆಗೆ ರೂ.1000/- ಠೇವಣಿ ಹಣ ನೀಡತಕ್ಕದ್ದು

10.> ಚುನಾವಣಾಧಿಕಾರಿಗಳ ಕಛೇರಿಯ 100 ಮೀ ಒಳಗೆ ಕೇವಲ ಎರಡು ವಾಹನಗಳು ಪ್ರವೇಶಿಸಬಹುದು. 

> ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು ಚುನಾವಣಾಧಿಕಾರಿಗಳ ಕೊಠಡಿ ಒಳಗೆ ಅಭ್ಯರ್ಥಿಯ ಜೊತೆಗೆ 2 ಜನರಿಗೆ ಮಾತ್ರ ಪ್ರವೇಶವಿರುತ್ತದೆ. 

11. 4 (ನಾಲ್ಕು) ಪಾಸ್‌ಪೋರ್ಟ್ + 4 (ನಾಲ್ಕು) ಸ್ಟ್ಯಾಂಪ್ ಸೈಜ್ (2.5* 2 ಸೆಂ.ಮೀ     ಅಳತೆಯ) ಇತ್ತೀಚಿನ ಭಾವಚಿತ್ರವಾಗಿದ್ದು ಅದು ಬಿಳಿ / ಅರೆ ಬಿಳಿ ಹಿನ್ನೆಲೆಯಲ್ಲಿ ಸಂಪೂರ್ಣ ಮುಖ ಚಿತ್ರದೊಂದಿಗೆ ಸಲ್ಲಿಸಬೇಕು. 

12. ಭಾರತದ ಸಂವಿಧಾನ, ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿಗಳಲ್ಲಿ ತಮ್ಮ ಆರ್ಹತೆ ಮತ್ತು ಅನರ್ಹತೆಗಳ ಬಗ್ಗೆ ಮಾಹಿತಿ ಹೊಂದಿರಬೇಕು.

13. ಮತಪತ್ರಗಳಲ್ಲಿ ಮುದ್ರಿತವಾಗಬೇಕಾದ ಅಭ್ಯರ್ಥಿಯ ಹೆಸರಿನ ಮಾದರಿ 

14. ಅಭ್ಯರ್ಥಿಯ ಮಾದರಿ ಸಹಿ 

15. ಮೀಸಲಿರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವವರು ತಹಸೀಲ್ದಾರ್‌ರವರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!