ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು / ದಾಖಲೆಗಳ ವಿವರ

ಬೆಂಗಳೂರು: ನಗರಸಭೆ ಹಾಗು ಪುರಸಭೆಗೆ ಚುನಾವಣಾ ಇಲಾಖೆ ದಿನಾಂಕ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ನಾಮಪತ್ರ ಸಲ್ಲಿಕೆಗೆ ದಾಖಲೆ ಹಾಗೂ ನೀತಿ ನಿಯಮಗಳ ಕುರಿತು ಅಭ್ಯರ್ಥಿಗಳ ಗೊಂದಲವಿದೆ. ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆಯ ಗೊಂದಲ ನಿವಾರಿಸಲು ಹರಿತಲೇಖನಿ ವಿಶೇಷ ವರದಿ‌ ನೀಡುತ್ತಿದೆ.

1. ನಾಮಪತ್ರ ಪ್ರಪತ್ರ-2 ನಲ್ಲಿ ಸಲ್ಲಿಸಬೇಕು. ಸೂಚಕರು ಮತ್ತು ಅಭ್ಯರ್ಥಿಯು ಕಡ್ಡಾಯವಾಗಿ ಸಹಿ ಮಾಡಿರಬೇಕು. ಸಹಿ ಮಾಡದ ನಾಮಪತ್ರಗಳನ್ನ ತಿರಸ್ಕರಿಸಲಾಗುವುದು. 

2. ನಾಮ ಪತ್ರದಲ್ಲಿ ಹೆಸರು ಮತ್ತು ಅಂಚೆ ವಿಳಾಸವನ್ನು ಸ್ಪಷ್ಟವಾಗಿ ಹಾಗೂ ಪೂರ್ಣವಾಗಿ ನಮೂದಿಸಬೇಕು. 

3.> ಪ್ರಮಾಣ ಪತ್ರ / ಘೋಷಣಾ ಪತ್ರವನ್ನು ಅಫಿಡವಿಟ್ (ರೂ. 20 ರ ಛಾಪಾ ಕಾಗದಲ್ಲಿ) ಸಲ್ಲಿಸಬೇಕು. 2 (ಎರಡು) ಮೂಲಪ್ರ‍್ರತಿ ಹಾಗೂ 3 (ಮೂರು) ಜೆರಾಕ್ಸ್ ಪ್ರತಿ ಒಟ್ಟು 5 (ಐದು) ಪ್ರತಿ ನೀಡಬೇಕು.  

> ಅಭ್ಯರ್ಥಿಯು ಅಫಿಡವೀಟ್‌ನಲ್ಲಿ ಎಲ್ಲಾ ಪುಟಗಳಿಗೆ ಸಹಿ ಮಾಡಿರಬೇಕು. 

> ಅಫಿಡವೀಟ್‌ನ ಎಲ್ಲಾ ಕಾಲಂಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿರಬೇಕು. 

> ಅನ್ವಯವಾಗದ ಕಾಲಂಗಳಲ್ಲಿ “ಅನ್ವಯಿಸುವುದಿಲ್ಲ” / “NIL” ಎಂದು ಬರೆಯಬೇಕು 

> ನೋಟರಿ ಪಬ್ಲಿಕ್‌ರಿಂದ ದೃಢೀಕರಿಸಿರಬೇಕು. 

> ಅಫಿಡವಿಟ್ ಸಲ್ಲಿಸದಿದ್ದಲ್ಲೀ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಕಲಂ 36 ರಂತೆ ಅನರ್ಹತೆಯ ಮಾನದಂಡವಾಗುತ್ತದೆ. 

4. ಅಭ್ಯರ್ಥಿಯು ಕಡ್ಡಾಯವಾಗಿ ಸಂಬಂಧಿಸಿದ ವಾರ್ಡ್ ಮತದಾರರ ಪಟ್ಟಿಯ ದೃಢೀಕೃತ ಉದ್ದರಣವನ್ನು ಸಲ್ಲಿಸಬೇಕು. 

5. ಅಭ್ಯರ್ಥಿಯ ವಯಸ್ಸು 21 ವರ್ಷ ಕ್ಕಿಂತ ಕಡಿಮೆ ಇರಬಾರದು (ದಾಖಲೆ ಲಗತ್ತಿಸುವುದು)

6. ಒಬ್ಬ ಅಭ್ಯರ್ಥಿ 4 ನಾಮಪತ್ರಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. 

7.> ರಾಷ್ಟ್ರೀಯ / ರಾಜ್ಯ ಪಕ್ಷವಾಗಿದ್ದಲ್ಲಿ ಒಬ್ಬರು ಸೂಚಕರು

> ನೋಂದಾಯಿತ / ಪಕ್ಷೇತರವಾಗಿದ್ದಲ್ಲಿ 5 ಜನ ಸೂಚಕರ ಸಹಿ ಮಾಡಿರಬೇಕು

> ಸೂಚಕರು ಕಡ್ಡಾಯವಾಗಿ ಇದೇ ವಾರ್ಡ್ ಕ್ಷೇತ್ರದ ಮತದಾರರಾಗಿರಬೇಕು

8. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿದ್ದಲ್ಲಿ ಎ ಮತ್ತು ಬಿ ನಮೂನೆಗಳನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ದಿನಾಂಕ:23/08/201 ರಂದು 3.00 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಮೂಲ ಸಹಿಯುಳ್ಳ ಫಾರಂ “ಎ” ಮತ್ತು ಫಾರಂ “ಬಿ” ಅಭ್ಯರ್ಥಿಯು ಸಲ್ಲಿಸಬೇಕು (ಮೂಲ ಪ್ರತಿ) 

9. ಸಾಮಾನ್ಯ ಅಭ್ಯರ್ಥಿಗೆ ರೂ. 2000/- ಮತ್ತು ಹಿಂದುಳಿದ ವರ್ಗ/ ಅನುಸೂಚಿತ ಜಾತಿ/ ಅನುಸೂಚಿತ ಪಂಗಡ / ಮಹಿಳೆಗೆ ರೂ.1000/- ಠೇವಣಿ ಹಣ ನೀಡತಕ್ಕದ್ದು

10.> ಚುನಾವಣಾಧಿಕಾರಿಗಳ ಕಛೇರಿಯ 100 ಮೀ ಒಳಗೆ ಕೇವಲ ಎರಡು ವಾಹನಗಳು ಪ್ರವೇಶಿಸಬಹುದು. 

> ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು ಚುನಾವಣಾಧಿಕಾರಿಗಳ ಕೊಠಡಿ ಒಳಗೆ ಅಭ್ಯರ್ಥಿಯ ಜೊತೆಗೆ 2 ಜನರಿಗೆ ಮಾತ್ರ ಪ್ರವೇಶವಿರುತ್ತದೆ. 

11. 4 (ನಾಲ್ಕು) ಪಾಸ್‌ಪೋರ್ಟ್ + 4 (ನಾಲ್ಕು) ಸ್ಟ್ಯಾಂಪ್ ಸೈಜ್ (2.5* 2 ಸೆಂ.ಮೀ     ಅಳತೆಯ) ಇತ್ತೀಚಿನ ಭಾವಚಿತ್ರವಾಗಿದ್ದು ಅದು ಬಿಳಿ / ಅರೆ ಬಿಳಿ ಹಿನ್ನೆಲೆಯಲ್ಲಿ ಸಂಪೂರ್ಣ ಮುಖ ಚಿತ್ರದೊಂದಿಗೆ ಸಲ್ಲಿಸಬೇಕು. 

12. ಭಾರತದ ಸಂವಿಧಾನ, ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿಗಳಲ್ಲಿ ತಮ್ಮ ಆರ್ಹತೆ ಮತ್ತು ಅನರ್ಹತೆಗಳ ಬಗ್ಗೆ ಮಾಹಿತಿ ಹೊಂದಿರಬೇಕು.

13. ಮತಪತ್ರಗಳಲ್ಲಿ ಮುದ್ರಿತವಾಗಬೇಕಾದ ಅಭ್ಯರ್ಥಿಯ ಹೆಸರಿನ ಮಾದರಿ 

14. ಅಭ್ಯರ್ಥಿಯ ಮಾದರಿ ಸಹಿ 

15. ಮೀಸಲಿರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವವರು ತಹಸೀಲ್ದಾರ್‌ರವರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!