ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು / ದಾಖಲೆಗಳ ವಿವರ

ಬೆಂಗಳೂರು: ನಗರಸಭೆ ಹಾಗು ಪುರಸಭೆಗೆ ಚುನಾವಣಾ ಇಲಾಖೆ ದಿನಾಂಕ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ನಾಮಪತ್ರ ಸಲ್ಲಿಕೆಗೆ ದಾಖಲೆ ಹಾಗೂ ನೀತಿ ನಿಯಮಗಳ ಕುರಿತು ಅಭ್ಯರ್ಥಿಗಳ ಗೊಂದಲವಿದೆ. ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆಯ ಗೊಂದಲ ನಿವಾರಿಸಲು ಹರಿತಲೇಖನಿ ವಿಶೇಷ ವರದಿ‌ ನೀಡುತ್ತಿದೆ.

1. ನಾಮಪತ್ರ ಪ್ರಪತ್ರ-2 ನಲ್ಲಿ ಸಲ್ಲಿಸಬೇಕು. ಸೂಚಕರು ಮತ್ತು ಅಭ್ಯರ್ಥಿಯು ಕಡ್ಡಾಯವಾಗಿ ಸಹಿ ಮಾಡಿರಬೇಕು. ಸಹಿ ಮಾಡದ ನಾಮಪತ್ರಗಳನ್ನ ತಿರಸ್ಕರಿಸಲಾಗುವುದು. 

2. ನಾಮ ಪತ್ರದಲ್ಲಿ ಹೆಸರು ಮತ್ತು ಅಂಚೆ ವಿಳಾಸವನ್ನು ಸ್ಪಷ್ಟವಾಗಿ ಹಾಗೂ ಪೂರ್ಣವಾಗಿ ನಮೂದಿಸಬೇಕು. 

3.> ಪ್ರಮಾಣ ಪತ್ರ / ಘೋಷಣಾ ಪತ್ರವನ್ನು ಅಫಿಡವಿಟ್ (ರೂ. 20 ರ ಛಾಪಾ ಕಾಗದಲ್ಲಿ) ಸಲ್ಲಿಸಬೇಕು. 2 (ಎರಡು) ಮೂಲಪ್ರ‍್ರತಿ ಹಾಗೂ 3 (ಮೂರು) ಜೆರಾಕ್ಸ್ ಪ್ರತಿ ಒಟ್ಟು 5 (ಐದು) ಪ್ರತಿ ನೀಡಬೇಕು.  

> ಅಭ್ಯರ್ಥಿಯು ಅಫಿಡವೀಟ್‌ನಲ್ಲಿ ಎಲ್ಲಾ ಪುಟಗಳಿಗೆ ಸಹಿ ಮಾಡಿರಬೇಕು. 

> ಅಫಿಡವೀಟ್‌ನ ಎಲ್ಲಾ ಕಾಲಂಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿರಬೇಕು. 

> ಅನ್ವಯವಾಗದ ಕಾಲಂಗಳಲ್ಲಿ “ಅನ್ವಯಿಸುವುದಿಲ್ಲ” / “NIL” ಎಂದು ಬರೆಯಬೇಕು 

> ನೋಟರಿ ಪಬ್ಲಿಕ್‌ರಿಂದ ದೃಢೀಕರಿಸಿರಬೇಕು. 

> ಅಫಿಡವಿಟ್ ಸಲ್ಲಿಸದಿದ್ದಲ್ಲೀ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಕಲಂ 36 ರಂತೆ ಅನರ್ಹತೆಯ ಮಾನದಂಡವಾಗುತ್ತದೆ. 

4. ಅಭ್ಯರ್ಥಿಯು ಕಡ್ಡಾಯವಾಗಿ ಸಂಬಂಧಿಸಿದ ವಾರ್ಡ್ ಮತದಾರರ ಪಟ್ಟಿಯ ದೃಢೀಕೃತ ಉದ್ದರಣವನ್ನು ಸಲ್ಲಿಸಬೇಕು. 

5. ಅಭ್ಯರ್ಥಿಯ ವಯಸ್ಸು 21 ವರ್ಷ ಕ್ಕಿಂತ ಕಡಿಮೆ ಇರಬಾರದು (ದಾಖಲೆ ಲಗತ್ತಿಸುವುದು)

6. ಒಬ್ಬ ಅಭ್ಯರ್ಥಿ 4 ನಾಮಪತ್ರಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. 

7.> ರಾಷ್ಟ್ರೀಯ / ರಾಜ್ಯ ಪಕ್ಷವಾಗಿದ್ದಲ್ಲಿ ಒಬ್ಬರು ಸೂಚಕರು

> ನೋಂದಾಯಿತ / ಪಕ್ಷೇತರವಾಗಿದ್ದಲ್ಲಿ 5 ಜನ ಸೂಚಕರ ಸಹಿ ಮಾಡಿರಬೇಕು

> ಸೂಚಕರು ಕಡ್ಡಾಯವಾಗಿ ಇದೇ ವಾರ್ಡ್ ಕ್ಷೇತ್ರದ ಮತದಾರರಾಗಿರಬೇಕು

8. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿದ್ದಲ್ಲಿ ಎ ಮತ್ತು ಬಿ ನಮೂನೆಗಳನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ದಿನಾಂಕ:23/08/201 ರಂದು 3.00 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಮೂಲ ಸಹಿಯುಳ್ಳ ಫಾರಂ “ಎ” ಮತ್ತು ಫಾರಂ “ಬಿ” ಅಭ್ಯರ್ಥಿಯು ಸಲ್ಲಿಸಬೇಕು (ಮೂಲ ಪ್ರತಿ) 

9. ಸಾಮಾನ್ಯ ಅಭ್ಯರ್ಥಿಗೆ ರೂ. 2000/- ಮತ್ತು ಹಿಂದುಳಿದ ವರ್ಗ/ ಅನುಸೂಚಿತ ಜಾತಿ/ ಅನುಸೂಚಿತ ಪಂಗಡ / ಮಹಿಳೆಗೆ ರೂ.1000/- ಠೇವಣಿ ಹಣ ನೀಡತಕ್ಕದ್ದು

10.> ಚುನಾವಣಾಧಿಕಾರಿಗಳ ಕಛೇರಿಯ 100 ಮೀ ಒಳಗೆ ಕೇವಲ ಎರಡು ವಾಹನಗಳು ಪ್ರವೇಶಿಸಬಹುದು. 

> ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು ಚುನಾವಣಾಧಿಕಾರಿಗಳ ಕೊಠಡಿ ಒಳಗೆ ಅಭ್ಯರ್ಥಿಯ ಜೊತೆಗೆ 2 ಜನರಿಗೆ ಮಾತ್ರ ಪ್ರವೇಶವಿರುತ್ತದೆ. 

11. 4 (ನಾಲ್ಕು) ಪಾಸ್‌ಪೋರ್ಟ್ + 4 (ನಾಲ್ಕು) ಸ್ಟ್ಯಾಂಪ್ ಸೈಜ್ (2.5* 2 ಸೆಂ.ಮೀ     ಅಳತೆಯ) ಇತ್ತೀಚಿನ ಭಾವಚಿತ್ರವಾಗಿದ್ದು ಅದು ಬಿಳಿ / ಅರೆ ಬಿಳಿ ಹಿನ್ನೆಲೆಯಲ್ಲಿ ಸಂಪೂರ್ಣ ಮುಖ ಚಿತ್ರದೊಂದಿಗೆ ಸಲ್ಲಿಸಬೇಕು. 

12. ಭಾರತದ ಸಂವಿಧಾನ, ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿಗಳಲ್ಲಿ ತಮ್ಮ ಆರ್ಹತೆ ಮತ್ತು ಅನರ್ಹತೆಗಳ ಬಗ್ಗೆ ಮಾಹಿತಿ ಹೊಂದಿರಬೇಕು.

13. ಮತಪತ್ರಗಳಲ್ಲಿ ಮುದ್ರಿತವಾಗಬೇಕಾದ ಅಭ್ಯರ್ಥಿಯ ಹೆಸರಿನ ಮಾದರಿ 

14. ಅಭ್ಯರ್ಥಿಯ ಮಾದರಿ ಸಹಿ 

15. ಮೀಸಲಿರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವವರು ತಹಸೀಲ್ದಾರ್‌ರವರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!