ವಿವಿಧ ಠಾಣೆಗಳಲ್ಲಿ ಕಳುವಾದ 41.21ಲಕ್ಷ ರು. ಮೌಲ್ಯದ ಚಿನ್ನಾಭರಣ, ವಾಹನಗಳು, ಇತರೆ ವಸ್ತುಗಳು ವಶ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ಉಪವಿಭಾಗದ ವಿವಿಧ ಠಾಣೆಗಳಲ್ಲಿ ವಿವಿಧ ಕಳವು ಪ್ರಕರಣಗಳಲ್ಲಿ ಪತ್ತೆಮಾಡಿರುವ ಒಟ್ಟು 41,21,744 ರೂಪಾಯಿ ಮೌಲ್ಯದ ಚಿನ್ನಾಭರಣ, ಲ್ಯಾಪ್ ಟಾಪ್ ಗಳು, ಮೊಬೈಲ್ ಪೋನ್ ಗಳು, ದ್ವಿಚಕ್ರ ವಾಹನಗಳು ಮತ್ತು ಸರಕು ಸಾಗಾಣಿಕೆ ವಾಹನಗಳನ್ನು ಚಿಕ್ಕಬಳ್ಳಾಪುರ ಪೋಲೀಸರು ವಶಪಡಿಸಿಕೊಂಡು ಮಾಲೀಕರಿಗೆ ವಿತರಿಸಲಾಗಿದೆ ಎಂದು ಕೇಂದ್ರ ವಲಯದ ಪೊಲೀಸ್ ಮಹಾ ನಿರೀಕ್ಷಕ ಎಂ.ಚಂದ್ರಶೇಖರ್ ತಿಳಿಸಿದರು.

ನಗರದ ಹೊರವಲಯದ ಅಣಕನೂರು ಬಳಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂತಾಮಣಿ ಉಪವಿಭಾಗದ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ 4.90 ಲಕ್ಷ ರುಪಾಯಿ ಮೌಲ್ಯದ 98 ಗ್ರಾಂ ತೂಕದ ಬಂಗಾರದ ಒಡವೆಗಳು, 45,000 ರೂ ಮೌಲ್ಯದ 2 ಲ್ಯಾಪ್ ಟಾಪ್, 34,000 ರುಪಾಯಿ ಮೌಲ್ಯದ 1 ಕಂಪ್ಯೂಟರ್, 14 ಲಕ್ಷ ರುಪಾಯಿ ಮೌಲ್ಯದ 56 ಬೋರ್ ವೆಲ್ ಬಿಟ್ ಗಳು ಹಾಗೂ 5.60 ಲಕ್ಷ ರುಪಾಯಿ ಮೌಲ್ಯದ ಬೊಲೆರೋ ಟೆಂಪೋ ಸೇರಿ ಒಟ್ಟು 25.29 ಲಕ್ಷ ಮೌಲ್ಯದ ಮಾಲು ವಶಪಡಿಸಿಕೊಳ್ಳಲಾಗಿದೆ ಎಂದರು.

ಶಿಡ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸುಮಾರು 2,59,744 ರುಪಾಯಿ ಮೌಲ್ಯದ 18 ಮೊಬೈಲ್ ಪೋನ್ ಗಳು ಮತ್ತು 1 ಡಿವಿಆರ್ ನ್ನು ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ 10 ಲಕ್ಷ ರು. ಮೌಲ್ಯದ ಅಶೋಕ ಲೈಲ್ಯಾಂಡ್ ದೋಸ್ತ್ ವಾಹನ, ಅಪೇ ಆಟೋ, ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ 85,000 ರು ಬೆಲೆ ಬಾಳುವ 1 ದ್ವಿಚಕ್ರ ವಾಹನ, ನಗರ ಠಾಣೆಯಲ್ಲಿ 83000 ರು. ಮೌಲ್ಯದ ಎರಡು ದ್ವಿಚಕ್ರ ವಾಹನ, ಬಟ್ಲಹಳ್ಳಿ ಠಾಣೆಯಲ್ಲಿ 2.50 ಲಕ್ಷ ರು. ಮೌಲ್ಯದ 54 ಗ್ರಾಂ ಬಂಗಾರದ ನಕ್ಲೇಸ್ ಮತ್ತು ಲಾಂಗ್ ಚೈನುಗಳನ್ನು ಪತ್ತೆ ಮಾಡಿ ಮಾಲೀಕರಿಗೆ ವಿತರಿಸಲಾಗಿದೆ ಎಂದರು.

ಇದೇ ವೇಳೆ ಕಳವು ಪ್ರಕರಣಗಳ ಪತ್ತೆಯಲ್ಲಿ ಉತ್ತಮ ಕೆಲಸ ಮಾಡಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು. 

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಚಿಕ್ಕಬಳ್ಳಾಪುರ ಡಿವೈಎಸ್ ಪಿ ವಾಸುದೇವ್, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯ ಹಾಗೂ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50 ಸಾವಿರದಿಂದ 1 ಲಕ್ಷ ದಂಡ: ಡಿಸಿಎಂ ಡಿ.ಕೆ. ಶಿವಕುಮಾರ್

ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50 ಸಾವಿರದಿಂದ 1 ಲಕ್ಷ ದಂಡ: ಡಿಸಿಎಂ

ಎಷ್ಟೇ ಹೇಳಿದರೂ ಫ್ಲೆಕ್ಸ್ ಹಾಕುವುದು ಹೆಚ್ಚುತ್ತಿದೆ. ನಮ್ಮ ಪಕ್ಷವೂ ಸೇರಿದಂತೆ ಎಲ್ಲಾ ಪಕ್ಷದವರು ಫ್ಲೆಕ್ಸ್ ಹಾಕುತ್ತಿದ್ದಾರೆ. ಇನ್ನು ಮುಂದೆ ಯಾರು ಅನಧಿಕೃತ ಫ್ಲೆಕ್ಸ್ ಹಾಕುತ್ತಾರೋ ಅವರಿಗೆ ಪ್ರತಿ ಫ್ಲೆಕ್ಸ್ ಗೆ ಅದನ್ನು ಹಾಕಿದವರಿಗೆ 50

[ccc_my_favorite_select_button post_id="120348"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!