ಜಾನಪದ ಕಲೆ, ಸಂಪ್ರದಾಯಗಳನ್ನು ಪುನರುಜ್ಜೀವಗೊಳಿಸಿ ಅವುಗಳನ್ನು ಸಾಮಾಜಿಕ ಬದಲಾವಣೆಯ ಸಾಧನಗಳನ್ನಾಗಿ ಬಳಸಿ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ಬೆಂಗಳೂರು: ಜಾನಪದ ಕಲೆ, ಸಂಪ್ರದಾಯಗಳನ್ನು ಪುನರುಜ್ಜೀವಗೊಳಿಸುವಂತೆ ಮತ್ತು ಅವುಗಳನ್ನು ಲಿಂಗ ತಾರತಮ್ಯ ನಿವಾರಣೆ ಮತ್ತು ಹೆಣ್ಣು ಮಕ್ಕಳ ರಕ್ಷಣೆಯಂತಹ ಸಾಮಾಜಿಕ ಕಾರಣಗಳನ್ನು ಪ್ರತಿಪಾದಿಸುವಂತೆ  ಅದರ ಸಾಮರ್ಥ್ಯವನ್ನು ಬಳಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಶ್ರೀ ಎಂ.ವೆಂಕಯ್ಯ ನಾಯ್ಡು ಇಂದು ಕರೆ ನೀಡಿದರು. 

ಹಲವು ಬಗೆಯ ಜಾನಪದ ಕಲಾ ಪ್ರಕಾರಗಳ ಜನಪ್ರಿಯತೆ ಕ್ರಮೇಣ ಕುಸಿಯುತ್ತಿರುವ ಬಗ್ಗೆ ತೀವ್ರ ಕಳಕಳಿ ವ್ಯಕ್ತಪಡಿಸಿದ ಅವರು, ಒಂದು ಕಾಲದಲ್ಲಿ ಜಾನಪದ ಕಲೆಗಳನ್ನು ರೂಢಿಸಿಕೊಂಡಿದ್ದ ಸಮುದಾಯಗಳು ಇಂದು ಕಣ್ಮರೆಯಾಗುತ್ತಿವೆ ಎಂದರು. ಅಂತಹ ಸಮುದಾಯಗಳ ಯುವಕರಿಗೆ ಕೌಶಲ್ಯ ಮತ್ತು ತರಬೇತಿ ನೀಡುವ ಮೂಲಕ ಆ ಕಲೆಗಳನ್ನು ಪುನಃಶ್ಚೇತನಗೊಳಿಸ ಬಹುದು ಮತ್ತು ಯುವಕರು ಜಾನಪದ ಮಾಧ್ಯಮಗಳನ್ನು ಸಾಮಾಜಿಕ ಬದಲಾವಣೆ ಮತ್ತು ವಿಚಾರ ಪ್ರತಿಪಾದನೆಗಳಿಗೆ ಸಾಧನಗಳನ್ನಾಗಿ ಬಳಸಿಕೊಳ್ಳಬೇಕು ಎಂದರು.

ನಮ್ಮ ದೇಶದ ಶ್ರೀಮಂತ ಜಾನಪದ ಪರಂಪರೆಯ ದತ್ತಾಂಶವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಶ್ರೀ ಎಂ.ವೆಂಕಯ್ಯನಾಯ್ಡು ಬಲವಾಗಿ ಪ್ರತಿಪಾದಿಸಿದರು. “ಶ್ರವಣ- ದೃಶ್ಯ ಮಾಧ್ಯಮಗಳನ್ನು ಬಳಸಿ ವ್ಯಾಪಕ ದಾಖಲೀಕರಣ ಪ್ರಕ್ರಿಯೆ ಆಗಬೇಕು ಮತ್ತು ಆಧುನಿಕ ವಿಧಾನಕ್ಕೆ ಅದನ್ನು ಅನುವಾದಿಸುವ ಪ್ರಕ್ರಿಯೆಯಲ್ಲಿ ಅದರ ಮೂಲ ಸಾರ ಕಳೆದುಹೋಗದಂತೆ ಎಚ್ಚರಿಕೆ ವಹಿಸಬೇಕು’’ಎಂದು ಅವರು ಹೇಳಿದರು.

ಭಾರತೀಯ ಜನಪದ ಪರಂಪರೆಯ ಸಂಭ್ರಮಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಉಪರಾಷ್ಟ್ರಪತಿ ಅವರು, ಭಾರತದಲ್ಲಿ ಜನಪದ ಕಲೆ ಮತ್ತು ಮೌಖಿಕ ಸಂಪ್ರದಾಯಗಳ ಶ್ರೇಷ್ಠ ಇತಿಹಾಸ ಮತ್ತು ಶ್ರೀಮಂತ ವೈವಿಧ್ಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು ಮತ್ತು ಅವುಗಳನ್ನು ಜನಪ್ರಿಯಗೊಳಿಸಬೇಕಿದೆ ಎಂದು ಕರೆ ನೀಡಿದರು.  “ನಮ್ಮ ಭಾಷೆಯ ಸೂಕ್ಷ್ಮತೆ ಗಳು,  ನಮ್ಮ ಸಾಂಪ್ರದಾಯಿಕ ಆಚರಣೆಗಳ ಸಮಗ್ರತೆ ಮತ್ತು ನಮ್ಮ ಪೂರ್ವಜರ  ಬುದ್ದಿವಂತಿಕೆ ಮೂಲತಃ ಜನಪದ ಕಲೆಗಿಳಿಂದ ಹರಿದುಬಂದಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ನಮ್ಮ ಜನಸಮೂಹದಲ್ಲಿ ರಾಜಕೀಯ ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಜಾನಪದ ಕಲೆಗಳು ಅತ್ಯಂತ ನಿರ್ಣಾಯಕವಾಗಿದ್ದವು. ಜನಪದ ಕಲೆ ನಿಜ ಅರ್ಥದಲ್ಲಿ ಜನ ಸಾಮಾನ್ಯರ ಸಾಹಿತ್ಯವಾಗಿದೆ’’ಎಂದು ಶ್ರೀ ಎಂ.ವೆಂಕಯ್ಯ ನಾಯ್ಡು ಹೇಳಿದರು.

ಭಾರತದಲ್ಲಿ ಜಾನಪದ ಇತಿಹಾಸವು ಹೇಗೆ ಬೆಳೆಯಿತು ಎಂಬುದನ್ನು ಗಮನಿಸಿದರೆ, ಗ್ರಾಮೀಣ ಪ್ರದೇಶದಲ್ಲಿ ಅದಕ್ಕೆ ಸಿಕ್ಕ ಪ್ರೋತ್ಸಾಹದಿಂದಾಗಿ ಎಂದ ಉಪರಾಷ್ಟ್ರಪತಿಗಳು “ಗ್ರಾಮೀಣ ಭಾರತ ಮತ್ತು ಜನಪದ ಕಲೆ ಒಂದನ್ನೊಂದು ಬೇರ್ಪಡಿಸಲಾಗದು” ಎಂದು ಹೇಳಿದರು. ನಮ್ಮ ನಾಗರಿಕ ಮೌಲ್ಯಗಳು ಮತ್ತು ಸಾಂಸ್ಕೃತಿಕ ಪರಂಪರೆ ಗ್ರಾಮೀಣ ಜೀವನದಲ್ಲಿ ಅಂತರ್ಗತವಾಗಿ ಬೆಸೆದುಕೊಂಡಿವೆ ’’ಎಂದು ಅವರು ಹೇಳಿದರು.

ಜನಪದ ಕಲೆ ನಮ್ಮ ಸಂಸ್ಕೃತಿಯ ಬಹುಮುಖ್ಯ ವೃತ್ತಿ ಎಂದು ಬಣ್ಣಿಸಿದ ಶ್ರೀ ವೆಂಕಯ್ಯ ನಾಯ್ಡು ಅವರು, ಹೆಚ್ಚಿನ ಮನ್ನಣೆ ಇಲ್ಲದ ಅಥವಾ ಪೋಷಣೆ ಇಲ್ಲದ ಕಾರಣ ನಮ್ಮ ಮೌಖಿಕ ಸಂಪ್ರದಾಯಗಳು ಅಳಿಸಿಹೋಗುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ಜಾಗತೀಕರಣ ಮತ್ತು ಸಮೂಹ ಮಾಧ್ಯಮ ವಾಣಿಜ್ಯಗೊಂಡಿರುವುದರಿಂದ ಮುಖ್ಯವಾಹಿನಿಯಲ್ಲಿದ್ದ  ಕಲೆಗಳ ಅವನತಿಗೆ ಸಂಭವನೀಯ ಕಾರಣಗಳೆಂದು ಅವರು ಉಲ್ಲೇಖಿಸಿದರು. ‘ಈ ಸಾಂಸ್ಕೃತಿಕ ಬೇರುಗಳನ್ನು ನಾವು ಶಾಶ್ವತವಾಗಿ ಕಳೆದುಕೊಂಡರೆ ಮತ್ತು ಮರಳಿ ಪಡೆಯಲಾಗದು’’ಎಂದು ಅವರು ಎಚ್ಚರಿಸಿದರು.

ನಮ್ಮ ಜಾನಪದ ಕಲೆಯನ್ನು ಪುನರುಜ್ಜೀವಗೊಳಿಸಲು ಮತ್ತು ಯುವ ಪೀಳಿಗೆಯನ್ನು ಜಾಗೃತಗೊಳಿಸಲು ಉಪರಾಷ್ಟ್ರಪತಿಗಳು ವಾರ್ಷಿಕ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಶಾಲೆ ಮತ್ತು ಕಾಲೇಜುಗಳಲ್ಲಿ ಸ್ಥಳೀಯ ಮತ್ತು ಜನಪದ ಕಲಾ ಪ್ರಕಾರಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದರು. ಸಿನಿಮಾ, ಟಿವಿ ಮತ್ತು ರೇಡಿಯೋ ಮುಂತಾದ ಸಮೂಹ ಮಾಧ್ಯಮಗಳೂ ಸಹ ತಮ್ಮ ವಿಧಾನಕ್ಕೆ ಸೂಕ್ತವಾಗಿ ನಮ್ಮ ಜನಪದ ಕಲಾ ಪ್ರಕಾರದ ಆಯಾಮಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ಆ ಮೂಲಕ ತಮ್ಮ ಪ್ರೇಕ್ಷಕರನ್ನು ತಲುಪಬಹುದು ಎಂದು ಹೇಳಿದರು.

ನಮ್ಮ ಜಾನಪದ ಕಲಾ ಪ್ರಕಾರಗಳನ್ನು ಪುನರುಜ್ಜೀವಗೊಳಿಸಲು ಮತ್ತು ಜನಪ್ರಿಯಗೊಳಿಸಲು ಆನ್ ಲೈನ್ ಮತ್ತು ಡಿಜಿಟಲ್ ವೇದಿಕೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಎಂ.ವೆಂಕಯ್ಯನಾಯ್ಡು ಸಲಹೆ ನೀಡಿದರು. ದೂರದರ್ಶನ ಮತ್ತು ಆಕಾಶವಾಣಿಯಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳು ತಮ್ಮ ಕಾರ್ಯಕ್ರಮಗಳಲ್ಲಿ ಜನಪದ ಕಲೆಗಳಿಗೆ ಹೆಚ್ಚಿನ ಪ್ರಾಮುಖ್ಯ ನೀಡಬೇಕೆಂದು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು, ಜಾನಪದ ಕಲೆಯ ಅಧ್ಯಯನ ಮತ್ತು ಸಂಶೋಧನೆಗೆ ಮೀಸಲಾದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಹೆಸರಿನಲ್ಲಿ ಕರ್ನಾಟಕ ಜನಪದ ವಿಶ್ವವಿದ್ಯಾಲಯ ಸ್ಥಾಪಿಸಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು. “ಇದು ನಮ್ಮ ಜಾನಪದ ಕಲಾ ಪ್ರಕಾರಗಳ ಬಗ್ಗೆ ಅತ್ಯಗತ್ಯವಾಗಿರುವ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಇದು ಮಾಡಲಿದೆ’’ ಎಂದು ಹೇಳಿದರು.

ಇತ್ತೀಚೆಗೆ ರಾಜ್ಯ ಸಂಸ್ಕೃತಿ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾಡಳಿತ ತಮ್ಮ ಗೌರವಾರ್ಥ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪದರ್ಶನ ನೀಡಿದ ಕಲಾವಿದರ ಬಗ್ಗೆ ಉಪರಾಷ್ಟ್ರಪತಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿಶೇಷವಾಗಿ, ಹೊಸಪೇಟೆಯ 15ವರ್ಷದ ಮೀರಾ ಅವರ ಜನಪದ ಗೀತೆಗಳ ಗಾಯನ ಮತ್ತು ಶ್ರೀ ಸತ್ಯನಾರಾಯಣ ಮತ್ತು ತಂಡದ ಕರ್ನಾಟಕ ಜನಪದ ನೃತ್ಯ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು.

ಖ್ಯಾತ ಜಾನಪದ ಗಾಯಕ ಶ್ರೀ ದಾಮೋದರಂ ಗಣಪತಿ ರಾವ್, ಜಾನಪದ ಸಂಶೋಧಕ ಡಾ.ಸಗಿಲಿ ಸುಧಾರಾಣಿ, ಜಾನಪದ ಗಾಯಕ ಡಾ.ಲಿಂಗ ಶ್ರೀನಿವಾಸ್ ಮತ್ತು ಇತರೆ ಜನಪದ ಕಲಾವಿರುವ ಮತ್ತು ಉತ್ಸಾಹಿಗಳು ಕಾರ್ಯಕ್ರಮದಲ್ಲಿ ವರ್ಚುವಲ್ ರೂಪದಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!