58.25 ಕೋಟಿ ಮೈಲುಗಲ್ಲು ದಾಟಿದ ಭಾರತದ ಒಟ್ಟಾರೆ ಕೋವಿಡ್-19 ಲಸಿಕೀಕರಣ

ಬೆಂಗಳೂರು: ಸೋಮವಾರ ಅಂತ್ಯದ ವೇಳೆಗೆ ನೀಡಲಾದ ಪ್ರಾಥಮಿಕ ಮಾಹಿತಿಯ ಪ್ರಕಾರ ಭಾರತದಲ್ಲಿ ಒಟ್ಟು ಕೋವಿಡ್-19 ಲಸಿಕೀಕರಣ ವ್ಯಾಪ್ತಿ 58.25 ಕೋಟಿ (58,25,49,595) ದಾಟಿದೆ. ಇದನ್ನು 64,69,222 ಸೆಷನ್ಸ್ ಗಳಲ್ಲಿ ಸಾಧಿಸಲಾಗಿದೆ.

2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಕೋವಿಡ್-19 ಲಸಿಕೀಕರಣ ವ್ಯಾಪ್ತಿ ಮತ್ತು ವೇಗವನ್ನು ವೃದ್ಧಿಸುತ್ತಿದೆ.

ಕಳೆದ 24 ಗಂಟೆಗಳಲ್ಲಿ 44,157 ರೋಗಿಗಳು ಚೇತರಿಸಿಕೊಳ್ಳುವುದರೊಂದಿಗೆ (ಸಾಂಕ್ರಾಮಿಕ ಆರಂಭವಾದ ನಂತರ) ಒಟ್ಟು ಸೋಂಕಿತರ ಪೈಕಿ ಈಗಾಗಲೇ 3,16,80,626. ಸೋಂಕಿತರು ಗುಣಮುಖರಾಗಿದ್ದಾರೆ.

ಇದರಿಂದಾಗಿ ಕ್ರಮೇಣ ಭಾರತದ ಚೇತರಿಕೆ ಪ್ರಮಾಣ ಶೇ. 97.63%, ತಲುಪಿದ್ದು, ಇದು ಕಳೆದ 2020 ರ ಮಾರ್ಚ್ ನಿಂದೀಚೆಗೆ ಅತ್ಯಧಿಕವಾಗಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಸುಸ್ಥಿರ ಹಾಗೂ ಸಹಭಾಗಿತ್ವದ ಪ್ರಯತ್ನಗಳಿಂದಾಗಿ ಸತತ 57 ದಿನಗಳಿಂದ ಪ್ರತಿ ದಿನ ಹೊಸ ಪ್ರಕರಣಗಳ ಸಂಖ್ಯೆ 50,000ಕ್ಕಿಂತಲೂ ಕಡಿಮೆ ಇದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 25,072 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ 160 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ.

ಹೆಚ್ಚಿನ ಸಂಖ್ಯೆಯ ಸೋಂಕಿತರು ಗುಣಮುಖವಾಗುತ್ತಿರುವುದರಿಂದ ಮತ್ತು ಹೊಸ ಪ್ರಕರಣಗಳ ಸಂಖ್ಯೆ ತಗ್ಗುತ್ತಿರುವುದರಿಂದ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಂದು 3,33,924 ಇದ್ದು, ಇದು ಕಳೆದ 155 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಮತ್ತು ಕಳೆದ ಮಾರ್ಚ್ 2020ರಿಂದೀಚೆಗೆ ದೇಶದ ಒಟ್ಟಾರೆ ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 1.03% ರಷ್ಟಾಗುತ್ತದೆ.

ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕು ಪರೀಕ್ಷೆಗಳ ಸಾಮರ್ಥ್ಯವನ್ನು ಗಣನೀಯವಾಗಿ ವೃದ್ಧಿಸಲಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 12,95,160 ಪರೀಕ್ಷೆಗಳನ್ನು ನಡೆಸಲಾಗಿದೆ. ಒಟ್ಟಾರೆ ಭಾರತ ಈವರೆಗೆ 50.75 ಕೋಟಿ(50,75,51,399) ಪರೀಕ್ಷೆಗಳನ್ನು ನಡೆಸಲಾಗಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ವೃದ್ಧಿಸಲಾಗುತ್ತಿದೆ. ಮತ್ತೊಂದೆಡೆ ವಾರದ ಪಾಸಿಟಿವಿಟಿ ದರ ಇಳಿಕೆಯಾಗುತ್ತಿರುವುದು ಕಂಡುಬಂದಿದೆ. ವಾರದ ಪಾಸಿಟಿವಿಟಿ ದರ ಸದ್ಯ ಶೇ.1.91ರಷ್ಟಿದ್ದು, ಇದು ಕಳೆದ 59 ದಿನಗಳಲ್ಲಿ ಶೇ.3ಕ್ಕಿಂತ ಕಡಿಮೆಯಾಗಿದೆ. ದಿನದ ಪಾಸಿಟಿವಿಟಿ ದರ ಇಂದು ಶೇ1.94ರಷ್ಟಿದೆ. ದಿನದ ಪಾಸಿಟಿವಿಟಿ ದರ ಕಳೆದ 28 ದಿನಗಳಿಂದ ನಿರಂತರವಾಗಿ ಶೇ.3ಕ್ಕಿಂತ ಕಡಿಮೆ ಇದೆ ಮತ್ತು ಕಳೆದ 77 ದಿನಗಳಿಂದ ಶೇ.5ಕ್ಕಿಂತ ಕಡಿಮೆ ಮುಂದುವರಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!