ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 20 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 9 ಕರೊನಾ ಪ್ರಕರಣಗಳು ವರದಿಯಾಗಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ 04 ಪುರುಷರು, ಓರ್ವ ಮಹಿಳೆ ಸೇರಿ 05. ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ತಲಾ ಓರ್ವ ಪುರುಷರು ಹಾಗೂ ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 13 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ದೊಡ್ಡಬಳ್ಳಾಪುರ ತಾಲೂಕಿನ 68 ವರ್ಷದ ವೃದ್ಧೆ, ದೇವನಹಳ್ಳಿ ತಾಲೂಕಿನ 70 ವರ್ಷದ ವೃದ್ಧ ಸೇರಿ ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ 46 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 211ಕ್ಕೆ ಇಳಿಕೆಯಾಗಿದೆ. ಅಲ್ಲದೆ 2137 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 3812 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..