ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ: ಮತದಾರರಿಂದ ಹಣದ ಬೇಡಿಕೆ ಆರೋಪ…! / ಆತಂಕದಲ್ಲಿ ಅಭ್ಯರ್ಥಿಗಳು.

ದೊಡ್ಡಬಳ್ಳಾಪುರ: ಪ್ರತಿ ಚುನಾವಣೆಯಲ್ಲಿ ಸ್ಪರ್ಧಿಗಳು ಮತದಾರನ ಓಲೈಕೆ ಸುದ್ದಿ, ಚುನಾವಣಾ ಆಯೋಗದ ಕ್ರಮ, ಮತ್ತಿತರ ಸುದ್ದಿಗಳೆ ನಮಗೆ ಕಾಣಿಸುವುದು. ಆದರೆ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಯಲ್ಲಿ ಹಣ ನೀಡಿದವರು ಮಾತ್ರ ಚುನಾಯಿತರಾಗುವುದು ಎಂದು ಬಹಿರಂಗವಾಗಿ ಮತದಾರರೇ ಅಭ್ಯರ್ಥಿಗಳನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂಬ ಆತಂಕಕಾರಿ ಆರೋಪ ಕೇಳಿ ಬಂದಿದೆ.

Guarantee scheme
ಎನ್ ವಿಶ್ವನಾಥ್

ಸೆ.3 ರಂದು ನಡೆಯಲಿರುವ ನಗರಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್-31, ಬಿಜೆಪಿ-30, ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್‍ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು 15  ಸೇರಿ 119 ಮಂದಿ ಕಣದಲ್ಲಿದ್ದಾರೆ.

ಎರಡುವರೆ ವರ್ಷಗಳ ನಂತರ ಜನಪ್ರತಿನಿದಿಗಳ ಕೈಗೆ ಅಧಿಕಾರ ಸಿಗಲಿದೆ., ರಾಷ್ಟ್ರೀಯ ಪಕ್ಷಗಳ ವಿರುದ್ಧ ಜೆಡಿಎಸ್, ಸಿಪಿಐ, ಬಿಎಸ್‍ಪಿ, ಕನ್ನಡ ಪಕ್ಷ, ಕೆ.ಆರ್.ಎಸ್, ಉತ್ತಮ ಪ್ರಜಾಕೀಯ ಪಕ್ಷ, ಎಸ್.ಡಿ.ಪಿ.ಐ, ಹಾಗೂ ಪಕ್ಷೇತರರು ಸ್ಪರ್ಧೆಗಿಳಿದಿದ್ದು ಚುನಾವಣೆ ಕಾವು ತೀವ್ರವಾಗಿದೆ‌. 

ಪ್ರತೀ ಚುನಾವಣೆಯಲ್ಲಿ ಮತದಾರರ ಸೆಳೆಯಲು ಸ್ಪರ್ಧಿಗಳು ನಾನಾ ರೀತಿಯ ಕಾರ್ಯತಂತ್ರ ನಡೆಸುತ್ತಾರೆ. ಆದರೆ ಈ ಚುನಾವಣೆಯಲ್ಲಿ ಮತದಾರರೇ ಸ್ಪರ್ದಿಗಳು ಚುನಾಯಿತರಾಗಬೇಕಾದರೆ ಹಣ ವೆಚ್ಚ ಮಾಡಬೇಕು ಎಂದು ಹಲವು ವಾರ್ಡ್ ಗಳಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಅಳಲು ಸ್ಪರ್ದಿಸಿರುವ ಅಭ್ಯರ್ಥಿಗಳದ್ದಾಗಿದೆ.

ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಸಂಕಲ್ಪ, ಆದರೆ ಮತದಾನ ಮಾಡಲು ಹಣದ ಬೇಡಿಕೆ ಇಡುತ್ತಿರುವುದು ಇಡೀ ವ್ಯವಸ್ಥೆಗೆ ಆತಂಕ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ಮತದಾರನ ಸೆಳೆಯಲು ಅಭ್ಯರ್ಥಿಗಳು ವಿವಿಧ ಆಮಿಷ ಒಡ್ಡುವುದು ಕೇಳಿ ಬರುತ್ತವೆ. ಆದರೆ ಮತದಾರ ಹಣ ನೀಡಿದರೆ ಮಾತ್ರ ಮತ ನೀಡುತ್ತೇವೆ ಎನ್ನುವ ಮಟ್ಟಕ್ಕೆ ಇಳಿದಿರುವುದು ಅಭ್ಯರ್ಥಿಗಳನ್ನು ಆತಂಕಕ್ಕೆ ತಳ್ಳಿದೆ.

ಈ ಕುರಿತು ಹೆಸರೇಳಲು ಇಚ್ಚಿಸದ ಯುವ ಅಭ್ಯರ್ಥಿ ಹರಿತಲೇಖನಿಯೊಂದಿಗೆ ಮಾತನಾಡಿ, ಉತ್ತಮ ಕೆಲಸ ಮಾಡಬೇಕು, ನಗರವನ್ನು ಅಭಿವೃದ್ಧಿ ಮಾಡಬೇಕು ಎಂದು ಚುನಾವಣೆಗೆ ಸ್ಪರ್ಧಿಸಿದೆ. ಇಷ್ಟು ದಿನ ಅಧಿಕಾರಿಗಳು ಭ್ರಷ್ಟರು, ರಾಜಕಾರಣಿಗಳು ಭ್ರಷ್ಟರು ಎಂದು ಹೋರಾಟ ನಡೆಸುತ್ತಿದೆ ಆದರೆ ಮತದಾರನೆ ಭ್ರಷ್ಟನಾಗಿದ್ದಾನೆ ಎಂಬ ಅನುಮಾನ ಕಾಡುತ್ತಿದೆ. ಶೇ.75 ರಷ್ಟು ಜನ ಹಣ ನೀಡಿದರೆ ಮಾತ್ರ ಗೆಲ್ಲಲು ಸಾಧ್ಯ ಎಂದು ಬಹಿರಂಗವಾಗಿ ಹೇಳುತ್ತಿದ್ದು, ವ್ಯವಸ್ಥೆ ಹಾಳಾಗಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿ ಅನ್ವಯ ಈ ಚುನಾವಣೆಯಲ್ಲಿ ಗೆಲ್ಲಲು ಒಬ್ಬ ಅಭ್ಯರ್ಥಿ ಕನಿಷ್ಠ 25 ಲಕ್ಷ ಮೀಸಲಿಡಬೇಕು ಎನ್ನುವ ಸುದ್ದಿ ಹರಿದಾಡುತ್ತಿದೆ. ಮತ ಯಾಚನೆಗೆ ಓಡಾಡುವ ಪುರಯಷರಿಗೆ ಇಷ್ಟು, ಮಹಿಳೆಯರಿಗೆ ಇಷ್ಟು ಎಂದು ನೀಡಲೇ ಬೇಕಿದೆ. ಉಳಿದಂತೆ ಮದ್ಯದ ಅಮಲು ಪ್ರತಿ ನಿತ್ಯ ಏರಿಸಲೇ ಬೇಕಿದೆಯಂತೆ. ಅಲ್ಲದೆ ಒಂದು ಓಟಿಗೆ ಒಂದು ಸಾವಿರ ಎಂಬ ಅಘೋಷಿತ ವೆಚ್ಚಕ್ಕೆ ಗೆಲುವಿಗಾಗಿ ಪಣ ತೊಟ್ಟಿರುವ ಅಭ್ಯರ್ಥಿಗಳು ಸಿದ್ದರಾಗಿದ್ದಾರೆಂದು ಸುದ್ದಿ ಹರಿದಾಡುತ್ತಿತ್ತು, ಪ್ರತಿಷ್ಟಿತ ವಾರ್ಡ್ಗಳಲ್ಲಿ ಇದರ ವೆಚ್ಚ ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

ಪಾರದರ್ಶಕ ಚುನಾವಣೆ ನಡೆಸಲು ಅಧಿಕಾರಿಗಳು ಹಲವು ಕ್ರಮಕೈಗೊಂಡಿದ್ದಾರಾದರೂ, ರಂಗೋಲಿ ಕೆಳಗೆ ಅಕ್ರಮ ನಡೆಸುವ ಜನರ ತಡೆಯುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಮತದಾನದ ಪಾವಿತ್ರತೆಯನ್ನು ಅರಿವುಂಟು ಮಾಡಬೇಕೆಂದು ಪ್ರಜ್ಞಾವಂತರು ಒತ್ತಾಯಿಸಿದ್ದಾರೆ‌. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!