ಬೆಂ.ಗ್ರಾ.ಜಿಲ್ಲೆ: ಪೊಲೀಸರ ಹೆದ್ದಾರಿ ಗಸ್ತು ವಾಹನ ಕ್ರಿಸ್ಟಾ ಕಾರಿಗೆ, ಟಾಟಾ ಸಫಾರಿ ಗೂಡ್ಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸರ ಕ್ರಿಸ್ಟಾ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಆವತಿ ಗ್ರಾಮದ ಸಾಯಿಬಾಬಾ ದೇಗುಲದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಪೊಲೀಸರ ಕಾರಿಗೆ ಅತಿ ವೇಗವಾಗಿ ಬರ್ತಿದ್ದ ಟಾಟಾ ಸಫಾರಿ ಕ್ಯಾಬಿನ್ ಇರುವ ಗೂಡ್ಸ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಪೊಲೀಸರ ಕಾರು ನೆಲಕ್ಕೆ ಅಡ್ಡಲಾಗಿ ಉರುಳಿಬಿದ್ದಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ರಾಮಕೃಷ್ಣ ಹಾಗೂ ಪೊಲೀಸ್ ಮುಖ್ಯ ಪೇದೆ ನಾರಾಯಣರಾವ್ ಸಣ್ಣ ಪ್ರಮಾಣದ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಂತರ ಟಾಟಾ ಸಫಾರಿ ಕಾರು ಬಿಟ್ಟು ಚಾಲಕ ಸೇರಿ ಅದರಲ್ಲಿದ್ದವರು ಪರಾರಿಯಾಗಿದ್ದಾರೆ.
ವಿಜಯಪುರ ಪೊಲೀಸ್ ಠಾಣೆಗೆ ಸೇರಿದ ಹೆದ್ದಾರಿ ಗಸ್ತು ವಾಹನ ಇದಾಗಿದ್ದ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಘಟನಾ ಸ್ಥಳಕ್ಕೆ ಸಿಪಿಐ ಶ್ರೀನಿವಾಸ್ ಭೇಟಿ ನೀಡಿ ಗಾಯಾಳುಗಳ ಹಾರೈಕೆ ಮಾಡಿ ವಾಹನಗಳನ್ನ ಪೊಲೀಸ್ ಠಾಣೆಯತ್ತ ಕೊಂಡೊಯ್ದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..