ಜಾತಿ ಗಣತಿ ವರದಿಯನ್ನು ಒಪ್ಪದ ಬಿಜೆಪಿ ನಾಯಕರು, ಕುಂಟು ನೆಪಗಳನ್ನು ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದ ಬಿಜೆಪಿ ನಾಯಕರು, ಅದು ಸೋರಿಕೆ ಯಾಗಿದೆ, ವೈಜ್ಞಾನಿಕವಾಗಿಲ್ಲ ಎಂಬ ಕುಂಟು ನೆಪಗಳನ್ನು ಹೇಳುತ್ತಿದ್ದಾರೆ.

ಸೋರಿಕೆ ಬಗ್ಗೆ ಖಚಿತ ಮಾಹಿತಿ ಮುಖ್ಯಮಂತ್ರಿಗಳ ಬಳಿ ಇದ್ದರೆ ಅದರ ಬಗ್ಗೆ ತನಿಖೆ ನಡೆಸಲಿ ಎಂದು‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಸೋರಿಕೆ ಆಗಿದೆಯೆನ್ನಲಾದ ಜಾತಿಗಣತಿ ವರದಿಯ ಅಂಶಗಳೇ ಮೂಲ ವರದಿಯಲ್ಲಿ ಇವೆ ಎನ್ನುವುದನ್ನು ಬಿಜೆಪಿ ಅಷ್ಟೊಂದು ವಿಶ್ವಾಸದಿಂದ ಹೇಗೆ ಹೇಳಲು ಸಾಧ್ಯ? ಸರ್ಕಾರದ ಬಳಿ ಇರಬೇಕಾದ ಮೂಲ ವರದಿ ಬಿಜೆಪಿಯ ರಾಜ್ಯ ಕಚೇರಿಯಲ್ಲಿದೆಯೇ ಮುಖ್ಯಮಂತ್ರಿಗಳ ಕಚೇರಿಯಿಂದ ಅದು ಸೋರಿಕೆಯಾಗಿದೆಯೇ?

ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿಯೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ನನ್ನ ಉದ್ದೇಶವಾಗಿತ್ತು. ಅಂಕಿಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ ವಿಶ್ಲೇಷಣೆಯ ಕೆಲಸ ಪೂರ್ಣಗೊಂಡಿರದ ಕಾರಣ  ಸಾಧ್ಯವಾಗಿರಲಿಲ್ಲ. 

ಜಾತಿ ಗಣತಿ ವರದಿಯನ್ನು ನಮ್ಮ ಪಕ್ಷದ ನಾಯಕರು ವಿರೋಧಿಸಿದ್ದರು ಎನ್ನುವುದು ಕಪೋಲ ಕಲ್ಪಿತ ಆರೋಪ. ಯಾರು? ಯಾವಾಗ? ವಿರೋಧಿಸಿದ್ದರು ಎನ್ನುವುದನ್ನು ಬಿಜೆಪಿ ನಾಯಕರು ಬಹಿರಂಗ ಪಡಿಸಬೇಕು.

ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನು ಕಳೆದುಹೋಗುವುದಿಲ್ಲ. ಸೋರಿಕೆಯಿಂದಾಗಿ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ? ಅದೊಂದು ಸಮೀಕ್ಷಾ ವರದಿ.ಪರಿಶೀಲನೆ ನಡೆಯಬೇಕಾಗಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಅದರ ಬಗ್ಗೆ ಚರ್ಚೆ ನಡೆಯಲಿ.

ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ಮರಳಿ ರಾಜ್ಯ ಸರ್ಕಾರಕ್ಕೆ ನೀಡುವ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಸಂಸತ್ ನಲ್ಲಿ ನಮ್ಮ ಪಕ್ಷದ ಸದಸ್ಯರು ಬೆಂಬಲಿಸಿರುವುದು ನಿಜ. ಆ ತಿದ್ದುಪಡಿ ಕಾಂಗ್ರೆಸ್ ಪಕ್ಷದ ಬೇಡಿಕೆಯ ಒತ್ತಡದಿಂದಾಗಿಯೇ ಮಂಡಿಸಲಾಗಿತ್ತು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನೆಪದಲ್ಲಿ ಸಂವಿಧಾನಕ್ಕೆ 123ನೇ ತಿದ್ದುಪಡಿ ಮಾಡಿ ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಕೇಂದ್ರದ ಬಿಜೆಪಿ ಸರ್ಕಾರದ ಹುನ್ನಾರವನ್ನು 2017ರಲ್ಲಿಯೇ ನಮ್ಮ ಪಕ್ಷ ವಿರೋಧಿಸಿತ್ತು.

ಸಂವಿಧಾನದ 123ನೇ ತಿದ್ದುಪಡಿ ಮೂಲಕ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾವನ್ನು ರಾಜ್ಯಗಳಿಂದ ಕಿತ್ತುಕೊಂಡದ್ದನ್ನು ಕೇಂದ್ರ ಬಿಜೆಪಿ ಸರ್ಕಾರ 127ನೇ ತಿದ್ದುಪಡಿ ಮೂಲ ಮರಳಿ ನೀಡಿದೆ. 

ಇದೇನು ಹಿಂದುಳಿದ ಜಾತಿಗಳಿಗೆ ಮಾಡಿರುವ ಉಪಕಾರ ಅಲ್ಲ. ಮಾಡಿರುವ ತಪ್ಪನ್ನು ಒಪ್ಪಿ ಸರಿಪಡಿಸಿದೆಯಷ್ಟೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!