ಜಾತಿ ಗಣತಿ ವರದಿಯನ್ನು ಒಪ್ಪದ ಬಿಜೆಪಿ ನಾಯಕರು, ಕುಂಟು ನೆಪಗಳನ್ನು ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದ ಬಿಜೆಪಿ ನಾಯಕರು, ಅದು ಸೋರಿಕೆ ಯಾಗಿದೆ, ವೈಜ್ಞಾನಿಕವಾಗಿಲ್ಲ ಎಂಬ ಕುಂಟು ನೆಪಗಳನ್ನು ಹೇಳುತ್ತಿದ್ದಾರೆ.

Guarantee scheme
ಎನ್ ವಿಶ್ವನಾಥ್

ಸೋರಿಕೆ ಬಗ್ಗೆ ಖಚಿತ ಮಾಹಿತಿ ಮುಖ್ಯಮಂತ್ರಿಗಳ ಬಳಿ ಇದ್ದರೆ ಅದರ ಬಗ್ಗೆ ತನಿಖೆ ನಡೆಸಲಿ ಎಂದು‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಸೋರಿಕೆ ಆಗಿದೆಯೆನ್ನಲಾದ ಜಾತಿಗಣತಿ ವರದಿಯ ಅಂಶಗಳೇ ಮೂಲ ವರದಿಯಲ್ಲಿ ಇವೆ ಎನ್ನುವುದನ್ನು ಬಿಜೆಪಿ ಅಷ್ಟೊಂದು ವಿಶ್ವಾಸದಿಂದ ಹೇಗೆ ಹೇಳಲು ಸಾಧ್ಯ? ಸರ್ಕಾರದ ಬಳಿ ಇರಬೇಕಾದ ಮೂಲ ವರದಿ ಬಿಜೆಪಿಯ ರಾಜ್ಯ ಕಚೇರಿಯಲ್ಲಿದೆಯೇ ಮುಖ್ಯಮಂತ್ರಿಗಳ ಕಚೇರಿಯಿಂದ ಅದು ಸೋರಿಕೆಯಾಗಿದೆಯೇ?

ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿಯೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ನನ್ನ ಉದ್ದೇಶವಾಗಿತ್ತು. ಅಂಕಿಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ ವಿಶ್ಲೇಷಣೆಯ ಕೆಲಸ ಪೂರ್ಣಗೊಂಡಿರದ ಕಾರಣ  ಸಾಧ್ಯವಾಗಿರಲಿಲ್ಲ. 

ಜಾತಿ ಗಣತಿ ವರದಿಯನ್ನು ನಮ್ಮ ಪಕ್ಷದ ನಾಯಕರು ವಿರೋಧಿಸಿದ್ದರು ಎನ್ನುವುದು ಕಪೋಲ ಕಲ್ಪಿತ ಆರೋಪ. ಯಾರು? ಯಾವಾಗ? ವಿರೋಧಿಸಿದ್ದರು ಎನ್ನುವುದನ್ನು ಬಿಜೆಪಿ ನಾಯಕರು ಬಹಿರಂಗ ಪಡಿಸಬೇಕು.

ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನು ಕಳೆದುಹೋಗುವುದಿಲ್ಲ. ಸೋರಿಕೆಯಿಂದಾಗಿ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ? ಅದೊಂದು ಸಮೀಕ್ಷಾ ವರದಿ.ಪರಿಶೀಲನೆ ನಡೆಯಬೇಕಾಗಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಅದರ ಬಗ್ಗೆ ಚರ್ಚೆ ನಡೆಯಲಿ.

ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ಮರಳಿ ರಾಜ್ಯ ಸರ್ಕಾರಕ್ಕೆ ನೀಡುವ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಸಂಸತ್ ನಲ್ಲಿ ನಮ್ಮ ಪಕ್ಷದ ಸದಸ್ಯರು ಬೆಂಬಲಿಸಿರುವುದು ನಿಜ. ಆ ತಿದ್ದುಪಡಿ ಕಾಂಗ್ರೆಸ್ ಪಕ್ಷದ ಬೇಡಿಕೆಯ ಒತ್ತಡದಿಂದಾಗಿಯೇ ಮಂಡಿಸಲಾಗಿತ್ತು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನೆಪದಲ್ಲಿ ಸಂವಿಧಾನಕ್ಕೆ 123ನೇ ತಿದ್ದುಪಡಿ ಮಾಡಿ ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಕೇಂದ್ರದ ಬಿಜೆಪಿ ಸರ್ಕಾರದ ಹುನ್ನಾರವನ್ನು 2017ರಲ್ಲಿಯೇ ನಮ್ಮ ಪಕ್ಷ ವಿರೋಧಿಸಿತ್ತು.

ಸಂವಿಧಾನದ 123ನೇ ತಿದ್ದುಪಡಿ ಮೂಲಕ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾವನ್ನು ರಾಜ್ಯಗಳಿಂದ ಕಿತ್ತುಕೊಂಡದ್ದನ್ನು ಕೇಂದ್ರ ಬಿಜೆಪಿ ಸರ್ಕಾರ 127ನೇ ತಿದ್ದುಪಡಿ ಮೂಲ ಮರಳಿ ನೀಡಿದೆ. 

ಇದೇನು ಹಿಂದುಳಿದ ಜಾತಿಗಳಿಗೆ ಮಾಡಿರುವ ಉಪಕಾರ ಅಲ್ಲ. ಮಾಡಿರುವ ತಪ್ಪನ್ನು ಒಪ್ಪಿ ಸರಿಪಡಿಸಿದೆಯಷ್ಟೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!