ಮದ್ಯಪಾನಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ / ಹೊರರಾಜ್ಯಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್: ಸಚಿವ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ: ಹೊರ ರಾಜ್ಯಗಳಿಂದ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ಗಾಗಿ ಮಾರ್ಗಸೂಚಿಗಳನ್ನು ಶೀಘ್ರದಲ್ಲೆ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಕುಪ್ಪಳ್ಳಿ ಗ್ರಾಮಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಕರೊನಾ ನೆರೆರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ.  ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಗಳೂರು ಸೇರಿದಂತೆ ರಾಜ್ಯದ ಗಡಿಜಿಲ್ಲೆಗಳಿಗೆ ಕೇರಳದಿಂದ ಪ್ರತಿನಿತ್ಯ ಶಿಕ್ಷಣ , ಆರೋಗ್ಯ, ಮತ್ತು ದೈನಂದಿನ ವಹಿವಾಟುಗಳಿಗೆ  ಜನರು ಬರುತ್ತಿದ್ದಾರೆ.ಅಂತಹವರಿಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಹೇಗಿರಬೇಕೆಂಬ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು. ವಿಮಾನನಿಲ್ದಾಣ, ರೈಲುಗಳಲ್ಲಿ ಬರುವ ಪ್ರವಾಸಿಗರಿಗೆ ಸಾಂಸ್ಥಿಕ ಕ್ವಾರಂಟೈನ್ ಗೆ ಕಡ್ಡಾಯವಾಗಿ ಒಳಪಡಿಸಲಾಗುವುದು.

ಕೆಜಿಎಫ್‌ನಲ್ಲಿ ಒಂದೇ ನರ್ಸಿಂಗ್ ಸ್ಕೂಲ್ನಲ್ಲಿ 32 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಬುಧವಾರ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಶಿಕ್ಷಣ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ನರ್ಸಿಂಗ್ ಸ್ಕೂಲ್‌ಗೆ ಬಂದ ವೇಳೆ ಆರ್ ಟಿ ಪಿಸಿಆರ್ ನೆಗೆಟಿವ್ ವರದಿಯನ್ನು ನೋಡಿ ಪ್ರವೇಶ ನೀಡಬೇಕಿತ್ತು, ಇದು ಶಿಕ್ಷಣ ಸಂಸ್ಥೆಯ ಹೊಣೆಗಾರಿಕೆ ಕೂಡ ಆಗಿದೆ.

ಕೇರಳದಲ್ಲಿ ಪ್ರತಿನಿತ್ಯ 30,000 ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಕರ್ನಾಟಕ ರಾಜ್ಯದಲ್ಲಿ ಪ್ರತಿನಿತ್ಯ 50,000 ಇದ್ದ ಪ್ರಕರಣಗಳನ್ನ700-800ಕ್ಕೆ ಇಳಿಸಲು ಸರ್ಕಾರ  ಸಾಕಷ್ಟು ಶ್ರಮ ವಹಿಸಿದೆ. ಸರ್ಕಾರದ ನಿಯಂತ್ರಣ ಕ್ರಮಗಳ ಜೊತೆಗೆ ಎಲ್ಲ ಕಡೆಯಿಂದಲೂ ಸಹಕಾರ ಬೇಕಿದೆ. ಹಬ್ಬ ಹರಿದಿನ  ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಎಚ್ಚರ ವಹಿಸಬೇಕಿದೆ, ಕೋವಿಡ್ ನ ಎರಡೂ ಲಸಿಕೆಗಳನ್ನು ಪಡೆಯುವವರೆಗೆ ಕೆಲವು ತಿಂಗಳು ಕಾಲ ಮುನ್ನೆಚ್ಚರಿಕೆ ಕೈಗೊಳ್ಳ್ಳಬೇಕಾದ ಅನಿವಾರ್ಯತೆ ಇದೆ.

ಸಾರ್ವಜನಿಕ ಗಣೇಶೋತ್ಸವ ಕುರಿತಂತೆ ಇಲಾಖೆಯಿಂದ ನೀಡಬೇಕಾದ ಸಲಹೆ, ತಾಂತ್ರಿಕ ಸಲಹಾಸಮಿತಿಯ ಅಭಿಪ್ರಾಯವನ್ನು ಮುಖ್ಯಮಂತ್ರಿಯವರಿಗೆ ತಿಳಿಸಲಾಗಿದೆ.

ಕರೊನಾವನ್ನು ನಿಯಂತ್ರಿಸುವ ಒಂದೇ ದೃಷ್ಟೀಕೋನದಿಂದ ನಾವು ಸಲಹೆ ನೀಡಿದ್ದೇವೆ. ಮುಖ್ಯಮಂತ್ರಿಯವರು ಎಲ್ಲ ದೃಷ್ಟೀಕೋನಗಳಿಂದ ಪರಿಶೀಲಿಸಿ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟವನ್ನು ಕೋಚಿಮುಲ್‌ನಿಂದ ಪ್ರತ್ಯೇಕಗೊಳಿಸುವ ವಿಚಾರವು ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು ಮುಖ್ಯ ಮಂತ್ರಿಯವರು ಈಗ ಜಿಲ್ಲೆಯ ಜನರ ಬೇಡಿಕೆ ಈಡೇರಿಸಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಗ ಪ್ರತ್ಯೇಕ ಹಾಲು ಒಕ್ಕೂಟ ಬೇಕು ಎಂಬುದು ಜಿಲ್ಲೆಯ ನ್ಯಾಯಯುತವಾದ ಬೇಡಿಕೆಯಾಗಿದೆ ಎಂದು ಹೇಳಿದರು.

ಮದ್ಯಪಾನಕ್ಕೂ ಲಸಿಕೆಗೂ ಸಂಬಂಧವಿಲ್ಲ:  ಮದ್ಯಪಾನ ಮಾಡುವವರಿಗೆ ಕೊವಿಡ್ ಲಸಿಕೆ ಪಡೆಯುವುದರಿಂದ ಅಡ್ಡ ಪರಿಣಾಮ ಆಗುತ್ತದೆ ಎಂಬುದು ತಪ್ಪು ಕಲ್ಪನೆ. ಮದ್ಯಪಾನ ತ್ಯಜಿಸಿದರೆ ಅರೊಗ್ಯ ದೃಷ್ಠಿಯಿಂದ ಒಳಿತು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಲಸಿಕೆ ಪಡೆದರೆ ಸಾವು, ಸಂತಾನ ಸಮಸ್ಯೆ ಎಂಬುದೆಲ್ಲ ಸುಳ್ಳು. ಈ ವದಂತಿಗಳಿಗೆ ಕಿವಿಗೊಡಬಾರದು. ಲಸಿಕೆ ತೆಗೆದುಕೊಂಡರೆ ಯಾವುದೇ  ಪ್ರತಿಕೂಲ ಪರಿಣಾಮ ಆಗುವುದಿಲ್ಲ ಎಂದವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಅಧ್ಯಕ್ಷರಾದ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ನಗರಸಭಾ ಅಧ್ಯಕ್ಷರಾದ ಆನಂದರೆಡ್ಡಿ ಬಾಬು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ತಹಸಿಲ್ದಾರ್ ಗಣಪತಿಶಾಸ್ತ್ರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!