ಮದ್ಯಪಾನಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ / ಹೊರರಾಜ್ಯಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್: ಸಚಿವ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ: ಹೊರ ರಾಜ್ಯಗಳಿಂದ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ಗಾಗಿ ಮಾರ್ಗಸೂಚಿಗಳನ್ನು ಶೀಘ್ರದಲ್ಲೆ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಕುಪ್ಪಳ್ಳಿ ಗ್ರಾಮಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಕರೊನಾ ನೆರೆರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ.  ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಗಳೂರು ಸೇರಿದಂತೆ ರಾಜ್ಯದ ಗಡಿಜಿಲ್ಲೆಗಳಿಗೆ ಕೇರಳದಿಂದ ಪ್ರತಿನಿತ್ಯ ಶಿಕ್ಷಣ , ಆರೋಗ್ಯ, ಮತ್ತು ದೈನಂದಿನ ವಹಿವಾಟುಗಳಿಗೆ  ಜನರು ಬರುತ್ತಿದ್ದಾರೆ.ಅಂತಹವರಿಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಹೇಗಿರಬೇಕೆಂಬ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು. ವಿಮಾನನಿಲ್ದಾಣ, ರೈಲುಗಳಲ್ಲಿ ಬರುವ ಪ್ರವಾಸಿಗರಿಗೆ ಸಾಂಸ್ಥಿಕ ಕ್ವಾರಂಟೈನ್ ಗೆ ಕಡ್ಡಾಯವಾಗಿ ಒಳಪಡಿಸಲಾಗುವುದು.

ಕೆಜಿಎಫ್‌ನಲ್ಲಿ ಒಂದೇ ನರ್ಸಿಂಗ್ ಸ್ಕೂಲ್ನಲ್ಲಿ 32 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಬುಧವಾರ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಶಿಕ್ಷಣ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ನರ್ಸಿಂಗ್ ಸ್ಕೂಲ್‌ಗೆ ಬಂದ ವೇಳೆ ಆರ್ ಟಿ ಪಿಸಿಆರ್ ನೆಗೆಟಿವ್ ವರದಿಯನ್ನು ನೋಡಿ ಪ್ರವೇಶ ನೀಡಬೇಕಿತ್ತು, ಇದು ಶಿಕ್ಷಣ ಸಂಸ್ಥೆಯ ಹೊಣೆಗಾರಿಕೆ ಕೂಡ ಆಗಿದೆ.

ಕೇರಳದಲ್ಲಿ ಪ್ರತಿನಿತ್ಯ 30,000 ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಕರ್ನಾಟಕ ರಾಜ್ಯದಲ್ಲಿ ಪ್ರತಿನಿತ್ಯ 50,000 ಇದ್ದ ಪ್ರಕರಣಗಳನ್ನ700-800ಕ್ಕೆ ಇಳಿಸಲು ಸರ್ಕಾರ  ಸಾಕಷ್ಟು ಶ್ರಮ ವಹಿಸಿದೆ. ಸರ್ಕಾರದ ನಿಯಂತ್ರಣ ಕ್ರಮಗಳ ಜೊತೆಗೆ ಎಲ್ಲ ಕಡೆಯಿಂದಲೂ ಸಹಕಾರ ಬೇಕಿದೆ. ಹಬ್ಬ ಹರಿದಿನ  ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಎಚ್ಚರ ವಹಿಸಬೇಕಿದೆ, ಕೋವಿಡ್ ನ ಎರಡೂ ಲಸಿಕೆಗಳನ್ನು ಪಡೆಯುವವರೆಗೆ ಕೆಲವು ತಿಂಗಳು ಕಾಲ ಮುನ್ನೆಚ್ಚರಿಕೆ ಕೈಗೊಳ್ಳ್ಳಬೇಕಾದ ಅನಿವಾರ್ಯತೆ ಇದೆ.

ಸಾರ್ವಜನಿಕ ಗಣೇಶೋತ್ಸವ ಕುರಿತಂತೆ ಇಲಾಖೆಯಿಂದ ನೀಡಬೇಕಾದ ಸಲಹೆ, ತಾಂತ್ರಿಕ ಸಲಹಾಸಮಿತಿಯ ಅಭಿಪ್ರಾಯವನ್ನು ಮುಖ್ಯಮಂತ್ರಿಯವರಿಗೆ ತಿಳಿಸಲಾಗಿದೆ.

ಕರೊನಾವನ್ನು ನಿಯಂತ್ರಿಸುವ ಒಂದೇ ದೃಷ್ಟೀಕೋನದಿಂದ ನಾವು ಸಲಹೆ ನೀಡಿದ್ದೇವೆ. ಮುಖ್ಯಮಂತ್ರಿಯವರು ಎಲ್ಲ ದೃಷ್ಟೀಕೋನಗಳಿಂದ ಪರಿಶೀಲಿಸಿ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟವನ್ನು ಕೋಚಿಮುಲ್‌ನಿಂದ ಪ್ರತ್ಯೇಕಗೊಳಿಸುವ ವಿಚಾರವು ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು ಮುಖ್ಯ ಮಂತ್ರಿಯವರು ಈಗ ಜಿಲ್ಲೆಯ ಜನರ ಬೇಡಿಕೆ ಈಡೇರಿಸಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಗ ಪ್ರತ್ಯೇಕ ಹಾಲು ಒಕ್ಕೂಟ ಬೇಕು ಎಂಬುದು ಜಿಲ್ಲೆಯ ನ್ಯಾಯಯುತವಾದ ಬೇಡಿಕೆಯಾಗಿದೆ ಎಂದು ಹೇಳಿದರು.

ಮದ್ಯಪಾನಕ್ಕೂ ಲಸಿಕೆಗೂ ಸಂಬಂಧವಿಲ್ಲ:  ಮದ್ಯಪಾನ ಮಾಡುವವರಿಗೆ ಕೊವಿಡ್ ಲಸಿಕೆ ಪಡೆಯುವುದರಿಂದ ಅಡ್ಡ ಪರಿಣಾಮ ಆಗುತ್ತದೆ ಎಂಬುದು ತಪ್ಪು ಕಲ್ಪನೆ. ಮದ್ಯಪಾನ ತ್ಯಜಿಸಿದರೆ ಅರೊಗ್ಯ ದೃಷ್ಠಿಯಿಂದ ಒಳಿತು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಲಸಿಕೆ ಪಡೆದರೆ ಸಾವು, ಸಂತಾನ ಸಮಸ್ಯೆ ಎಂಬುದೆಲ್ಲ ಸುಳ್ಳು. ಈ ವದಂತಿಗಳಿಗೆ ಕಿವಿಗೊಡಬಾರದು. ಲಸಿಕೆ ತೆಗೆದುಕೊಂಡರೆ ಯಾವುದೇ  ಪ್ರತಿಕೂಲ ಪರಿಣಾಮ ಆಗುವುದಿಲ್ಲ ಎಂದವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಅಧ್ಯಕ್ಷರಾದ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ನಗರಸಭಾ ಅಧ್ಯಕ್ಷರಾದ ಆನಂದರೆಡ್ಡಿ ಬಾಬು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ತಹಸಿಲ್ದಾರ್ ಗಣಪತಿಶಾಸ್ತ್ರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]