ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 04 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 19 ಕರೊನಾ ಪ್ರಕರಣಗಳು ವರದಿಯಾಗಿದ್ದರೆ, ಚಿಕಿತ್ಸೆಗೆ ದಾಖಲಾಗಿದ್ದ ನೆಲಮಂಗಲ ತಾಲೂಕಿನ ಓರ್ವ ಮಹಿಳೆ ಸಾವನಪ್ಪಿದ್ದಾರೆ ಎಂದು ಬುಲೆಟಿನ್ ವರದಿ ತಿಳಿಸಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ 03 ಪುರುಷ, 03 ಮಹಿಳೆಯರು ಸೇರಿ 06. ಹೊಸಕೋಟೆ ತಾಲೂಕಿನ 03 ಪುರುಷರು. ದೇವನಹಳ್ಳಿ ತಾಲೂಕಿನ ಓರ್ವ ಪುರುಷ, 02 ಮಹಿಳೆಯರು ಸೇರಿ 03. ದೊಡ್ಡಬಳ್ಳಾಪುರ ತಾಲೂಕಿನ 04 ಪುರುಷರು, 03 ಮಹಿಳೆಯರು ಸೇರಿ 07 ಮತ್ತು ಅನ್ಯ ಜಿಲ್ಲೆಯವರು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 19 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ಚಿಕಿತ್ಸೆಗೆ ದಾಖಲಾಗಿದ್ದ ನೆಲಮಂಗಲ ತಾಲೂಕಿನ 78 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 53 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ಅಲ್ಲದೆ 2157ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 2198 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..