ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸೈಕಲ್ ರ‍್ಯಾಲಿಗೆ ಆರ್.ಲತಾ ಚಾಲನೆ

ಚಿಕ್ಕಬಳ್ಳಾಪುರ: ನಮ್ಮ ದೇಶಕ್ಕೆ ಸುಲಭವಾಗಿ ಆಂಗ್ಲರಿಂದ ಸ್ವಾತಂತ್ರ್ಯ ಸಿಕ್ಕಿಲ್ಲ,  ಹಲವು ಹೋರಾಟಗಳ ಹಾಗೂ ಮಹಾನ್ ಸ್ವಾಂತತ್ರ್ಯ ಹೋರಾಟಗಾರರ ಅವಿರತ ಶ್ರಮ ಮತ್ತು ತ್ಯಾಗ ಬಲಿದಾನಗಳ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅಭಿಪ್ರಾಯ ಪಟ್ಟರು.

ಅವರು ಶುಕ್ರವಾರ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿ.ಆರ್.ಪಿ.ಎಫ್)   ಜೆ. ಸಿ ಬೆಟಾಲಿಯನ್   ಯೋಧರ ಸೈಕಲ್ ರ‍್ಯಾ ಲಿಗೆ ಚಾಲನೆ ನೀಡಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು 2022 ವರ್ಷಕ್ಕೆ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಭಾಗವಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯು (ಸಿ.ಆರ್.ಪಿ.ಎಫ್) ಕನ್ಯಾಕುಮಾರಿಯಿಂದ ನವದೆಹಲಿಯ ರಾಜ್ ಘಾಟ್ ವರೆಗೂ ಸೈಕಲ್   ರ‍್ಯಾಲಿಯನ್ನು ಕಳೆದ ಆಗಸ್ಟ್ 22 ರಿಂದ  ಅಕ್ಟೋಬರ್ 02ರ ವರೆಗೆ ಹಮ್ಮಿಕೊಂಡಿದೆ. 

ಈ  ಸೈಕಲ್ ರ‍್ಯಾಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮೂಲಕ ಸಾಗುವುದು ನಮ್ಮ ಅದೃಷ್ಟ ಇಂತಹ ಭಾಗ್ಯ ಕೆಲವೇ ಜಿಲ್ಲೆಗಳಿಗೆ ಸಿಗಲಿದೆ. ಆದ್ದರಿಂದ ಈ ರ‍್ಯಾಲಿಗೆ  ಚಾಲನೆ ನೀಡುವ ಕಾರ್ಯಕ್ಕೆ ನಮ್ಮ ಜಿಲ್ಲೆಗೂ ಅವಕಾಶ ಸಿಕ್ಕಿರುವುದು ನಮಗೆಲ್ಲ ಸಂತಸ ತಂದಿದೆ. ಜಿಲ್ಲೆಯಲ್ಲಿ    ಹಬ್ಬದ   ವಾತಾವರಣ  ಮೂಡಿದ್ದು ಯುವಕರಲ್ಲಿ ಸ್ಪೂರ್ತಿತುಂಬಿದೆ, ಎಲ್ಲರಲ್ಲೂ ದೇಶ ಭಕ್ತಿ ಇಮ್ಮಡಿಗೊಂಡಿದೆ ಈ ಮೂಲಕ ಸ್ವಾಂತತ್ರ್ಯ ಐತಿಹಾಸಿಕ ಮಹತ್ವವನ್ನು ನಮಗೆಲ್ಲರಿಗೂ ತಿಳಿಸಿಕೊಟ್ಟಿದೆ  ಎಂದು ರ‍್ಯಾಲಿ  ಬಗ್ಗೆ ಮೆಚ್ಚುಗೆ ವೆಕ್ತಪಡಿಸಿದರು.

ಯೋಧರ ದೇಶ ಕಾಯುವ ಸೇವೆಯು ಉಳಿದ ಎಲ್ಲಾ ಸೇವೆಗಳಿಗಿಂತ ಶ್ರೇಷ್ಠವಾದದ್ದು, ಇಂತಹ ಯೋಧರೊಂದಿಗೆ ಆಜಾದ್ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ  ವಿಚಾರ.20 ಜನರ ಈ ಪಡೆ  ಪ್ರತಿ ದಿನ 80 ರಿಂದ 90 ಕಿ.ಮೀ ಸಾಗಲಿದೆ. ತಮಿಳುನಾಡು, ಕೇರಳ, ಕರ್ನಾಟಕ  ಆಂಧ್ರಪ್ರದೇಶ,  ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳ ಮುಖಾಂತರ   ಸು.2500 ಕಿ.ಮೀ ಸಾಗಿ ಅಕ್ಟೋಬರ್ 02ರ ಮಹಾತ್ಮ ಗಾಂಧೀಜಿ ಜಯಂತಿಯಂದು ನವದೆಹಲಿಯ ರಾಜ್ ಘಾಟ್ ನ್ನು ತಲುಪಲಿದೆ.  ಈ  ಪಡೆಗೆ  ಶುಭವಾಗಲಿ, ಯಶಸ್ವಿಯಾಗಿ ಗುರಿ ತಲುಪಿ ದೇಶದೆಲ್ಲೆಡೆ ಹಬ್ಬದ ವಾತಾವರಣವನ್ನು ಮೂಡಿಸಿ  ದೇಶ ಭಕ್ತಿಯನ್ನ  ಮೊಳಗಿಸಲಿ ಎಂದರು.

ಇದಲ್ಲದೇ ಜಿಲ್ಲೆಯಲ್ಲಿ ಅಮೃತ್ ಮಹತ್ಸೋವ ಕಾರ್ಯಕ್ರಮದ ನಿಮಿತ್ತ ಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಆಯೋಜಿಸಲಾಗಿದೆ. ದೇಶ ಭಕ್ತಿ ಸಾರುವ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕಳೆದ ಮಾರ್ಚ್ 12 ರಂದು ವಿಧುರಾಶ್ವತ್ಥದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮವನ್ನು ಅಂದಿನ ಮಾನ್ಯ ರಾಜ್ಯಪಾಲರು ಮತ್ತು ಮಾನ್ಯ ಮುಖ್ಯಮಂತ್ರಿಗಳು ಉದ್ಘಾಟಿಸಿರುವುದನ್ನು ಮೆಲುಕು  ಹಾಕಿ ಮುಂದಿನ  ದಿನಗಳಲ್ಲಿ  ಈ  ನಿಟ್ಟಿನಲ್ಲಿ  ಹಲವು  ಕಾರ್ಯಕ್ರಮಗಳನ್ನು  ಆಯೋಜಿಸುವುದಾಗಿ  ತಿಳಿಸಿದರು.

ಈ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್ ನ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಕುಮಾರ್ ರವರು ಮಾತನಾಡಿ, ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಮ್ಮ ಪಡೆಯ ಸೈಕಲ್ ರ‍್ಯಾಲಿಗೆ  ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅಭೂತ ಪೂರ್ವ ಸ್ವಾಗತ ನೀಡಿ ಒಂದು ದಿನ ಇಲ್ಲಿ ತಂಗಲು ಸಕಲ ವ್ಯವಸ್ಥೆ ಕಲ್ಪಿಸಿ  ಸತ್ಕರಿಸಿದ್ದಕ್ಕೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಈ  ವೇಳೆ ಸಂಪನ್ಮೂಲ ವ್ಯಕ್ತಿಯಾಗಿ ಡಾ|| ಚಿನ್ನಕೈವಾರಮಯ್ಯ ಅವರು ಮಾತನಾಡಿ, ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಿ.ಆರ್.ಪಿ.ಎಫ್ ಪಡೆಯ  ಒಂದು ತಂಡ ಕನ್ಯಾಕುಮಾರಿಯಿಂದ ನವದೆಹಲಿಯ ರಾಜ್ ಘಾಟ್ ವರೆಗೆ, ಮತ್ತೋಂದು ತಂಡ ಕಾಶ್ಮೀರದಿಂದ ರಾಜ್ ಘಾಟ್ ವರೆಗೆ, ಇನ್ನೋಂದು ತಂಡ ಗುಜರಾತ್ ನಿಂದ ರಾಜ್ ಘಾಟ್ ವರೆಗೆ ಮತ್ತು  ಅಸ್ಸಾಂ ನಿಂದ ರಾಜ್ ಘಾಟ್ ವರೆಗೆ  ಮತ್ತೋಂದು ತಂಡ ಸೈಕಲ್ ರ‍್ಯಾಲಿಯನ್ನು ನಡೆಸಿ  ಅ. 2ರಂದು  ರಾಜ್ ಘಾಟ್  ತಲುಪಲಿದೆ.  ಹೀಗೆ 4 ದಿಕ್ಕುಗಳಿಂದ 4 ತಂಡಗಳು  ಸೈಕಲ್ ರ‍್ಯಾಲಿ ಮೂಲಕ ದೇಶದ ಉದ್ದಗಲಕ್ಕೂ ಸಂಚರಿಸಿ ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ಸಾರಲಿವೆ  ಎಂದು ತಿಳಿಸಿ ಸ್ವಾತಂತ್ರ್ಯಗಳಿಸಿದ ಹಿನ್ನೆಲೆಯ ಇತಿಹಾಸದ ವಿವಿಧ ಘಟನೆಗಳ ಬಗ್ಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಸಿ.ಆರ್.ಪಿ.ಎಫ್ ನ ಅಸಿಸ್ಟೆಂಟ್ ಕಮ್ಯಾಂಡೆಂಟ್  ಕಾರ್ತಿಕ್, ವಿನಾಯಕ, ಸಮನ್ವಯ ಅಧಿಕಾರಿ ತ್ರೀಲೋಚನಾ ಪ್ರಸಾದ್, ಉಪ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವ್, ತಹಸೀಲ್ದಾರ್ ದಿವಾಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಸ್ವಾಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ಸೈಕಲ್ ರ‍್ಯಾಲಿಯ  ಚಾಲನೆಗೂ ಮುನ್ನ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಭರತ ನಾಟ್ಯ, ದೇಶ ಭಕ್ತಿ ಗೀತೆ ಗಾಯನ, ಜಾನಪದ ನೃತ್ಯಗಳು ಯೋಧರ  ಹಾಗೂ ನೆರೆದಿದ್ದವರ ಗಮನ ಸೆಳೆದವು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!