ಯುವಕರ ನಡೆ-ಕೃಷಿ ಕಡೆ ವಿಚಾರ ಸಂಕಿರಣ: ಯುವ ರೈತರು ಕೃಷಿ ವ್ಯವಹಾರದಲ್ಲಿ ತೊಡಗಿಸಿಕೊಳ್ಳಬೇಕು-ಶೋಭಾ ಕರಂದ್ಲಾಜೆ

ಕಲಬುರಗಿ: ಕೇವಲ ಕೃಷಿ ಉತ್ಪಾದನೆ ಮಾಡುವ ಬದಲು ಬೆಳೆದ ಉತ್ಪನ್ನ ಸಂಸ್ಕರಣೆ ಮಾಡಿ ಬ್ರ್ಯಾಂಡಿಂಗ್‍ದೊಂದಿಗೆ ಕೃಷಿ ವ್ಯವಹಾರದಲ್ಲಿ ಯುವ ರೈತರು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕರೆ ನೀಡಿದರು.

ಶನಿವಾರ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ “ಯುವಕರ ನಡೆ-ಕೃಷಿ ಕಡೆ” ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕ್ಕೆ ಅನ್ನ ನೀಡುವ ರೈತನ ಬೆಳೆಗೆ ಸೂಕ್ತ ದರ ಮತ್ತು ಮಾರುಕಟ್ಟೆ ಸಿಗದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇದನ್ನು ತಪ್ಪಿಸಲು ಕೃಷಿ ಸಂಸ್ಕರಣೆ, ಬ್ರ್ಯಾಂಡಿಂಗ್, ಮಾರುಕಟ್ಟೆಯೊಂದಿಗೆ ರಫ್ತಿಗೂ ರೈತರು ಹೆಚ್ಚಿನ ಒತ್ತು ನೀಡಬೇಕಿದೆ. ಇದರಿಂದ ಆರ್ಥಿಕ ಪ್ರಗತಿ ಕಾಣಲು ಸಾಧ್ಯ ಎಂದರು.

ಕಲ್ಯಾಣ ಕರ್ನಾಟಕ ಭಾಗವು ಜ್ಞಾನ, ವಿದ್ಯೆ, ಸಂಸ್ಕøತಿಯ ತವರೂರಾಗಿದೆ. ಫಲವತ್ತಾದ ಮಣ್ಣು ಇಲ್ಲಿದ್ದರು ಸಹ ಹಿಂದುಳಿದ ಹಣೆಪಟ್ಟಿ ಕಟ್ಟಿಕೊಂಡಿದೆ. ಇದನ್ನು ಕಳಚಲು ದುಡಿಯಲು ಪಟ್ಟಣಕ್ಕೆ ಹೋದ ಯುವಕರನ್ನು ಮರಳಿ ಕೃಷಿ ಕಡೆಗೆ ತರುವ ನಿಟ್ಟಿನಲ್ಲಿ ಬಸವರಾಜ ಪಾಟೀಲ ಸೇಡಂ ಅವರು ಸಂಕಲ್ಪ ಮಾಡಿದ್ದಾರೆ. ಯುವಕರು ಕೃಷಿ ಕಡೆಗೆ ಬರಬೇಕು, ಕೃಷಿಯನ್ನು ಲಾಭದಾಯಕ ಕ್ಷೇತ್ರವನ್ನಾಗಿಸಬೇಕಿದೆ. ಸರ್ಕಾರ ಎಲ್ಲಾ ರೀತಿಯ ಸವಲತ್ತು ನೀಡಲಿದೆ ಎಂದರು.

ದೇಶದಲ್ಲಿ ಶೇ.70ರಷ್ಟು ಖಾದ್ಯ ತೈಲ ಮಲೇಶಿಯಾ, ಇಂಡೋನೇಷಿಯಾದಿಂದ ಅಮದು ಮಾಡಿಕೊಳ್ಳಲಾಗುತ್ತಿದೆ. ಸ್ವಾವಲಂಬನೆ ನಿಟ್ಟಿನಲ್ಲಿ ದೇಶದಲ್ಲಿಯೇ ಖಾದ್ಯ ತೈಲು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕೃಷಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಇದೇ ಸೆ.22 ರಂದು ಡಿ.ಜಿ.ಎಫ್.ಟಿ. ಮತ್ತು ಕೃಷಿ ಸಂಬಂಧಿತ ಉತ್ಪಾದಕರ ಸಭೆ ಕರೆಯಲಾಗಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 1.31 ಲಕ್ಷ ಕೋಟಿ ರೂ. ಹಣ ಆಯವ್ಯಯದಲ್ಲಿ ಕೃಷಿ ವಲಯಕ್ಕೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕೊಂಡಿಯಾಗಿ ತಾವು ಕಾರ್ಯನಿರ್ವಹಿಸುವುದಾಗಿ ಇದೇ ಪ್ರಥಮ ಬಾರಿಗೆ ಕೇಂದ್ರ ಸಚಿವರಾದ ನಂತರ ಜಿಲ್ಲೆಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

10 ಸಾವಿರ ಕೃಷಿ ಉತ್ಪಾದಕರ ಸಂಘ ರಚನೆ: ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಹಾಗೂ ರೈತಾಪಿ ವರ್ಗ ಅರ್ಥಿಕವಾಗಿ ಬಲವರ್ಧನೆಗೊಳಿಸಲು ದೇಶಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಸಂಘ (ಎಫ್‍ಪಿಓ) ರಚಿಸಲು ಉದ್ದೇಶಿಸಲಾಗಿದೆ. ಸಂಘಗಳ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ, ಸೂಕ್ತ ಬೆಲೆ ಜತೆಗೆ ಕೃಷಿ ಕಾರ್ಯಕ್ಕೆ ಬೇಕಾಗುವ ಮೂಲ ಸೌಕರ್ಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಆರ್ಥಿಕ ಸೌಲಭ್ಯ ಕಲ್ಪಿಸುವುದರ ಮೂಲಕ ಕೃಷಿ ಕ್ಷೇತ್ರದಲ್ಲಿ ಕ್ರಾಂತಿ ತರಲು ಯೋಜಿಸಲಾಗುತ್ತಿದೆ ಎಂದರು.

ಇದಕ್ಕು ಮುನ್ನ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಅವರು ಮಾತನಾಡಿ ಬೆಂಗಳೂರು ರಾಜ್ಯದ ರಾಧಾನಿಯಾದರೆ, ಬಸವಾದಿ ಶರಣ ನಾಡು ಬಸವಕಲ್ಯಾಣವನ್ನು ಸಾಂಸ್ಕøತಿಕ ರಾಜಧಾನಿಯಾಗಿ ಮಾಡಲಾಗುವುದು. ಶರಣರ ನಾಡು ಬೇಡುವ ಕೈ ಬದಲಾಗಿ ಕೊಡುವ ಕೈ ಆಗಬೇಕು. ಆ ನಿಟ್ಟಿನಲ್ಲಿ ಪರಿವರ್ತನೆ ಮುಂದಾಗಿದ್ದೇವೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲ್ಯಾಣ ಪ್ರದೇಶದ ಬಗ್ಗೆ ಅತೀವ ಆಸಕ್ತಿ ಹೊಂದಿ ಇಲ್ಲಿನ ಜನರ ಕಲ್ಯಾಣಕ್ಕಾಗಿ ಮತ್ತು ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನನಗೆ ನೀಡಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸುವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ ಪ್ರದೇಶದ ರೈತರ ಸಹಾಯಕ್ಕಾಗಿ ಬೀದರ, ಕಲಬುರಗಿ ಮತು ಯಾದಗಿರಿಯಲ್ಲಿ ಬೀಜ ಮತ್ತು ರಸಗೊಬ್ಬರ ಸಂಶೋಧನಾ ಕೇಂದ್ರ ತೆಗೆಯಬೇಕು ಎಂದು ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿಕೊಂಡರು. 

ರೈತರ ಮನೋಭಾವನೆ ಬದಲಾಗಲಿ: ಹೈದ್ರಾಬಾದಿನ ನ್ಯಾಷನಲ್ ಇನ್ಸ್‍ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಮತ್ತು ಎಕ್ಸ್‍ಟೆನ್ಷನ್ ಮ್ಯಾನೇಜ್‍ಮೆಂಟ್ (ಮ್ಯಾನೇಜ್) ಮಹಾನಿರ್ದೇಶಕ ಡಾ. ಚಂದ್ರಶೇಖರ ಇವರು ಕೃಷಿ ಉದ್ಯಮಶೀಲತಾ ಅಭಿವೃದ್ಧಿ ಕುರಿತು ಮಾತನಾಡಿ, ರೈತರು ಕೇವಲ ಉತ್ಪಾದನೆ ಮಾಡುವುದಷ್ಟೆ ನಮ್ಮ ಕೆಲಸ ಎಂಬ ಮನೋಭಾವನೆಯನ್ನು ಮೊದಲು ಬದಲಾಯಿಸಿಕೊಳ್ಳಬೇಕಿದೆ. ಕೃಷಿ ಬೆಳೆಯುವುದರ ಜೊತೆಗೆ ಅಗ್ರಿ ಬಿಸಿನೆಸ್ (ಕೃಷಿ ವ್ಯವಹಾರ) ಮಾಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಕೃಷಿಗೆ ಭವಿಷ್ಯ ಇದೆಯೇ ಎಂದು ಪ್ರಶ್ನಿಸುವ ಯುವ ರೈತರು ಮಾನವ ಕುಲ ಇರೋವರೆಗೂ ಕೃಷಿಗೆ ಭವಿಷ್ಯ ಇದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಪ್ರಸ್ತುತ ಮಾರುಕಟ್ಟೆಯಲ್ಲಿ  ಉದಾಹರಣೆಗೆ ಕೃಷಿ ಉತ್ಪನ್ನವೊಂದು 100 ರೂ. ಗಳಿಗೆ ದೊರೆತರೆ 50 ರೂ. ರೈತನಿಗೆ, ಇನ್ನುಳಿದ ಮೊತ್ತ ಸಂಸ್ಕರಣೆ, ಮಾರುಕಟ್ಟೆಯವರಿಗೆ ಹೋಗುತ್ತದೆ. 100 ರೂ. ಅನ್ನದಾತನಿಗೆ ಸಿಗಬೇಕಾದರೆ ಸಂಸ್ಕರಣೆ, ಬ್ರ್ಯಾಂಡಿಂಗ್, ಮಾರುಕಟ್ಟೆ ವ್ಯವಹಾರದಲ್ಲಿ ರೈತರು ಖುದ್ದು ತೊಡಗಿಕೊಳ್ಳಬೇಕಿದೆ. ಮಣ್ಣಿನ ಗುಣಧರ್ಮ ಅರಿತು ಕೃಷಿ ವಿಜ್ಞಾನಿಗಳ ಸಲಹೆ ಪಡೆದು ಬೆಳೆ ಬೆಳೆಯಬೇಕಿದೆ. ತಾಂತ್ರಿಕ ಮತ್ತು ತಂತ್ರಜ್ಞಾನ ಅಳವಡಿಸಿಕೊಳ್ಳಬೇಕಿದೆ. ಒಂದು ಬೆಳೆ ಬದಲಾಗಿ ಮಿಶ್ರ ಬೆಳೆ ಬೆಳೆಯಬೇಕಿದೆ. ಕೃಷಿ ಜೊತೆಗೆ ಹೈನುಗಾರಿಕೆ, ಮೀನುಗಾರಿಕೆ ಮಾಡಿ ಲಾಭ ಗಳಿಸಬೇಕಾಗಿದೆ ಎಂದು ವಿವರಿಸಿದ ಡಾ. ಚಂದ್ರಶೇಖರ ಅವರು ದೇಶದಾದ್ಯಂತ 75 ಸಾವಿರ ಕೃಷಿ ಪದವೀಧರರಿಗೆ ಕೃಷಿ ಉದ್ಯಮಶೀಲತಾ ಅಭಿವೃದ್ದಿಯ ತರಬೇತಿ ನೀಡಿದ ಫಲವಾಗಿ ತರಬೇತಿ ಪಡೆದವರು ನೂರಾರು ಯುವಕರಿಗೆ ಇಂದು ಉದ್ಯೋಗ ನೀಡುತ್ತಿದ್ದಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!