ನಾಳೆ ಸೆ.6 ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಫಲಿತಾಂಶ / ಸ್ಪರ್ಧಿಗಳ ಎದೆಯಲ್ಲಿ ಢವ – ಢವ

ದೊಡ್ಡಬಳ್ಳಾಪುರ: ಸೆ.3ರಂದು ನಡೆದ ನಗರ ಸಭೆ ಚುನಾವಣೆಯಲ್ಲಿ ಶೇ.75.9 ಮತದಾನ ನಡೆದಿದ್ದು, ಕಳೆದ ಬಾರಿಗಿಂತ ಶೇ.3 ಹೆಚ್ಚಾಗಿದೆ. ಸತತ ಏಳೂವರೆ ವರ್ಷಗಳ ನಂತರ ನಡೆಯುವ ಮೂಲಕ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ  ಶಾಂತಯುತವಾಗಿ ಮುಗಿದಿದ್ದು ಅಭ್ಯರ್ಥಿಗಳು ಮತಗಳಿಕೆಯ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

33,229 ಪುರುಷರು ಹಾಗೂ 33,412 ಮಹಿಳಾ ಮತದಾರರು ಸೇರಿ  ಒಟ್ಟು ಒಟ್ಟು 66,641 ಮತದಾರರಿದ್ದು, ಇದರಲ್ಲಿ 25,554 ಪುರುಷರು ಹಾಗೂ 25,005 ಮಹಿಳಾ ಮತದಾರರು ಸೇರಿ  ಒಟ್ಟು ಒಟ್ಟು 50,559 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಪುರುಷರು ಶೇ.76.9 ಹಾಗೂ ಮಹಿಳೆಯರು ಶೇ.74.8 ರಷ್ಟು ಮತ ಚಲಾಯಿಸಿ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.

31ವಾರ್ಡ್‍ಗಳ ಪೈಕಿ ಅತ್ಯಂತ ಕಡಿಮೆ ಮತದಾನ ಶೇ.61.7 ರಷ್ಟು 23ನೇ ವಾರ್ಡ್ ಗಾಣಿಗರ ಪೇಟೆ (ಮತಗಟ್ಟೆ ಸಂಖ್ಯೆ 46)ಯಲ್ಲಿ ನಡೆದಿದೆ. ಇನ್ನು ಅತ್ಯಂತ ಹೆಚ್ಚು ಮತದಾನ 89.9 ರಷ್ಟು 28ನೇ ವಾರ್ಡ್ ಕಚೇರಿ ಪಾಳ್ಯದಲ್ಲಿ(ಮತಗಟ್ಟೆ ಸಂಖ್ಯೆ 58) ನಡೆದಿದೆ.

ಚುನಾವಣೆಯ ನಂತರ ಯಾವ ವಾರ್ಡ್‍ನಲ್ಲಿ ಎಷ್ಟು ಮತದಾನವಾಯಿತು..? ಯಾರದು ಮೇಲುಗೈ  ಎಂಬಿತ್ಯಾದಿ ಚರ್ಚೆಗಳು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.

ಶುಕ್ರವಾರ 31 ಸ್ಥಾನಗಳಿಗಾಗಿ ನಡೆದ ಚುನಾವಣೆಗೆ ಕಾಂಗ್ರೆಸ್-31, ಬಿಜೆಪಿ -30, ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್‍ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು -15 ಸೇರಿ 119  ಮಂದಿ ಅಂತಿಮ ಕಣದಲ್ಲಿದ್ದರು.

ಶಾಸಕ ಟಿ.ವೆಂಕಟರಮಣಯ್ಯರ ಅಭಿವೃದ್ಧಿ ಕಾರ್ಯ, ಕೋವಿಡ್ ಸಂದರ್ಭದಲ್ಲಿನ ನೆರವು, ಅಭ್ಯರ್ಥಿಗಳ ವರ್ಚಸ್ಸು, ಅಭ್ಯರ್ಥಿಗಳ ಆಯ್ಕೆ ಅಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧೆಗೆ ಇಳಿದರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಸಾಧನೆ ಮುಂದಿಟ್ಟು ಹಾಗೂ ಸ್ವಂತ ವರ್ಚಿಸ್ಸು, ಮಾಜಿ ನಗರಸಭೆ ಸದಸ್ಯರ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆಗೆ ಇಳಿದಿದ್ದಾರೆ.

ಇನ್ನೂ ಅಂತಿಮ ಕ್ಷಣದಲ್ಲಿ ಮಾಜಿಮುಖ್ಯಮಂತ್ರಿ ಕುಮಾರಸ್ವಾಮಿ ಸಂಧಾನದಿಂದ ಜೆಡಿಎಸ್ ಮುಖಂಡರ ಒಗ್ಗಟ್ಟಿನ ಮಂತ್ರ, ಆಡಳಿತ – ವಿರೋಧ  ಪಕ್ಷದ ವೈಪಲ್ಯ, ಮಾಜಿ ನಗರಸಭೆ ಸದಸ್ಯರ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಸ್ಥಳೀಯ ಮಟ್ಟದಲ್ಲಿ ತನ್ನದೇ ಸಂಘಟನೆ ಹೊಂದಿರುವ ಕನ್ನಡ ಪಕ್ಷ, ಸಿಪಿಐ(ಎಂ) ಸ್ಪರ್ಧೆಗಿಳಿದಿದ್ದರೆ, ಪ್ರಥಮ ಬಾರಿಗೆ ಕೆ.ಆರ್.ಎಸ್, ಉತ್ತಮ ಪ್ರಜಾಕೀಯ ಪಕ್ಷ-, ಎಸ್.ಡಿ.ಪಿ.ಐ ಸತ್ವ ಪರೀಕ್ಷೆಗೆ ಒಳಗಾಗಿದ್ದರು.ಅಲ್ಲದೆ ಪ್ರಮುಖ ಪಕ್ಷಗಳಿಂದ ಟಿಕೆಟ್ ವಂಚಿತರು ಪಕ್ಷೇತರರಾಗಿ ಕಣದಲ್ಲಿದ್ದರು.

ಮತಯಂತ್ರಗಳನ್ನು ಕೊಂಗಾಡಿಯಪ್ಪ ಪ್ರೌಢಶಾಲೆಯ ಚುನಾವಣಾ ಕೇಂದ್ರದ ಭದ್ರತಾ ಕೊಠಡಿಯಲ್ಲಿರಿಸಲಾಗಿದೆ. ಕೊಠಡಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೇ.6 ರಂದು ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ಕುತೂಹಲಕ್ಕೆ ತೆರೆ ಬೀಳಲಿದೆ.

ಮತ ಎಣಿಕೆಗೆ ಸಿದ್ಧತೆ: ಚುನಾವಣಾ ಫಲಿತಾಂಶ ಸೆ.6ರಂದು ಬೆಳಿಗ್ಗೆ 8 ಗಂಟೆಗೆ ನಗರದ ಕೊಂಗಾಡಿಯಪ್ಪ ಪ್ರೌಢಶಾಲೆಯ ಚುನಾವಣಾ ಕೇಂದ್ರದಲ್ಲಿ ನಡೆಯಲಿದೆ. ಇದಕ್ಕಾಗಿ 4 ಎಣಿಕೆ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಎಣಿಕೆ ಕೊಠಡಿಯಲ್ಲಿ 4 ಟೇಬಲ್‍ಗಳಂತೆ 16 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. 4 ಸುತ್ತುಗಳಲ್ಲಿ ಮತ ಎಣಿಕೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾಕಾರಿ ಹಾಗೂ ತಹಸೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ವಿದ್ಯುನ್ಮಾನ ಮತ ಯಂತ್ರಗಳ ಮೂಲಕ ಮತದಾನ ನಡೆದಿರುವ ಹಿನ್ನಲೆಯಲ್ಲಿ  ಬೆಳಿಗ್ಗೆ 10.30ರ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!