ವಿದ್ಯಾರ್ಥಿಗಳಿಗೆ ಒತ್ತಡವನ್ನು ನಿಭಾಯಿಸುವಂತಹ ಶಿಕ್ಷಣ ನೀಡಿ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಶಿಕ್ಷಣ ಅಂದರೆ ವಿದ್ಯಾಭ್ಯಾಸ ಮಾತ್ರ ಅಲ್ಲ,  ಹೆಚ್ಚು ಅಂಕ ಪಡೆದವರಷ್ಟೇ  ಜೀವನದಲ್ಲಿ ಸಫಲರಾಗುತ್ತಾರೆ ಅಂತಾನೂ ಅಲ್ಲ ವಿದ್ಯಾರ್ಥಿಗಳಲ್ಲಿರುವ ಅಭಿರುಚಿಯನ್ನು ಮತ್ತು ಸೂಕ್ತ ಗುಣವನ್ನು ಗುರುತಿಸಿ ಮಾರ್ಗದರ್ಶನ ನೀಡುವುದೇ ನಿಜವಾದ ಶಿಕ್ಷಣ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಶಿಕ್ಷಕರಿಗೆ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಭಾನುವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನ್ಮ ಕೊಡೋದು ತಂದೆತಾಯಿ ಜೀವನ ಕೊಡೋದು ಶಿಕ್ಷಕರು. ನಮ್ಮದು ಗುರು ಪರಂಪರೆಯ ದೇಶ. ಶಿಕ್ಷಣ ವ್ಯವಸ್ಥೆ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣದಿಂದ ಆಗಲ್ಲ ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು , ಶಿಕ್ಷಕರು ಮಕ್ಕಳನ್ನು ಜ್ಞಾನಸಂಪನ್ನರನ್ನಾಗಿ ಮಾಡಲು ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ಸಮಸಮಾಜದ ಕಲ್ಪನೆಯನ್ನು,ಕುವೆಂಪುರವರ ವಿಶ್ವಮಾನವ ಸಂದೇಶ ಮತ್ತು ಶಾಂತಿ ತೋಟದ ಕಲ್ಪನೆಯ ವಿಚಾರಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳ  ವ್ಯಕ್ತಿತ್ವ ವಿಕಸನ ಆಗುವಂತಹ  ಶಿಕ್ಷಣ ನೀಡಬೇಕು ಎಂದು   ತಿಳಿಸಿ ನೆರೆದಿದ್ದ ಎಲ್ಲರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ತಮ್ಮ ಬಾಲ್ಯದ ಶಿಕ್ಷಣದ ದಿನಗಳನ್ನು ಮೆಲುಕು ಹಾಕಿದರು .     

ಕೇವಲ ಹಣದಿಂದ ನೆಮ್ಮದಿ, ಸಂತೋಷ ಸಿಗುವುದಿಲ್ಲ ಅದಕ್ಕೆ ಜ್ಞಾನದ ಅವಶ್ಯಕತೆ ಇದೆ ಅಂತಹ ಜ್ಞಾನವನ್ನು ನೀಡುವವರು ಶಿಕ್ಷಕರು.ವೈದ್ಯ ವೃತ್ತಿಯಂತೆ ಶಿಕ್ಷಕ ವೃತ್ತಿಯು ಅತಿ ಮುಖ್ಯವಾದದ್ದು ಆದ್ದರಿಂದ ವೃತ್ತಿ ಮತ್ತು ಪ್ರವೃತ್ತಿ ಎಲ್ಲಾ ಶಿಕ್ಷಣವೇ ಎಂದು ನಂಬಿದ್ದ ಮಾಜಿ ರಾಷ್ಟ್ರಪತಿಗಳಾದ ಭಾರತ ರತ್ನ ಡಾ.ಎಸ್.ರಾಧಾಕೃಷ್ಣನ್, ಇವರ ಜನ್ಮ ದಿನದಂದು ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಆದ್ದರಿಂದ ಶಿಕ್ಷಕರನ್ನು ನೋಡಿ  ನಾವು ಹೀಗೇ ಆಗಬೇಕು ಎನ್ನುವ ಭಾವನೆ ಮಕ್ಕಳಲ್ಲಿ ಮೂಡಬೇಕು ಅಂತಹವರು ಶ್ರೇಷ್ಠ ಶಿಕ್ಷಕರಾಗುತ್ತಾರೆ.ಶಿಕ್ಷಣ ವ್ಯವಸ್ಥೆ ಅಮೂಲಾಗ್ರವಾಗಿ ಬದಲಾವಣೆ ಆಗಬೇಕು ಎನ್ನುವ ನಿಟ್ಟಿನಲ್ಲಿ 2020ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಯುಗದಲ್ಲಿನ  ಹೊಸ ಕಲಿಕಾ ವಿಧಾನಗಳಿಗೆ  ಹತ್ತಿರವಾಗಿರುವ ಶಿಕ್ಷಣ ನೀತಿಯಾಗಲಿದೆ ಎಂದರು.

ಸೆಪ್ಟೆಂಬರ್ 6ರಿಂದ ಆರನೇ ತರಗತಿಗೂ ಮೇಲ್ಪಟ್ಟ ಶಾಲೆಗಳು ಆರಂಭವಾಗುತ್ತಿವೆ. ತಮ್ಮ ಸ್ವಂತ ಮಕ್ಕಳನ್ನು ನೋಡಿಕೊಳ್ಳುವಂತೆ ಶಿಕ್ಷಕರು ಜಾಗೃತಿವಹಿಸಬೇಕು.ಎಲ್ಲ ಮಕ್ಕಳು ಕೋವಿಡ್ ನ ಮಾರ್ಗಸೂಚಿಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು.ಆನ್ ಲೈನ್ ತರಗತಿಗಳಿಗಿಂತ ಭೌತಿಕ ತರಗತಿಗಳೇ ಕಲಿಕೆಗೆ ಹೆಚ್ಚು ಪರಿಣಾಮಕಾರಿ, ಎಲ್ಲ ತರಗತಿಗಳು ಭೌತಿಕವಾಗಿ ನಡೆಯುವಂತಹ ವಾತಾವರಣ ಬೇಗ ಬರಲಿ ಎಂದರು.

1ವರ್ಷದಲ್ಲಿ ಗುರುಭವನ ನಿರ್ಮಾಣ: ಜಿಲ್ಲಾಧಿಕಾರಿಗಳು ನಗರದ ಪ್ರತಿಷ್ಠಿತ   ಜಾಗದಲ್ಲಿ ಜಿಲ್ಲಾ  ಗುರುಭವನ ನಿರ್ಮಿಸಲು  ಜಮೀನು ನೀಡಿದ್ದಾರೆ.ಸುಮಾರು 5ಕೋಟಿ ವೆಚ್ಚದಲ್ಲಿ ಮುಂದಿನ 1ವರ್ಷದ ಒಳಗಡೆ ಜಿಲ್ಲಾ ಗುರುಭವನ ನಿರ್ಮಾಣವಾಗಲಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕೂ  ಮುನ್ನ  ನಗರದ  ಹೊರವಲಯದ ಜೈನ್ ಆಸ್ಪತ್ರೆ ಹತ್ತಿರ ಜಿಲ್ಲಾ ಗುರುಭವನ ಭವನ ನಿರ್ಮಾಣ ಕಾಮಗಾರಿಗೆ  ಶಂಕುಸ್ಥಾಪನೆ ನೆರವೇರಿಸಿ  ಭರವಸೆ ನೀಡಿದರು. 

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಮೆಚ್ಚುಗೆ: ಕಳೆದ 2ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ತನ್ನದೇ ಆದಂತಹ ಛಾಪನ್ನು ಮೂಡಿಸುತ್ತಿದೆ.2019-20 ನೇ ಸಾಲಿನಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಜಿಲ್ಲೆ ಗಳಿಸಿತ್ತು ಮತ್ತು 2020-21 ಸಾಲಿನಲ್ಲಿ  ರಾಜ್ಯದಲ್ಲಿ 625 ಅಂಕಗಳನ್ನು ಗಳಿಸಿದ 157 ವಿದ್ಯಾರ್ಥಿಗಳ ಪೈಕಿ ಜಿಲ್ಲೆಯವರೇ 30  ವಿದ್ಯಾರ್ಥಿಗಳು ಇರುವುದು ಹೆಮ್ಮೆಯ ಸಂಗತಿ ಈ ಎಲ್ಲ ಸಾಧನೆಗಳ ಹಿಂದೆ ಜಿಲ್ಲೆಯ ಶಿಕ್ಷಕರ ಮತ್ತು ಜಿಲ್ಲಾಡಳಿತದ ಸಮನ್ವಯ ಇಲಾಖೆಗಳ  ಅಧಿಕಾರಿ ಸಿಬ್ಬಂದಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು,

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 18 ಶಿಕ್ಷಕರಿಗೆ ಸನ್ಮಾನ: ಈ ವೇಳೆ ಮಾನ್ಯ ಸಚಿವರು 2021-22ನೇ ಸಾಲಿಗೆ ರಾಜ್ಯ ಮಟ್ಟದ ತ್ತಮ ಶಿಕ್ಷಕ ಪ್ರಶಸ್ತಿಗೆ ಜಲ್ಲೆಯಿಂದ  ಆಯ್ಕೆಯಾಗಿರುವ ಗೌರಿಬಿದನೂರು ತಾಲೂಕಿನ ಅಲೀಪುರದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಆರ್.ಯೂ.ನವೀನ್ ಕುಮಾರ್ ಮತ್ತು ಶಿಡ್ಲಘಟ್ಟ ತಾಲ್ಲೂಕಿನ  ವಾರ ಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ ವಿವಿ ಶಾಗೆ ಅಭಿನಂದನೆ ತಿಳಿಸಿ 2021-22ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 18 ಶಿಕ್ಷಕರಿಗೆ ಸನ್ಮಾನ ಮಾಡಿದರು.

ಶಿಕ್ಷಕರ ಪಟ್ಟಿ: ಪ್ರಮೀಳಮ್ಮ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ದೇವರಗುಡಿಪಲ್ಲಿ, ಬಾಗೇಪಲ್ಲಿ ತಾಲ್ಲೂಕು. 

ಚಂದ್ರಶೇಖರರೆಡ್ಡಿ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಮ್ಮಗಾನಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕು.,

ಮಂಜುನಾಥ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಾರಪಲ್ಲಿ, ಚಿಂತಾಮಣಿ ತಾಲ್ಲೂಕು.

ಎನ್. ರವಿಕುಮಾರ್, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ದೊಡ್ಡರಾಗಡಹಳ್ಳಿ, ಗೌರಿಬಿದನೂರು ತಾಲ್ಲೂಕು.

ಎನ್. ಗೋಪಾಲಕೃಷ್ಣಸಿಂಗ್, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೊಂಡಾವಲಹಳ್ಳಿ, ಗುಡಿಬಂಡೆ ತಾಲ್ಲೂಕು.

ಎಂ. ವೇಣುಗೋಪಾಲ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗಡಿಮಿಂಚೇನಹಳ್ಳಿ, ಶಿಡ್ಲಘಟ್ಟ ತಾಲ್ಲೂಕು.

ಎನ್. ನಾಗರಾಜು, ಸಹಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚಾಕವೇಲು, ಬಾಗೇಪಲ್ಲಿ ತಾಲ್ಲೂಕು.

ಆರ್. ಶ್ರೀನಿವಾಸ್, ಬಡ್ತಿ ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೆಡ್ಡಿಗೊಲ್ಲವಾರಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕು.

ಕೆ.ಎಂ. ಜಯರಾಮರೆಡ್ಡಿ, ಬಡ್ತಿ ಮುಖ್ಯ ಶಿಕ್ಷಕರು, ಸರ್ಕಾರಿ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚಿಂತಾಮಣಿ ತಾಲ್ಲೂಕು.

ಸಂಜೀವರೆಡ್ಡಿ, ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಕ್ಕಲಹಳ್ಳಿ, ಗೌರಿಬಿದನೂರು ತಾಲ್ಲೂಕು.

ಎಂ. ಶಂಕರ್, ಸಹಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೀಚಗಾನಹಳ್ಳಿ, ಗುಡಿಬಂಡೆ ತಾಲ್ಲೂಕು.

ಪಿ, ಗೀತಾ, ಬಡ್ತಿ ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜೆ.ವೆಂಕಟಾಪುರ, ಶಿಡ್ಲಘಟ್ಟ ತಾಲ್ಲೂಕು.

ಮಹಬೂಬ್ಸಾಬಿ, ಉಪಪ್ರಾಂಶುಪಾಲರು, ಸರ್ಕಾರಿ ಬಾಲಕರ ಪ್ರೌಢಶಾಲೆ, ಬಾಗೇಪಲ್ಲಿ ತಾಲ್ಲೂಕು.

ಎಲ್. ರಾಮಲಿಂಗಪ್ಪ, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಅಂಗರೇಕನಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕು.

ಈ. ರಾಘವೇಂದ್ರ, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಬಟ್ಲಹಳ್ಳಿ, ಚಿಂತಾಮಣಿ ತಾಲ್ಲೂಕು.

ಆರ್. ರಾಣಾಪ್ರತಾಪ್, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕಲ್ಲಿನಾಯಕನಹಳ್ಳಿ, ಗೌರಿಬಿದನೂರು ತಾಲ್ಲೂಕು.

ಹರೀಶ್ ರಾಜ್ ಅರಸ್, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಹಂಪಸಂದ್ರ, ಗುಡಿಬಂಡೆ ತಾಲ್ಲೂಕು.

ಎಲ್.ವಿ.ವೆಂಕಟರೆಡ್ಡಿ, ಪ್ರಭಾರ ಮುಖ್ಯ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕುಂದಲಗುರ್ಕಿ, ಶಿಡ್ಲಘಟ್ಟ ತಾಲ್ಲೂಕು.

ಕಾರ್ಯಕ್ರಮದಲ್ಲಿ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ (ಬಾಬು), ಅಪರ ಜಿಲ್ಲಾಧಿಕಾರಿ ಹೆಚ್. ಅಮರೇಶ್,  ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಸ್ ಜಯಚಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಿ.ಹರೀಶ್,  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!