ಸಂಭ್ರಮದ ಗೌರಿ ಹಬ್ಬ: ಶುಕ್ರವಾರದ ಗಣೇಶನ ಹಬ್ಬಕ್ಕೆ ಭರ್ಜರಿ ಸಿದ್ಧತೆ

ದೊಡ್ಡಬಳ್ಳಾಪುರ: ತಾಲೂಕಿನಾಧ್ಯಂತ ಗೌರಿ ಹಬ್ಬವನ್ನು ಸರಳ ಹಾಗೂ ಸುಂದರವಾಗಿ ಆಚರಿಸಲಾಗುತ್ತಿದೆ. ಭಾದ್ರಪದ ಮಾಸದ ಚತುರ್ಥಿಯ ಹಿಂದಿನ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ. ಕನ್ನಡ ನಾಡಿನ ಈ ಬಹುದೊಡ್ಡ ಹಬ್ಬವನ್ನು ಸಂಭ್ರಮದಿಂದ  ಆಚರಿಸುತ್ತಿದ್ದಾರೆ.

ಹಿಂದೂಗಳ ಆರಾಧ್ಯ ದೈವ ಗಣಪತಿ ಹಬ್ಬ ವಿಶೇಷವಾಗಿ ಯುವಕರ ಹಬ್ಬ. ಅದೇ ರೀತಿ ಹೆಣ್ಣು ಮಕ್ಕಳಿಗೆ ಗೌರಿಹಬ್ಬ ಅಚ್ಚುಮೆಚ್ಚಿನದು. ಈ ಎರಡು ಹಬ್ಬಗಳು ಒಟ್ಟಿಗೇ ಬರುವುದರಿಂದ ಇದರ ಸಂಭ್ರಮವೇ ಬೇರೆ ರೀತಿ ಇದೆ.

ಶುಕ್ರವಾರ ಗಣಪತಿ ಹಬ್ಬವಿದ್ದು, ಎಲ್ಲೆಡೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಕರೊನಾ ಸಾಂಕ್ರಾಮಿಕ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ  ಹಬ್ಬದ ಆಚರಣೆಗೆ ರಾಜ್ಯದ ಜನತೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ಅಳೆದು ತೂಗಿ ರಾಜ್ಯ ಸರ್ಕಾರ ಕೆಲ ಷರತ್ತು ವಿಧಿಸಿ ಆಚರಣೆಗೆ ಒಪ್ಪಿಗೆ ಸೂಚಿಸಿದೆ.

ಕೋರ್ಟ್ ರಸ್ತೆಯಲ್ಲಿ ಬಗೆಬಗೆಯ ವಿನ್ಯಾಸವುಳ್ಳ ಆಕರ್ಷಕ ಗಣಪತಿ ಮೂರ್ತಿಗಳನ್ನು ಕಲಾವಿದರು ಸಿದ್ಧಪಡಿಸಿದ್ದಾರೆ. ರಾಜ್ಯದ ವಿವಿಧೆಡೆ ಈಗಾಗಲೇ ಗಣಪತಿಗಳು ಮಾರುಕಟ್ಟೆಗೆ ಬಂದಿವೆ. ವಿವಿಧ ಭಂಗಿಯಲ್ಲಿರುವ ಗಣಪತಿಗಳು ನೋಡುಗರ ಮನಸೆಳೆಯುತ್ತಿವೆ.

ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಚೌತಿಯಂದು ಗಣೇಶ ಚತುರ್ಥಿ ಬರುತ್ತದೆ. ಅಂದಿನ ದಿನ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. ಕೋವಿಡ್-19 ಬಿಡುವಿನಿಂದ ಈ ವರ್ಷ ಗಣೇಶೋತ್ಸವ ಆಚರಣೆಗೆ ಭರ್ಜರಿಯಾಗಿರಲಿದೆ. 

ಮನೆಗಳಲ್ಲೂ ಕೂಡ ಗಣೇಶ ಮತ್ತು ಗೌರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಟಪ ನಿರ್ಮಿಸಲಾಗಿದೆ. ಜೊತೆಗೆ ಚಕ್ಕಲಿ, ಕೋಡುಬಳೆ, ಕಡುಬು, ಉಂಡೆಗಳು, ಸಿಹಿ ತಿನಿಸುಗಳ ತಯಾರಿ ಕೂಡ ಭರ್ಜರಿಯಾಗಿಯೇ ನಡೆದಿದೆ.

ಈ ಬಾರಿ ಹಬ್ಬದ ಹಿನ್ನೆಲೆಯಲ್ಲಿ ತರಕಾರಿ, ಹಣ್ಣು, ಹೂಗಳ ಬೆಲೆಯಲ್ಲಿ ಅಂತಹ ವ್ಯತ್ಯಾಸವೇನೂ ಇರಲಿಲ್ಲ. ಹಬ್ಬದ ಹಿನ್ನೆಲೆಯಲ್ಲಿ ದೂರದ ಊರುಗಳಲ್ಲಿ ನೆಲೆಸಿರುವ ಸ್ಥಳೀಯರು ಊರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ರೈಲು, ಬಸ್‌ ಹಾಗೂ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್‌ ಭದ್ರತೆ ಒದಗಿಸಿದೆ. ಒಟ್ಟಾರೆ ಈ ಬಾರಿ ಹಬ್ಬಕ್ಕೆ ಸಂಭ್ರಮದ ಸಿದ್ಧತೆ ನಡೆದಿದೆ.

ಗಣೇಶ ಮೂರ್ತಿ ವಿಸರ್ಜನೆಗೆ ನಗರಸಭೆ ವತಿಯಿಂದ ನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಮುಂಭಾಗದಲ್ಲಿನ ನಗರಕೆರೆಯಲ್ಲಿ ತಾತ್ಕಾಲಿಕ ವಿಸರ್ಜನೆಯ ಅವಕಾಶ ಕಲ್ಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!