ಎಲ್ಲೆಡೆ ಶ್ರದ್ಧಾಭಕ್ತಿಯ ಗಣೇಶ ಚತುರ್ಥಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನಾದ್ಯಂತ ಮನೆಗಳಲ್ಲಿ ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ನೇತೃತ್ವದಲ್ಲಿ  ಗಣೇಶೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಸರ್ಕಾರದ ಮಾರ್ಗಸೂಚಿ ಪ್ರಕಾರ ನಾಲ್ಕು ಅಡಿಗಿಂತಲೂ ಹೆಚ್ಚು ಎತ್ತರದ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶವಿಲ್ಲದಿರುವುದರಿಂದ  ಸಾಕಷ್ಟು ಸಂಘಟನೆಗಳು ಎಲ್ಲೆಡೆ ಪುಟ್ಟ ಗಣಪನ ಮೂರ್ತಿಗಳನ್ನು ‍ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದವು.

ದೇವರಾಜನಗರದ ಸರ್ವಸಿದ್ದಿವಿನಾಯ ಗೆಳೆಯರ ಬಳಗ, ಬೆಸ್ತರ ಪೇಟೆಯಲ್ಲಿ ಬಜರಂಗದಳದ ಸ್ವಾಮಿ ವಿವೇಕಾನಂದ ಘಟಕ, ಭುವನೇಶ್ವರಿನಗರದ ಶ್ರೀ ನವಜ್ಯೋತಿ ವಿನಾಯಕ ಗೆಳೆಯರ ಬಳಗ, ತೇರಿನಬೀದಿಯ ಶ್ರೀ ವಿನಾಯಕ ಮಿತ್ರ ಬಳಗ ( ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಂದ್ರ ಶೇಖರ್ ಆಜಾದ್ ಘಟಕ ), ಕನಕದಾಸ ರಸ್ತೆಯ ಶ್ರೀ ಗೌರಿಪುತ್ರ ಗಜಾನನ ಗೆಳೆಯರ ಬಳಗ,‌ ದೊಡ್ಡತುಮಕೂರಿನ ರೇಣುಕಾಯಲ್ಲಮ್ಮ ವಿನಾಯಕ ಬಳಗ, ಗುಂಡಮಗೆರೆಯ ವಾಲ್ಕೀಕಿ ಯುವರ ಸಂಘ, ಮಾರಿಮುತ್ತು ಯುವಕರ ಸಂಘ ಸೇರಿದಂತೆ ವಿವಿಧ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಇಲ್ಲದ ಅಬ್ಬರ: ಗಣಪತಿ ತರುವ ವೇಳೆ ಯಾವುದೇ ಡಿಜೆ ಸದ್ದು, ಮೈಕ್‌ಗಳ ಅಬ್ಬರ ಕಂಡುಬರಲಿಲ್ಲ. ಶಾಮಿಯಾನ, ಸಮುದಾಯ ಭವನ, ಸೇರಿ ಖಾಲಿ ಜಾಗದಲ್ಲಿ ಸಣ್ಣ ಪೆಂಡಾಲ್ ಹಾಕಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು.

ಪ್ರತಿ ಬಾರಿ ಪೆಂಡಾಲ್‌ಗೆ ಅತಿ ಹೆಚ್ಚು ಹಣ ಹಾಕಿ ಅಲಂಕಾರ ಮಾಡುತ್ತಿದ್ದವರು ಈ ಬಾರಿ ಯಾವುದೇ ಅಲಂಕಾರ ಮಾಡಿರಲಿಲ್ಲ. ಸೀರಿಯಲ್ ಸೆಟ್, ಫೋಕಸ್ ಲೈಟಿಂಗ್ಸ್, ಪೆಂಡಾಲ್‌ಗೆ ವಿಜೃಂಭಣೆ ಅಲಂಕಾರ ಇದ್ಯಾವುದು ಇರಲಿಲ್ಲ. ಗಣಪತಿ ತರುವ ವೇಳೆ ಕಡಿಮೆ ಸಂಖ್ಯೆಯಲ್ಲಿ ಯುವಕರು ಪಾಲ್ಗೊಂಡಿದ್ದರು. ಹಿಂದಿನ ವರ್ಷದಂತೆ ಪ್ರಸಾದ ವಿನಿಯೋಗ ಇರಲಿಲ್ಲ.  

ದೊಡ್ಡಬಳ್ಳಾಪುರ ನಗರಸಭೆಯಲ್ಲಿ 40, ಕಸಬಾ ಮತ್ತು ತೂಬಗೆರೆ ವ್ಯಾಪ್ತಿಯಲ್ಲಿ 96, ದೊಡ್ಡಬೆಳವಂಗಲ ಮತ್ತು ಮಧುರೆ ವ್ಯಾಪ್ತಿಯಲ್ಲಿ 50 ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಸೇರಿದಂತೆ ಒಟ್ಟು 206 ಗಣೇಶೋತ್ಸವಗಳಿಗೆ ಅನುಮತಿ ನೀಡಲಾಗಿತ್ತು.

ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆಯಿಂದ ವಿಶೇಷ ಹೊಂಡದ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ನಗರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸುತ್ತಿದ್ದಾರೆ. 

ಇದರೊಂದಿಗೆ ಮೂರು ಡ್ರಮ್‍ಗಳನ್ನು ಒಳಗೊಂಡ ನಾಲ್ಕು ಟ್ರ್ಯಾಕ್ಟರ್‍ಗಳು ನಗರದ ವಿವಿದೆಡೆ ಸಂಚರಿಸುತ್ತಿದ್ದು, ಮನೆಯಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಸಂಚಾರಿ ವಾಹನಗಳಲ್ಲಿಯೇ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!