ಎಲ್ಲೆಡೆ ಶ್ರದ್ಧಾಭಕ್ತಿಯ ಗಣೇಶ ಚತುರ್ಥಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನಾದ್ಯಂತ ಮನೆಗಳಲ್ಲಿ ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ನೇತೃತ್ವದಲ್ಲಿ  ಗಣೇಶೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಸರ್ಕಾರದ ಮಾರ್ಗಸೂಚಿ ಪ್ರಕಾರ ನಾಲ್ಕು ಅಡಿಗಿಂತಲೂ ಹೆಚ್ಚು ಎತ್ತರದ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶವಿಲ್ಲದಿರುವುದರಿಂದ  ಸಾಕಷ್ಟು ಸಂಘಟನೆಗಳು ಎಲ್ಲೆಡೆ ಪುಟ್ಟ ಗಣಪನ ಮೂರ್ತಿಗಳನ್ನು ‍ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದವು.

ದೇವರಾಜನಗರದ ಸರ್ವಸಿದ್ದಿವಿನಾಯ ಗೆಳೆಯರ ಬಳಗ, ಬೆಸ್ತರ ಪೇಟೆಯಲ್ಲಿ ಬಜರಂಗದಳದ ಸ್ವಾಮಿ ವಿವೇಕಾನಂದ ಘಟಕ, ಭುವನೇಶ್ವರಿನಗರದ ಶ್ರೀ ನವಜ್ಯೋತಿ ವಿನಾಯಕ ಗೆಳೆಯರ ಬಳಗ, ತೇರಿನಬೀದಿಯ ಶ್ರೀ ವಿನಾಯಕ ಮಿತ್ರ ಬಳಗ ( ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಂದ್ರ ಶೇಖರ್ ಆಜಾದ್ ಘಟಕ ), ಕನಕದಾಸ ರಸ್ತೆಯ ಶ್ರೀ ಗೌರಿಪುತ್ರ ಗಜಾನನ ಗೆಳೆಯರ ಬಳಗ,‌ ದೊಡ್ಡತುಮಕೂರಿನ ರೇಣುಕಾಯಲ್ಲಮ್ಮ ವಿನಾಯಕ ಬಳಗ, ಗುಂಡಮಗೆರೆಯ ವಾಲ್ಕೀಕಿ ಯುವರ ಸಂಘ, ಮಾರಿಮುತ್ತು ಯುವಕರ ಸಂಘ ಸೇರಿದಂತೆ ವಿವಿಧ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಇಲ್ಲದ ಅಬ್ಬರ: ಗಣಪತಿ ತರುವ ವೇಳೆ ಯಾವುದೇ ಡಿಜೆ ಸದ್ದು, ಮೈಕ್‌ಗಳ ಅಬ್ಬರ ಕಂಡುಬರಲಿಲ್ಲ. ಶಾಮಿಯಾನ, ಸಮುದಾಯ ಭವನ, ಸೇರಿ ಖಾಲಿ ಜಾಗದಲ್ಲಿ ಸಣ್ಣ ಪೆಂಡಾಲ್ ಹಾಕಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು.

ಪ್ರತಿ ಬಾರಿ ಪೆಂಡಾಲ್‌ಗೆ ಅತಿ ಹೆಚ್ಚು ಹಣ ಹಾಕಿ ಅಲಂಕಾರ ಮಾಡುತ್ತಿದ್ದವರು ಈ ಬಾರಿ ಯಾವುದೇ ಅಲಂಕಾರ ಮಾಡಿರಲಿಲ್ಲ. ಸೀರಿಯಲ್ ಸೆಟ್, ಫೋಕಸ್ ಲೈಟಿಂಗ್ಸ್, ಪೆಂಡಾಲ್‌ಗೆ ವಿಜೃಂಭಣೆ ಅಲಂಕಾರ ಇದ್ಯಾವುದು ಇರಲಿಲ್ಲ. ಗಣಪತಿ ತರುವ ವೇಳೆ ಕಡಿಮೆ ಸಂಖ್ಯೆಯಲ್ಲಿ ಯುವಕರು ಪಾಲ್ಗೊಂಡಿದ್ದರು. ಹಿಂದಿನ ವರ್ಷದಂತೆ ಪ್ರಸಾದ ವಿನಿಯೋಗ ಇರಲಿಲ್ಲ.  

ದೊಡ್ಡಬಳ್ಳಾಪುರ ನಗರಸಭೆಯಲ್ಲಿ 40, ಕಸಬಾ ಮತ್ತು ತೂಬಗೆರೆ ವ್ಯಾಪ್ತಿಯಲ್ಲಿ 96, ದೊಡ್ಡಬೆಳವಂಗಲ ಮತ್ತು ಮಧುರೆ ವ್ಯಾಪ್ತಿಯಲ್ಲಿ 50 ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಸೇರಿದಂತೆ ಒಟ್ಟು 206 ಗಣೇಶೋತ್ಸವಗಳಿಗೆ ಅನುಮತಿ ನೀಡಲಾಗಿತ್ತು.

ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆಯಿಂದ ವಿಶೇಷ ಹೊಂಡದ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ನಗರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸುತ್ತಿದ್ದಾರೆ. 

ಇದರೊಂದಿಗೆ ಮೂರು ಡ್ರಮ್‍ಗಳನ್ನು ಒಳಗೊಂಡ ನಾಲ್ಕು ಟ್ರ್ಯಾಕ್ಟರ್‍ಗಳು ನಗರದ ವಿವಿದೆಡೆ ಸಂಚರಿಸುತ್ತಿದ್ದು, ಮನೆಯಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಸಂಚಾರಿ ವಾಹನಗಳಲ್ಲಿಯೇ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!