ದೊಡ್ಡಬಳ್ಳಾಪುರ: ಶೇ.40ರಷ್ಟು ಗಣೇಶ ಮೂರ್ತಿ ವಿಸರ್ಜನೆ / ಪೊಲೀಸರ ಕಣ್ಗಾವಲು

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿಯ ಆಚರಣೆ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು. ವಿವಿಧೆಡೆಯ ಸಾರ್ವಜನಿಕ ಗಣೇಶೋ­ತ್ಸವ ಸಮಿತಿ ವತಿಯಿಂದ ಮೂರ್ತಿಗಳನ್ನು ಗಲ್ಲಿಗಳಲ್ಲಿ ಪ್ರತಿಷ್ಠಾಪಿಸಿದರೆ, ಮನೆಗಳಲ್ಲಿ ಚಿಕ್ಕ ಮೂರ್ತಿಗಳನ್ನು ತಂದು ಶ್ರದ್ಧಾ, ಭಕ್ತಿಯಿಂದ ಪೂಜಿಸಿದರು. 

ಮೊದಲನೆಯ ದಿನ ತಾಲೂಕಿನಾಧ್ಯಂತ ಶೇ.40ರಷ್ಟು ಗಣೇಶ ಮೂರ್ತಿಗಳು ವಿಸರ್ಜನೆಯಾಗಿದ್ದು, ಭಾನುವಾರ ಹೆಚ್ಚಿನ ಮೂರ್ತಿಗಳು ವಿಸರ್ಜನೆಯಾಗಲಿವೆ ಎಂದು ಅಂದಾಜಿಸಲಾಗಿದೆ.

ಪ್ರತಿಷ್ಠಾಪನೆ ವೇಳೆ ಅನೇಕರು ಸಾಂಪ್ರದಾಯಿಕ ವಾದ್ಯ, ಸಂಗೀತ ಹಾಗೂ ಪಟಾಕಿ ಸಿಡಿಸಿ ಗಣೇಶ­ನನ್ನು ಬರಮಾಡಿಕೊಂಡರು. ವಿವಿಧ ಹೂವು, ವಿದ್ಯುತ್ ಬೆಳಕಿನಿಂದ ಆಲಂಕ­ರಿ­ಸಿದ ಮಂಟಪದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಲಂಬೋದರನಿಗೆ ಪ್ರಿಯ­ವಾದ ಕಡುಬು, ಪಂಚ ಕಜ್ಜಾಯ, ಮೋದಕ ಸೇರಿದಂತೆ ವಿವಿಧ ಬಗೆಯ ನೈವೇದ್ಯ ಸಮರ್ಪಿಸಿದರು. ಹಿರಿಯರು ಕಿರಯರೆನ್ನದೇ ಎಲ್ಲ ವಯೋಮಾನ ದವರು ಹೊಸ ಬಟ್ಟೆ ತೊಟ್ಟು, ದೇವರಿಗೆ ಆರತಿ ಬೆಳಗಿ ಸಂಭ್ರಮಿಸಿದರು.

ವಿಸರ್ಜನೆ ವೇಳೆ. ‘ಗಣಪತಿ ಬಪ್ಪಾ ಮೋರಯಾ!’ ಎಂಬ ಮುಗಿಲು ಮುಟ್ಟುವ ಭಕ್ತರ ಘೋಷ ವಾಕ್ಯ ಮುಗಿಲು ಮುಟ್ಟಿತ್ತು.

ಶೇ.40ರಷ್ಟು ವಿಸರ್ಜನೆ: ಈ ಬಾರಿ ತಾಲೂಕಿನ 206 ಕಡೆಗಳಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದ್ದು, ಮೊದಲ ದಿನ ಶೇ.40 ರಷ್ಟು ವಿಸರ್ಜನೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ದೊಡ್ಡಬಳ್ಳಾಪುರ ನಗರಸಭೆಯಲ್ಲಿ 40, ಕಸಬಾ ಮತ್ತು ತೂಬಗೆರೆ ವ್ಯಾಪ್ತಿಯಲ್ಲಿ 96, ದೊಡ್ಡಬೆಳವಂಗಲ ಮತ್ತು ಮಧುರೆ ವ್ಯಾಪ್ತಿಯಲ್ಲಿ 50 ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಸೇರಿದಂತೆ ಒಟ್ಟು 206 ಗಣೇಶೋತ್ಸವಗಳಿಗೆ ಅನುಮತಿ ದೊರೆತಿತ್ತು.

ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆಯಿಂದ ವಿಶೇಷ ಹೊಂಡದ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ನಗರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸಿದರು.

ಮೂರು ಡ್ರಮ್‍ಗಳನ್ನು ಒಳಗೊಂಡ ನಾಲ್ಕು ಟ್ರ್ಯಾಕ್ಟರ್‍ಗಳು ನಗರದ ವಿವಿದೆಡೆ ಸಂಚರಿಸುತ್ತಿದ್ದು, ಮನೆಯಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಸಂಚಾರಿ ವಾಹನಗಳಲ್ಲಿಯೇ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಪೊಲೀಸ್ ಕಣ್ಗಾವಲು: ಕೋವಿಡ್ ನಿಯಮ ಹಾಗೂ ಯಾವುದೇ ಅಹಿತಕರ ಘನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನಕಣ್ಣಿಟ್ಟಿದ್ದರು.

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸತೀಶ್, ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಗೋವಿಂದ್, ರಾಜಾನುಕುಂಟೆಯ ಸಬ್ಇನ್ಸ್ಪೆಕ್ಟರ್ ಭವಿತಾ, ದೊಡ್ಡಬೆಳವಂಗಲ ಸಬ್ ಇನ್ಸ್ಪೆಕ್ಟರ್ ಗಜೇಂದ್ರ, ಹೊಸಹಳ್ಳಿ ಸಬ್ ಇನ್ಸ್ಪೆಕ್ಟರ್ ರಂಗಶಾಮಯ್ಯ, ಎಎಸ್ಐ ನಾಗೇಶ್, ಮುನಿರಾಜು, ಕೇಶವಮೂರ್ತಿ ಹಾಗೂ ಸಿಬ್ಬಂದಿಗಳು ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡಿರುವ ಸ್ಥಳಗಳಿಗೆ ಹಾಗೂ ವಿಸರ್ಜನೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]