ದೊಡ್ಡಬಳ್ಳಾಪುರ: ಶೇ.40ರಷ್ಟು ಗಣೇಶ ಮೂರ್ತಿ ವಿಸರ್ಜನೆ / ಪೊಲೀಸರ ಕಣ್ಗಾವಲು

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿಯ ಆಚರಣೆ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು. ವಿವಿಧೆಡೆಯ ಸಾರ್ವಜನಿಕ ಗಣೇಶೋ­ತ್ಸವ ಸಮಿತಿ ವತಿಯಿಂದ ಮೂರ್ತಿಗಳನ್ನು ಗಲ್ಲಿಗಳಲ್ಲಿ ಪ್ರತಿಷ್ಠಾಪಿಸಿದರೆ, ಮನೆಗಳಲ್ಲಿ ಚಿಕ್ಕ ಮೂರ್ತಿಗಳನ್ನು ತಂದು ಶ್ರದ್ಧಾ, ಭಕ್ತಿಯಿಂದ ಪೂಜಿಸಿದರು. 

ಮೊದಲನೆಯ ದಿನ ತಾಲೂಕಿನಾಧ್ಯಂತ ಶೇ.40ರಷ್ಟು ಗಣೇಶ ಮೂರ್ತಿಗಳು ವಿಸರ್ಜನೆಯಾಗಿದ್ದು, ಭಾನುವಾರ ಹೆಚ್ಚಿನ ಮೂರ್ತಿಗಳು ವಿಸರ್ಜನೆಯಾಗಲಿವೆ ಎಂದು ಅಂದಾಜಿಸಲಾಗಿದೆ.

ಪ್ರತಿಷ್ಠಾಪನೆ ವೇಳೆ ಅನೇಕರು ಸಾಂಪ್ರದಾಯಿಕ ವಾದ್ಯ, ಸಂಗೀತ ಹಾಗೂ ಪಟಾಕಿ ಸಿಡಿಸಿ ಗಣೇಶ­ನನ್ನು ಬರಮಾಡಿಕೊಂಡರು. ವಿವಿಧ ಹೂವು, ವಿದ್ಯುತ್ ಬೆಳಕಿನಿಂದ ಆಲಂಕ­ರಿ­ಸಿದ ಮಂಟಪದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಲಂಬೋದರನಿಗೆ ಪ್ರಿಯ­ವಾದ ಕಡುಬು, ಪಂಚ ಕಜ್ಜಾಯ, ಮೋದಕ ಸೇರಿದಂತೆ ವಿವಿಧ ಬಗೆಯ ನೈವೇದ್ಯ ಸಮರ್ಪಿಸಿದರು. ಹಿರಿಯರು ಕಿರಯರೆನ್ನದೇ ಎಲ್ಲ ವಯೋಮಾನ ದವರು ಹೊಸ ಬಟ್ಟೆ ತೊಟ್ಟು, ದೇವರಿಗೆ ಆರತಿ ಬೆಳಗಿ ಸಂಭ್ರಮಿಸಿದರು.

ವಿಸರ್ಜನೆ ವೇಳೆ. ‘ಗಣಪತಿ ಬಪ್ಪಾ ಮೋರಯಾ!’ ಎಂಬ ಮುಗಿಲು ಮುಟ್ಟುವ ಭಕ್ತರ ಘೋಷ ವಾಕ್ಯ ಮುಗಿಲು ಮುಟ್ಟಿತ್ತು.

ಶೇ.40ರಷ್ಟು ವಿಸರ್ಜನೆ: ಈ ಬಾರಿ ತಾಲೂಕಿನ 206 ಕಡೆಗಳಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದ್ದು, ಮೊದಲ ದಿನ ಶೇ.40 ರಷ್ಟು ವಿಸರ್ಜನೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ದೊಡ್ಡಬಳ್ಳಾಪುರ ನಗರಸಭೆಯಲ್ಲಿ 40, ಕಸಬಾ ಮತ್ತು ತೂಬಗೆರೆ ವ್ಯಾಪ್ತಿಯಲ್ಲಿ 96, ದೊಡ್ಡಬೆಳವಂಗಲ ಮತ್ತು ಮಧುರೆ ವ್ಯಾಪ್ತಿಯಲ್ಲಿ 50 ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಸೇರಿದಂತೆ ಒಟ್ಟು 206 ಗಣೇಶೋತ್ಸವಗಳಿಗೆ ಅನುಮತಿ ದೊರೆತಿತ್ತು.

ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆಯಿಂದ ವಿಶೇಷ ಹೊಂಡದ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ನಗರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸಿದರು.

ಮೂರು ಡ್ರಮ್‍ಗಳನ್ನು ಒಳಗೊಂಡ ನಾಲ್ಕು ಟ್ರ್ಯಾಕ್ಟರ್‍ಗಳು ನಗರದ ವಿವಿದೆಡೆ ಸಂಚರಿಸುತ್ತಿದ್ದು, ಮನೆಯಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಸಂಚಾರಿ ವಾಹನಗಳಲ್ಲಿಯೇ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಪೊಲೀಸ್ ಕಣ್ಗಾವಲು: ಕೋವಿಡ್ ನಿಯಮ ಹಾಗೂ ಯಾವುದೇ ಅಹಿತಕರ ಘನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನಕಣ್ಣಿಟ್ಟಿದ್ದರು.

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸತೀಶ್, ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಗೋವಿಂದ್, ರಾಜಾನುಕುಂಟೆಯ ಸಬ್ಇನ್ಸ್ಪೆಕ್ಟರ್ ಭವಿತಾ, ದೊಡ್ಡಬೆಳವಂಗಲ ಸಬ್ ಇನ್ಸ್ಪೆಕ್ಟರ್ ಗಜೇಂದ್ರ, ಹೊಸಹಳ್ಳಿ ಸಬ್ ಇನ್ಸ್ಪೆಕ್ಟರ್ ರಂಗಶಾಮಯ್ಯ, ಎಎಸ್ಐ ನಾಗೇಶ್, ಮುನಿರಾಜು, ಕೇಶವಮೂರ್ತಿ ಹಾಗೂ ಸಿಬ್ಬಂದಿಗಳು ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡಿರುವ ಸ್ಥಳಗಳಿಗೆ ಹಾಗೂ ವಿಸರ್ಜನೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!