ದೊಡ್ಡಬಳ್ಳಾಪುರ: ಪಡಿತರ ಚೀಟಿದಾರರ ಇ-ಕೆವೈಸಿ ಅವಧಿ ವಿಸ್ತರಣೆ

ದೊಡ್ಡಬಳ್ಳಾಪುರ: ಎಲ್ಲ ವರ್ಗದ ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಕಾರ್ಯದ ಅವಧಿಯನ್ನು  ವಿಸ್ತರಿಸಲಾಗಿದೆ. ತಾಲೂಕಿನ ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿರಸ್ತೇದಾರ್ ರಮೇಶ್ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಪ್ರತಿ ದಿನ ನ್ಯಾಯಬೆಲೆ ಅಂಗಡಿಗಳಲ್ಲಿ 07 ರಿಂದ ರಾತ್ರಿನ 08ರ ವರೆಗೆ ಇ-ಕೆವೈಸಿ ಸಂಗ್ರಹಣೆ ಕಾರ್ಯವನ್ನು ದಿನಾಂಕ 11-09-2021 ರಿಂದ ದಿನಾಂಕ 15-09-2021ರ ವರೆಗೆ ಮುಂದುವರೆಸಲಾಗಿದೆ. 

ದಿನಾಂಕ 16-09-2021 ರಿಂದ ದಿನಾಂಕ 30-09-2021ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿದಿನ ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮಾತ್ರ ಇ-ಕೆವೈಸಿ ಸಂಗ್ರಹಣೆ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.

ಆದ್ದರಿಂದ ಮೇಲಿನ ವೇಳಾಪಟ್ಟಿಯಂತೆ ಜಿಲ್ಲೆಯ ಎಲ್ಲಾ ಅಂತ್ಯೋದಯ ಹಾಗೂ ಪಿಹೆಚ್‍ಹೆಚ್ (ಬಿಪಿಎಲ್) ಹಾಗೂ ಎನ್ ಪಿಹೆಚ್ ಹೆಚ್ (ಎ.ಪಿ.ಎಲ್.) ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಒಂದು ಬಾರಿ Electronic Know Your Customer  (ಇ.ಕೆವೈಸಿ) ನೀಡಲು ಮತ್ತೊಮ್ಮೆ ತಿಳಿಸಲಾಗಿದೆ.

ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗೆ ಹೋಗಿ ಬೆರಳಚ್ಚು ನೀಡುವ ಪ್ರಕ್ರಿಯೆಯಾಗಿರುತ್ತದೆ. ಇ-ಕೆವೈಸಿ ಸೇವೆಯು ಉಚಿತ ಸೇವೆಯಾಗಿರುತ್ತದೆ. ಇದಕ್ಕಾಗಿ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಸಂಚಾಲಕರಿಗೆ ಯಾವುದೇ ದುಡ್ಡು ನೀಡುವ ಅವಶ್ಯಕತೆ ಇಲ್ಲ.

ಒಂದು ವೇಳೆ ಈ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಂಬಂಧಪಟ್ಟ ತಹಶೀಲ್ದಾರರು ಹಾಗೂ ತಾಲೂಕಿನ ಆಹಾರ ಶಿರಸ್ತೇದಾರ್, ನಿರೀಕ್ಷಕರುಗಳಿಗೆ ಮತ್ತು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ದೊಡ್ಡಬಳ್ಳಾಪುರ ಇವರಿಗೆ ದೂರು ಸಲ್ಲಿಸಬೇಕು.

ಸರ್ಕಾರವು ಇ-ಕೆವೈಸಿ. ನೀಡಲು ಈ ತಿಂಗಳ ಅಂತ್ಯದವರೆಗೆ ಅಂದರೆ ಸೆಪ್ಟೆಂಬರ್ 30 ರವರೆಗೆ ಕೊನೆಯ ಅವಕಾಶ ನೀಡಿದ್ದು, ಒಂದು ವೇಳೆ ಈ ಅವಧಿಯಲ್ಲಿ ಇ-ಕೆವೈಸಿ, ನೀಡದಿದ್ದಲ್ಲಿ, ಪಡಿತರ ಚೀಟಿಯಿಂದ ಅಂತಹ ಸದಸ್ಯರುಗಳ ಹೆಸರು ಕಡಿಮೆಯಾಗಿ ಪಡಿತರ ಪದಾರ್ಥ ಬಾರದೇ ಇದ್ದಲ್ಲಿ ನೇರವಾಗಿ ಪಡಿತರ ಚೀಟಿದಾರರೇ ಜವಾಬ್ದಾರರಾಗುತ್ತಾರೆ. ಆದ್ದರಿಂದ ಇ-ಕೆವೈಸಿ ನೀಡಲು ಬಾಕಿ ಇರುವ ಪಡಿತರ ಚೀಟಿದಾರರು ಇದಕ್ಕೆ ಆಸ್ಪದ ನೀಡದೇ, ಇ-ಕೆವೈಸಿ ನೀಡಲು ಬಾಕಿ ಇರುವ ಎಲ್ಲಾ ಪಡಿತರ ಚೀಟಿದಾರರುಗಳಿಗೆ ಸೂಚನೆ ನೀಡಲಾಗಿದೆ ಎಂದು ರಮೇಶ್ ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]