71ನೇ ವರ್ಷಕ್ಕೆ ಕಾಲಿರಿಸಿದ ಪ್ರಧಾನಿ ಮೋದಿ: ಜನ್ಮದಿನದ ಪ್ರಯುಕ್ತ ಲಸಿಕೆ ಅಭಿಯಾನ ಸೇರಿ ಹಲವು ಕಾರ್ಯಕ್ರಮಗಳು‌‌‌…!

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 71ನೇಜನ್ಮ ದಿನದ ಸಂಭ್ರಮ‌. ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ಎರಡನೇ ಬಾರಿಗೆ ಭಾರತದ ಪ್ರಧಾನಿ ಸ್ಥಾನ ಅಲಂಕರಿಸಿರುವ ಮೋದಿ ಅವರ ಜನ್ಮದಿನ ಸಂಭ್ರಮಾಚರಣೆಗೆ ಬಿಜೆಪಿ ಹಾಗೂ ಮೋದಿ ಅಭಿಮಾನಿಗಳು ಸಿದ್ದತೆ ಜೋರಾಗಿ‌ಯೇ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಹುಟ್ಟುಹಬ್ಬವನ್ನು ಬಿಜೆಪಿ ವಿಶೇಷವಾಗಿ ಆಚರಿಸುತ್ತಿದೆ. ಕಾಶಿಯಲ್ಲಿರುವ ವಾರಣಾಸಿಯ ಭಾರತ ಮಾತಾ ದೇವಸ್ಥಾನದಲ್ಲಿ 71,000 ಮಣ್ಣಿನ ದೀಪಗಳನ್ನು ಬೆಳಗಿಸಲು ಸಿದ್ದತೆ ಕೈಗೊಂಡಿದೆ. ದೀಪಗಳನ್ನು ಬೆಳಗಿಸುವುದರ ಜೊತೆಗೆ, 14 ಕೋಟಿ ಪಡಿತರ ಕಿಟ್​ಗಳನ್ನು ವಿತರಿಸಲಿದೆ.

ರಾಜ್ಯದಲ್ಲೂ ಮೋದಿ ಜನ್ಮ ದಿನದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳ ಜೊತೆಗೆ ವಿಶೇಷ ಮಹಾ ಲಸಿಕೆ ಅಭಿಯಾನವನ್ನು ರಾಜ್ಯ ಸರ್ಕಾರ ಆಯೋಜಿಸಿದೆ.

ಪ್ರಧಾನಿ ಮೋದಿ ಅವರ ಫೋಟೋ ಇರುವ 5 ಕೋಟಿ ಪೋಸ್ಟ್‌ಕಾರ್ಡ್‌ಗಳನ್ನು ದೇಶಾದ್ಯಂತ ಅಂಚೆ ಕಚೇರಿಗಳಿಂದ ಮೇಲ್ ಮಾಡಲಾಗುತ್ತಿದೆ.

ರಕ್ತದಾನ ಅಭಿಯಾನ, ನದಿಗಳ ಸ್ವಚ್ಛತಾ ಅಭಿಯಾನ, ಪಡಿತರ ಚೀಟಿಗಳ ವಿತರಣೆ ಮತ್ತು ಇನ್ನೂ ಹೆಚ್ಚಿನ ಚಟುವಟಿಕೆಗಳನ್ನು ಒಳಗೊಂಡಂತೆ ಮೋದಿ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುತ್ತಿದೆ.

20 ದಿನಗಳ ಮೆಗಾ ಅಭಿಯಾನ ‘ಸೇವಾ ಔರ್ ಸಮರ್ಪನ್ ಅಭಿಯಾನ’ ಇಂದು ಆರಂಭವಾಗಲಿದ್ದು, ಅಕ್ಟೋಬರ್ 7 ರಂದು ಮುಕ್ತಾಯಗೊಳ್ಳಲಿದೆ. ಏತನ್ಮಧ್ಯೆ, ಅಭಿಯಾನದ ಭಾಗವಾಗಿ ಉತ್ತರ ಪ್ರದೇಶದಲ್ಲಿಯೇ 27,000 ಬೂತ್‌ಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ರಾಜ್ಯದಲ್ಲಿ ವಿಶೇಷ ಲಸಿಕೆ ಅಭಿಯಾನ:  ಪ್ರಧಾನಿ ಮೋದಿ ಅವರ ಜನ್ಮ ದಿನದ ಪ್ರಯುಕ್ತ ರಾಜ್ಯ ಸರ್ಕಾರ ಮಹಾ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಒಟ್ಟು 4.8 ಕೋಟಿ‌ ಡೋಸ್ ಹಂಚಿಕೆಯಾಗಿದೆ. ಇಂದು ಲಸಿಕೆ ಅಭಿಯಾನಕ್ಕೆ‌ 34 ಲಕ್ಷ ಡೋಸ್ ಮೀಸಲಿಡಲಾಗಿದೆ. ರಾಜ್ಯಾದ್ಯಂತ 12,700 ಸರ್ಕಾರಿ ಲಸಿಕಾ ಕೇಂದ್ರ, 300 ಖಾಸಗಿ ಕೇಂದ್ರಗಳು ಹಾಗೂ 14,666 ಲಸಿಕಾ ಕೇಂದ್ರದಲ್ಲಿ ಲಸಿಕೆ ಹಂಚಿಕೆ ಆಗಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 8,33,641 ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದ್ದು, ಈವರೆಗೂ 5,73,089 ಜನರಿಗೆ ಲಸಿಕೆಯನ್ನು ನೀಡಲಾಗಿದ್ದು, ಉಳಿದ 2,58,040 ಜನರಿಗೆ ಲಸಿಕೆಯನ್ನು ನೀಡಬೇಕಾಗಿರುವುದರಿಂದ ಈ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ದೊಡ್ಡಬಳ್ಳಾಪುರ ತಾಲ್ಲೂಕಿಗೆ 30,000, ನೆಲಮಂಗಲ ತಾಲ್ಲೂಕಿಗೆ 22,000, ದೇವನಹಳ್ಳಿ ತಾಲ್ಲೂಕಿಗೆ 10,000 ಹಾಗೂ ಹೊಸಕೋಟೆ ತಾಲ್ಲೂಕಿಗೆ 10,000 ರಂತೆ ಜಿಲ್ಲೆಗೆ ಒಟ್ಟು 72 ಸಾವಿರಗಳ ಗುರಿಯನ್ನು ನೀಡಲಾಗಿದೆ.

ನಾಗರೀಕರು ಲಸಿಕೆಯನ್ನು ಪಡೆಯಲು ಸಹಕಾರಿಯಾಗುವಂತೆ ಅವರ ಗ್ರಾಮ ಮಟ್ಟಗಳಲ್ಲಿ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳಲ್ಲಿಯೇ ಲಸಿಕಾಕರಣದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆದ್ಯತೆಯುಳ್ಳ ಗುಂಪುಗಳಾದ ಕೈಗಾರಿಕಾ ವಸಾಹತು, ಕೊಳಗೇರಿ ಪ್ರದೇಶಗಳು, ಆಪಾರ್ಟ್ಮೆಂಟ್ಸ್ ಗಳು, ಕಟ್ಟಡ ಕಾಮಗಾರಿ ಸ್ಥಳಗಳು, ಅಲೆಮಾರಿ ಗುಂಪುಗಳು, 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಕ್ಯಾಬ್ ಡ್ರೈವರ್ ಗಳು, ಹೋಟಲ್ ಸಿಬ್ಬಂದಿಗಳು, ಗಾರ್ಮೆಂಟ್ಸ್ ನೌಕರರು ಹಾಗೂ ಇತರೆ ಎಲ್ಲಾ ಅರ್ಹ ನಾಗರೀಕರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಹಳ್ಳಿಗಳಲ್ಲಿ ಲಸಿಕಾಕರಣವನ್ನು ನಡೆಸಲಾಗುವುದು.

ಲಸಿಕೆ ಪಡೆಯದೆ ಇರುವ ಸಾರ್ವಜನಿಕರು ಲಸಿಕೆ ಪಡೆಯುವ ಮೂಲಕ ಈ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಪೊಟೋ ಕೃಪೆ:DD)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಅತ್ಯಾಚಾರ, ಗುಂಡಾಗಿರಿ, ಕೊಲೆ, ದರೋಡೆ ಮೊದಲಾದ ಚಟುವಟಿಕೆಗಳು ನಿರಂತರ ನಡೆಯುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ BY Vijayendra

[ccc_my_favorite_select_button post_id="101153"]
ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr K Sudhakar

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr

ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. Dr K Sudhakar

[ccc_my_favorite_select_button post_id="101146"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!