ನ್ಯಾಯಾಲಯಗಳಲ್ಲಿ ಕನ್ನಡದ ಬಳಕೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾನೂನಿನಲ್ಲಿ ಕನ್ನಡವನ್ನು ತಂದಿದ್ದರಿಂದ ನ್ಯಾಯಾಲಯಗಳಲ್ಲಿ ಕನ್ನಡ ಹೆಚ್ಚಾಗಿ ಬಳಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಭಾಷಾಂತರ ನಿರ್ದೇಶನಾಲಯ ಹೊರತಂದಿರುವ ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿದರು.

ಕಾನೂನು ನಿಘಂಟು ಕೆಲಸ ಯಶಸ್ವಿಯಾಗಿದೆ. 2003ರಲ್ಲಿ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರ ಮಾಡಿದ ನಂತರ ಅವು ಜನ ಸಾಮಾನ್ಯರಿಗೆ‌ ತಲುಪಿದವು. ಕಾನೂನುಗಳ ಅರ್ಥ ವ್ಯಾಪಕವಾಗಿ ಪ್ರಚಾರವಾಯಿತು. ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯಾಲಯ ಅದನ್ನು ಗುರುತಿಸಿ  ಮನ್ನಣೆಯನ್ನು ನೀಡಿದೆ. ಅದನ್ನು ಮುಂದುವರೆಸಿ ಇಂದು  ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಹೊರತಂದು   ಉತ್ತಮ ಕೆಲಸ ಮಾಡಿದೆ

ರಾಷ್ಟ್ರೀಯ  ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಾನೂನುಗಳನ್ನು ನಮ್ಮ ಜನರಿಗೆ ಸರಳವಾಗಿ ತಿಳಿಸುವ ಉದ್ದೇಶದಿಂದ ಈ ಮಹತ್ಕಾರ್ಯ ಸಾಧ್ಯವಾಗಿದೆ. ಇದಕ್ಕಾಗಿ ಶ್ರಮಪಟ್ಟಿರುವ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪ್ರೋತ್ಸಾಹ, ಬೆಂಬಲದಿಂದ ಇವೆಲ್ಲವನ್ನು ಮಾಡಲು ಸಾಧ್ಯವಾಗಿದೆ ಎಂದ ಅವರು, ಈ ಪ್ರಕ್ರಿಯೆ ಮುಂದುವರೆಯಬೇಕು. ಇನ್ನಷ್ಟು ಕನ್ನಡದ ಪದಗಳು ಕಾನೂನಿನಲ್ಲಿ ಬಳಕೆ ಆಗಬೇಕು ಹಾಗೂ ಕಾನೂನಿನಲ್ಲಿ ಬಳಕೆಯಾಗುವ ಪದಗಳು ಕನ್ನಡದಲ್ಲಿ ಬಳಕೆಯಾಗಬೇಕು ಎಂದರು.

ಇದೇ ವೇಳೆ ಇಸ್ಕಾನ್ ಸಂಸ್ಥಾಪಕ ಆಚಾರ್ಯ ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ 125  ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಹೊರತಂದಿರುವ ನಾಣ್ಯವನ್ನು ಸಮರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ನ್ಯಾಯ, ನೀತಿ, ಧರ್ಮ ಸದಾ ಒಟ್ಟಿಗೆ ಸಾಗುತ್ತದೆ. ಎಲ್ಲಿ ನ್ಯಾಯ ಇರುತ್ತದೆಯೋ ಅಲ್ಲಿ ನೀತಿ ಇರಬೇಕು. ಇವೆರಡೂ ಇದ್ದಲ್ಲಿ ಧರ್ಮ ಇರಲೇಬೇಕು. ಇಂದು ಒಂದೆಡೆ ಕಾನೂನಿನ ಪದಕೋಶ ಬಿಡುಗಡೆಯಾಗಿದ್ದು, ಮತ್ತೊಂದೆಡೆ ಪ್ರಭುಪಾದರನ್ನು ನೆನಪು ಮಾಡಿಕೊಂಡಿದ್ದೇವೆ. ಅವರು ಹಾಕಿಕೊಟ್ಟ ಕೃಷ್ಣನ ಪಥದಲ್ಲಿ ನಡೆಯಬೇಕು. ಭಗವದ್ಗೀತೆ ಮೂಲಕ ಬದುಕಿಗೆ ಕೃಷ್ಣ ಮಾರ್ಗದರ್ಶನ ನೀಡಿದಂತೆ ಅತ್ಯಂತ ಸರಳವಾಗಿ ಉತ್ಸಾಹದ ಮುಖಾಂತರ ಜಗತ್ತಿನ ಭಕ್ತರಲ್ಲಿ ತುಂಬಿದರು. ನ್ಯಾಯ,ನೀತಿ  ಕೃಷ್ಣನ ಧರ್ಮ. ಈ ಮೂರೂ ಅತ್ಯಂತ ಶ್ರೇಷ್ಠ ವಿಧಾನಸೌಧದಲ್ಲಿ ನಡೆದಿರುವುದು ಯೋಗಾಯೋಗ. ನ್ಯಾಯಾ, ನೀತಿ, ಧರ್ಮ ಪಾಲನೆಯೇ ಈ ಶಕ್ತಿಸೌಧದ ಮುಖ್ಯ ಕರ್ತವ್ಯವಾಗಿದೆ ಎಂದರು.

ಇಸ್ಕಾನ್ ದಕ್ಷಿಣ ಶಾಖಾಧ್ಯಕ್ಷ ಶ್ರೀ ವರದಕೃಷ್ಣದಾಸ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!