ನ್ಯಾಯಾಲಯಗಳಲ್ಲಿ ಕನ್ನಡದ ಬಳಕೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾನೂನಿನಲ್ಲಿ ಕನ್ನಡವನ್ನು ತಂದಿದ್ದರಿಂದ ನ್ಯಾಯಾಲಯಗಳಲ್ಲಿ ಕನ್ನಡ ಹೆಚ್ಚಾಗಿ ಬಳಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಭಾಷಾಂತರ ನಿರ್ದೇಶನಾಲಯ ಹೊರತಂದಿರುವ ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿದರು.

ಕಾನೂನು ನಿಘಂಟು ಕೆಲಸ ಯಶಸ್ವಿಯಾಗಿದೆ. 2003ರಲ್ಲಿ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರ ಮಾಡಿದ ನಂತರ ಅವು ಜನ ಸಾಮಾನ್ಯರಿಗೆ‌ ತಲುಪಿದವು. ಕಾನೂನುಗಳ ಅರ್ಥ ವ್ಯಾಪಕವಾಗಿ ಪ್ರಚಾರವಾಯಿತು. ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯಾಲಯ ಅದನ್ನು ಗುರುತಿಸಿ  ಮನ್ನಣೆಯನ್ನು ನೀಡಿದೆ. ಅದನ್ನು ಮುಂದುವರೆಸಿ ಇಂದು  ಕಾನೂನು ಪದಕೋಶ ಹಾಗೂ 15 ಕೇಂದ್ರ ಅಧಿನಿಯಮಗಳನ್ನು ಹೊರತಂದು   ಉತ್ತಮ ಕೆಲಸ ಮಾಡಿದೆ

ರಾಷ್ಟ್ರೀಯ  ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಾನೂನುಗಳನ್ನು ನಮ್ಮ ಜನರಿಗೆ ಸರಳವಾಗಿ ತಿಳಿಸುವ ಉದ್ದೇಶದಿಂದ ಈ ಮಹತ್ಕಾರ್ಯ ಸಾಧ್ಯವಾಗಿದೆ. ಇದಕ್ಕಾಗಿ ಶ್ರಮಪಟ್ಟಿರುವ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪ್ರೋತ್ಸಾಹ, ಬೆಂಬಲದಿಂದ ಇವೆಲ್ಲವನ್ನು ಮಾಡಲು ಸಾಧ್ಯವಾಗಿದೆ ಎಂದ ಅವರು, ಈ ಪ್ರಕ್ರಿಯೆ ಮುಂದುವರೆಯಬೇಕು. ಇನ್ನಷ್ಟು ಕನ್ನಡದ ಪದಗಳು ಕಾನೂನಿನಲ್ಲಿ ಬಳಕೆ ಆಗಬೇಕು ಹಾಗೂ ಕಾನೂನಿನಲ್ಲಿ ಬಳಕೆಯಾಗುವ ಪದಗಳು ಕನ್ನಡದಲ್ಲಿ ಬಳಕೆಯಾಗಬೇಕು ಎಂದರು.

ಇದೇ ವೇಳೆ ಇಸ್ಕಾನ್ ಸಂಸ್ಥಾಪಕ ಆಚಾರ್ಯ ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ 125  ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಹೊರತಂದಿರುವ ನಾಣ್ಯವನ್ನು ಸಮರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ನ್ಯಾಯ, ನೀತಿ, ಧರ್ಮ ಸದಾ ಒಟ್ಟಿಗೆ ಸಾಗುತ್ತದೆ. ಎಲ್ಲಿ ನ್ಯಾಯ ಇರುತ್ತದೆಯೋ ಅಲ್ಲಿ ನೀತಿ ಇರಬೇಕು. ಇವೆರಡೂ ಇದ್ದಲ್ಲಿ ಧರ್ಮ ಇರಲೇಬೇಕು. ಇಂದು ಒಂದೆಡೆ ಕಾನೂನಿನ ಪದಕೋಶ ಬಿಡುಗಡೆಯಾಗಿದ್ದು, ಮತ್ತೊಂದೆಡೆ ಪ್ರಭುಪಾದರನ್ನು ನೆನಪು ಮಾಡಿಕೊಂಡಿದ್ದೇವೆ. ಅವರು ಹಾಕಿಕೊಟ್ಟ ಕೃಷ್ಣನ ಪಥದಲ್ಲಿ ನಡೆಯಬೇಕು. ಭಗವದ್ಗೀತೆ ಮೂಲಕ ಬದುಕಿಗೆ ಕೃಷ್ಣ ಮಾರ್ಗದರ್ಶನ ನೀಡಿದಂತೆ ಅತ್ಯಂತ ಸರಳವಾಗಿ ಉತ್ಸಾಹದ ಮುಖಾಂತರ ಜಗತ್ತಿನ ಭಕ್ತರಲ್ಲಿ ತುಂಬಿದರು. ನ್ಯಾಯ,ನೀತಿ  ಕೃಷ್ಣನ ಧರ್ಮ. ಈ ಮೂರೂ ಅತ್ಯಂತ ಶ್ರೇಷ್ಠ ವಿಧಾನಸೌಧದಲ್ಲಿ ನಡೆದಿರುವುದು ಯೋಗಾಯೋಗ. ನ್ಯಾಯಾ, ನೀತಿ, ಧರ್ಮ ಪಾಲನೆಯೇ ಈ ಶಕ್ತಿಸೌಧದ ಮುಖ್ಯ ಕರ್ತವ್ಯವಾಗಿದೆ ಎಂದರು.

ಇಸ್ಕಾನ್ ದಕ್ಷಿಣ ಶಾಖಾಧ್ಯಕ್ಷ ಶ್ರೀ ವರದಕೃಷ್ಣದಾಸ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!