ನಂದಿ ರಸ್ತೆಗೆ ಜಿಲ್ಲಾಧಿಕಾರಿ ಆರ್.ಲತಾ ದಿಢೀರ್ ಭೇಟಿ / ಕಾಮಗಾರಿ ಪೂರ್ಣಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ಚಿಕ್ಕಬಳ್ಳಾಪುರ: ನಗರದ 19, 16, 15, 11ನೇ ವಾರ್ಡ್ಗಳ ವ್ಯಾಪ್ತಿಯ ನಂದಿ ರಸ್ತೆಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ರಸ್ತೆ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ನಂದಿ ರಸ್ತೆಯ ಕಾಮಗಾರಿಯು ಆಮೆಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಎರಡು ತಿಂಗಳ ಒಳಗಾಗಿ ಎಷ್ಟು ಸಾಧ್ಯವೋ ಅಷ್ಟು ಬೇಗ ಅದ್ಯತೆ ಮೇಲೆ ಈ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಈ ವೇಳೆ ಮಾತನಾಡುತ್ತಾ ಚಿಕ್ಕಬಳ್ಳಾಪುರ ನಗರದಿಂದ ನಂದಿ ರಸ್ತೆಗೆ ಸಾಗುವ 19, 16, 15, 11ನೇ ವಾರ್ಡ್ಗಳ ವ್ಯಾಪ್ತಿಯ 850 ಮೀ. ಉದ್ದದ ಸಿ.ಸಿ.ರಸ್ತೆಯನ್ನು ನಿರ್ಮಾಣ ಮಾಡುವ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಆಗಿ 6 ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಇದರಿಂದ ಅನಗತ್ಯ ಸಂಚಾರ ದಟ್ಟಣೆಯಾಗಿ ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇಲೆ ಈ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು. ಈ ಕಾಮಗಾರಿ ನಡೆಯುವ ಜಾಗದುದ್ದಕ್ಕೂ ಕಾಲ್ನಡಿಗೆಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿಗಳು ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು. 

ರಾಜ್ಯ ಹಣಕಾಸು ಆಯೋಗದ ವಿಶೇಷ ಅನುದಾನಯಡಿ 3 ಕೋಟಿ ಬಿಡುಗಡೆಯಾಗಿದ್ದು, ಈ ಪೈಕಿ ಸ್ಟೇಡಿಯಂ ರಸ್ತೆಗೆ 70 ಲಕ್ಷ ಮತ್ತು ಚಿಕ್ಕಬಳ್ಳಾಪುರ ನಗರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ 30 ಲಕ್ಷ ಹಾಗೂ ನಂದಿ ರಸ್ತೆ ಅಭಿವೃದ್ಧಿಗೆ 192 ಲಕ್ಷ ಅನುದಾನ ನಿಗದಿಗೊಳಿಸಲಾಗಿತ್ತು. ಮೂರು ಕಾಮಗಾರಿಗಳ ಪೈಕಿ ಸ್ಟೇಡಿಯಂ ರಸ್ತೆ ಮತ್ತು ಸಿಸಿ ಕ್ಯಾಮರಾ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ನಂದಿ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು ರವರು ಮಾತನಾಡಿ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಹಣಕಾಸು ಆಯೋಗದಿಂದ 3 ಕೋಟಿ ಅನುದಾನವನ್ನು ವಿಶೇಷ ಅನುದಾನವನ್ನು ಮಂಜೂರು ಮಾಡಿಸಿಕೊಟ್ಟಿರುತ್ತಾರೆ. ಈ ಪೈಕಿ ಸ್ಟೇಡಿಯಂನ ಸಿ.ಸಿ ರಸ್ತೆ ಹಾಗೂ ನಂದಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು 2.62 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಈಗಾಗಲೇ ಸ್ಟೇಡಿಯಂ ರಸ್ತೆ ಕಾಮಗಾರಿ ಪೂರ್ಣಗೊಂಡಿರುತ್ತದೆ. ಆದರೆ ನಂದಿ ರಸ್ತೆಯ ಅಭಿವೃದ್ದಿ ಕಾಮಗಾರಿಗೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವುದು ಹಾಗೂ ರಸ್ತೆ ಇಕ್ಕೆಲಗಳ ಕೆಲವು ಪ್ರದೇಶಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವುದು ಕಾಮಗಾರಿ ವೇಗಕ್ಕೆ ತೊಡಕಾಗಿತ್ತು. ಪ್ರಸ್ತುತ ಆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಎರಡು ತಿಂಗಳೊಳಗಾಗಿ ನಂದಿ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸಿ.ಸಿ.ರಸ್ತೆ ಜನರ ಬಳಕೆಗೆ ಲಭ್ಯವಾಗಲಿದೆ ಎಂದರು. 

ಈ ಸಂದರ್ಭದಲ್ಲಿ, ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಪೌರಾಯುಕ್ತ ಎನ್.ಮಹಂತೆಶ್ ಹಾಗೂ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ತಡೆಗೆ ಕಾಂಗ್ರೆಸ್ ಸರ್ಕಾರ ಕಾನೂನು ತರಲು ಹೊರಟಿರುವುದು ಪ್ರಜಾಪ್ರಭುತ್ವ ಕೊಲೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಚ್ಚರಿಕೆ

[ccc_my_favorite_select_button post_id="117285"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]