ಪೌರಕಾರ್ಮಿಕರು ಜನರ ಪ್ರೀತಿ ವಿಶ್ವಾಸಗಳಿಸಿ: ಪೌರಾಯುಕ್ತ ರಮೇಶ್ ಎಸ್.ಸುಣಗಾರ್

ದೊಡ್ಡಬಳ್ಳಾಪುರ: ಪೌರಕಾರ್ಮಿಕರಿಗೆ ಸರ್ಕಾರದಿಂದ ಹಿಂದೆಂದಿಗಿಂತ ಹೆಚ್ಚಿನ ಸೌಲಭ್ಯಗಳು ಈಗ ದೊರಕುತ್ತಿದ್ದು, ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಪೌರ ಕಾರ್ಮಿಕರು ನಿಷ್ಟೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಜನರ ಪ್ರೀತಿ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಕರೆ ನೀಡಿದರು.

ನಗರದ ಪುರಭವನದಲ್ಲಿ ನಗರಸಭೆ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದಶಕಗಳ ಹಿಂದೆ ಪೌರಕಾರ್ಮಿಕರಿಗೆ ವೇತನ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಎದುರಾಗಿತ್ತು. ಈ ಹಿಂದೆ ಪೌರ ಕಾರ್ಮಿಕರಲ್ಲಿ ಸಂಘಟನೆಯ ಕೊರತೆಯಿತ್ತು. ಆದರೆ ಈಗ ಸಂಘಟನಾತ್ಮಕವಾಗಿ ತಮಗೆ ಬೇಕಾದ ಸೌಲಭ್ಯಗಳನ್ನು ಪಡೆದು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅವಕಾಶಗಳಿವೆ. ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸ ಹೆಚ್ಚು ಮಾಡುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಹಿರಿಯ ಅಕಾರಿಗಳನ್ನು ಮೆಚ್ಚಿಸಲು ಕಾರ್ಯ ನಿರ್ವಹಿಸದೇ ತಮ್ಮ ಆತ್ಮ ಸಾಕ್ಷಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅದೇ ದೊಡ್ಡ  ರಾಷ್ಟ್ರ ಪ್ರಶಸ್ತಿ ನೀಡಿದಂತೆ ಎಂದರು.

ಪೌರ ಸೇವಾ ನೌಕರರ ಸೇವಾ ಸಂಘದ ನಗರ ಶಾಖೆ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ಶೋಷಿತರಿಗೆ ಸಮಾನತೆಯ ಹಕ್ಕುಗಳನ್ನು ನೀಡಿದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ನಾವು ಸ್ಮರಿಸಬೇಕಿದೆ.ಸ್ವಚ್ಛತೆಯಿಂದ ಜನರ ಆರೋಗ್ಯ ಸುಧಾರಿಸುತ್ತದೆ. ಅಂತಹ ಸ್ವಚ್ಛತೆಯ ಕಾರ್ಯ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳು  ಹಾಗೂ ಪೌರ ಕಾರ್ಮಿಕರ ದಿನಾಚರಣೆ ಅಭಿನಂದನೀಯ.  ಆದರೆ ಪೌರ ಕಾರ್ಮಿಕರು ನಗರ ಸ್ವಚ್ಛತಾ ಕಾರ್ಯದಲ್ಲಿ ತೊಡಗುವಾಗ ಸಾರ್ವಜನಿಕರು  ಎಲ್ಲೆಂದರಲ್ಲಿ ಕಸ ಹಾಕುವ ಮೂಲಕ ನಮ್ಮ  ಪ್ರಾಮಾಣಿಕ ಕಾರ್ಯಕ್ಕೆ ಸ್ಪಂಸದಿರುವುದು ನೋವಿನ ಸಂಗತಿ  ಎಂದರು.

ಕಾರ್ಯಕ್ರಮದಲ್ಲಿ  ನಗರಸಭೆ ವ್ಯವಸ್ಥಾಪಕ ಮುಮ್ತಾಜ್ ಪಾಷ, ಕಂದಾಯ ಅಧಿಕಾರಿ ರವೀಂದ್ರ ಜಾಯಗೊಂಡೆ, ಕಂದಾಯ ನಿರೀಕ್ಷಕ ನಾರಾಯಣ್, ಸಮುದಾಯ ಸಂಘಟನಾಕಾರಿ ಪ್ರಹ್ಲಾದ್, ಪೌರ ಕಾರ್ಮಿಕರ ಸಂಘದ ಜಿಲ್ಲಾ ಖಜಾಂಚಿ ವೆಂಕಟೇಶ ಬಾಬು, ತಾಲೂಕು ಕಾರ್ಯದರ್ಶಿ ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕರಾದ ರೂಪಾ ಸೇರಿದಂತೆ ನಗರಸಭೆ ಅಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಸಮಾರಂಭಕ್ಕೂ ಮುನ್ನ ನಗರಸಭೆ ಮುಂಭಾಗದಿಂದ ಪುರಭವನದವರೆಗೆ ನಗರದ ಪ್ರಮುಖ ಬೀದಿಗಳಲ್ಲಿ ಪೌರಕಾರ್ಮಿಕರ ಮೆರವಣಿಗೆ ನಡೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!