ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ರೈಲಿಗೆ ಪುರುಷನೋರ್ವ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ರೈಲ್ವೇ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಡ್ಡರಹಳ್ಳಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ನಡುವೆ ಈ ದುರ್ಘಟನೆ ನಡೆದಿದ್ದು, ಸುಮಾರು 45 ಪುರುಷ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಮೃತನ ಆಧಾರ್ ಕಾರ್ಡಿನಲ್ಲಿ ಮಹಾರಾಷ್ಟ್ರದ ನಾಸಿಕ್ ಮೂಲದ ಕಿರಣ ಕಮಲ ಕಿಶೋರ್ ಮಿಶ್ರ ಎಂದು ನಮೂದಿಸಲಾಗಿದೆ. ಸುಮಾರು 5.8 ಅಡಿ ಎತ್ತರ, ಗುಂಡು ಮುಖ, ಬೋಳು ತಲೆ, ಗೋಧಿ ಮೈ ಬಣ್ಣ ಹೊಂದಿದ್ದಾರೆ.
ಮೃತಪಟ್ಟಾಗ ಹಳದಿ ಬಣ್ಣದ ತುಂಬು ತೋಳಿನ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
ವಾರಸುದಾರರು ಇದ್ದಲ್ಲಿ ದೊಡ್ಡಬಳ್ಳಾಪುರ ರೈಲ್ವೇ ಪೊಲೀಸರು ಮೊಬೈಲ್ ಸಂಖ್ಯೆ – 9480802143, 9845014463 ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..