ರಪ್ತು ಚಟುವಟಿಕೆಯನ್ನು ಉತ್ತೇಜಿಸಲು ಕೈಗಾರಿಕೋದ್ಯಮಿಗಳು ಕ್ರಿಯಾಶೀಲರಾಗಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಪ್ತು ಚಟುವಟಿಕೆಯನ್ನು ಉತ್ತೇಜಿಸಲು ಕೈಗಾರಿಕೋದ್ಯಮಿಗಳು ಕ್ರಿಯಾಶೀಲರಾಗಿ ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಭಾರತ ದೇಶದ 75ನೇ ವರ್ಷದ ಸ್ವಾತಂತ್ರೋತ್ಸವದ “ಆಜಾದಿ ಕಾ ಅಮೃತ್ ಮಹೋತ್ಸವ್” ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಹಭಾಗಿತ್ವದಲ್ಲಿ ಕ್ಲಾರ್ಕ್ ಎಕ್ಸೊಟಿಕಾ ಕಾನ್ವೆಕ್ಷನ್ ರೆಸಾರ್ಟ್ ನಲ್ಲಿಂದು ಒಂದು ದಿನದ “ಎಕ್ಸ್ ಪೋರ್ಟರ್ಸ್ ಕಾನ್‌ಕ್ಲೇವ್” ವಾಣಿಜ್ಯ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಉದ್ದಿಮೆದಾರರು ಹೆಚ್ಚು ಹೆಚ್ಚು ರಫ್ತು ಚಟುವಟಿಕೆಯನ್ನು ಹಮ್ಮಿಕೊಳ್ಳಲು ಸರ್ಕಾರವು ಎಲ್ಲಾ ರೀತಿಯ ಸೌಲಭ್ಯ ಮತ್ತು ಸೌಕರ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ 100 ಕ್ಕೂ ಹೆಚ್ಚಿನ ಕೈಗಾರಿಕೆಗಳು ರಫ್ತು ಚಟುವಟಿಕೆಯನ್ನು ನಡೆಸುತ್ತಿದ್ದು, ಹೆಚ್ಚಿನ ಉದ್ಯೋಗಾವಕಾಶವನ್ನು ಸ್ಥಳೀಯರಿಗೆ ಒದಗಿಸಿದೆ. ಅದಾಗ್ಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ರಫ್ತು ಚಟುವಟಿಯನ್ನು ಎಲ್ಲಾ ಕೈಗಾರಿಕೋದ್ಯಮಿಗಳು ಹಮ್ಮಿಕೊಂಡು ದೇಶದ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಸಹಕಾರಿಯಾಗಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ಕೈಗಾರಿಕಾ ಸಂಘದ ಅಧ್ಯಕ್ಷರಾದ ಗುಲಾಟಿ ಅವರು ಮಾತನಾಡಿ, ಅಜಾದಿ ಕಾ ಅಮೃತ ಮಹೋತ್ಸವ್ ಕಾರ್ಯಕ್ರಮದ ಅಂಗವಾಗಿ ನಡೆದಂತಹ ಈ ವಾಣಿಜ್ಯ ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಇರುವಂತಹ ಸಂಪನ್ಮೂಲಗಳನ್ನು ಬಳಸಿಕೊಂಡು ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸುವುದು ಮತ್ತು ಅದನ್ನು ರಫ್ತು ಚಟುವಟಿಕೆಯಾಗಿ ಅಭಿವೃದ್ದಿ ಪಡಿಸಿ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಎಲ್ಲಾ ಎಂ.ಎಸ್.ಎಂ.ಇ. ಘಟಕಗಳು ಸಹಕರಿಸಬೇಕೆಂದು ಹೇಳಿದರು.

ದಾಬಾಸ್‌ಪೇಟೆ ಕೈಗಾರಿಕಾ ಸಂಘದ ಅಧ್ಯಕ್ಷರಾದ ಎಸ್.ಕಂಠಪ್ಪ ಮಾತನಾಡಿ ವಾಣಿಜ್ಯ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದಂತಹ ಕೈಗಾರಿಕೋದ್ಯಮಿಗಳು ಮತ್ತು ರಫ್ತುದಾರರು ಸರ್ಕಾರವು ಒದಗಿಸಿರುವ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡು, ಉತ್ತಮ ರೀತಿಯ ಚಟುವಟಿಕೆಯನ್ನು ನಡೆಸುವಂತೆ ಹಾಗೂ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶವನ್ನು ಒದಗಿಸಲು ಸರ್ಕಾರದ ಜೊತೆ ಕೈಜೋಡಿಸಬೇಕೆಂದರು ಹಾಗೂ ಉದ್ಯೋಗ ಸಮಸ್ಯೆ ನಿವಾರಣೆಗೆ ಎಲ್ಲಾ ಕೈಗಾರಿಕೊದ್ಯಮಗಳು ಸಹಾಯ ಹಸ್ತ ನೀಡುವಂತೆ ಕೋರಿದರು.

ಹೊಸಕೋಟೆ ಕೈಗಾರಿಕಾ ವೆಲ್‌ಫೇರ್ ಫೋರಂನ ಅಧ್ಯಕ್ಷರಾದ ಕೃಷ್ಣಪ್ಪ ಮಾತನಾಡಿ ಸರ್ಕಾರದ ಈ ವಾಣಿಜ್ಯ ಸಪ್ತಾಹವು ಎಲ್ಲಾ ಉದ್ದಿಮೆದಾರರಿಗೆ ಅವಕಾಶವನ್ನು ಕಲ್ಪಿಸಿದ್ದು, ಇದರಿಂದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಎಫ್.ಕೆ.ಸಿ.ಸಿ.ಐ. ಹಾಗೂ ಸಿ.ಎಂ.ಡಿ ಸಿ.ವಿ.ಎನ್‌ವಿರೋ ಸಿಸ್ಟಮ್‌ನ ಮಾಜಿ ಅಧ್ಯಕ್ಷರಾದ‌ ಡಾ|| ಜಾಕೋಬ್ ಕ್ರಾಸ್ಟ ಅವರು ಮಾತನಾಡಿ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೋದ್ಯಮಗಳು ರಫ್ತು ನಿರ್ವಹಣೆಯನ್ನು ಮಾಡಲು ತಿಳಿಸಿದರಲ್ಲದೆ, ಪೂರಕವಾಗಿ ತಾವು ನಡೆಸುತ್ತಿರುವ ಚಟುವಟಿಕೆಯಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಇರುವ ಮಿಸೈಲ್, ವಿಕ್ರಮ್, ಅಗ್ನಿ ಮತ್ತು ಇತರೆ ದೇಶದ ರಕ್ಷಣಾ ಉತ್ಪನ್ನಗಳನ್ನು ಈ ಸಂಸ್ಥೆಯ ಮುಖಾಂತರವಾಗಿ ಪ್ರದರ್ಶನ ಮಾಡಿರುವುದು ಹೆಮ್ಮೆಯ ವಿಷಯವಾಗಿದ್ದು, ತನ್ನ ಉತ್ಪನ್ನಗಳನ್ನು ದೇಶದ ರಕ್ಷಣೆಗೆ ಮೀಸಲಿಡಲು ಮನವಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ನರೇಂದ್ರಬಾಬು.ಎನ್. ಅವರು ಮಾತನಾಡಿ ಈ ಉತ್ಪನ್ನಗಳು ಪ್ರಮುಖವಾಗಿ ಅಮೇರಿಕಾ, ಇಂಗ್ಲೆಂಡ್, ಸಿಂಗಾಪುರ, ಮಲೇಷಿಯಾ, ಸೌದಿ ಅರೇಬಿಯಾ ದೇಶಗಳು, ಚೈನಾ, ಜರ್ಮನಿ, ರಷ್ಯಾ, ಸ್ಪೇನ್, ಕೆನಡಾ, ನೈಜೀರಿಯಾ, ಬಾಂಗ್ಲಾದೇಶ, ಥೈಲ್ಯಾಂಡ್, ಜಪಾನ್, ಯುರೋಪ್, ಇಟಲಿ, ಹಾಂಕಾಂಗ್, ಬ್ರೆಜಿಲ್, ಇತ್ಯಾದಿ ದೇಶಗಳಿಗೆ ರಫ್ತು ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲು ಕಾರ್ಯತಂತ್ರ ರೂಪಿಸಲು ಜಿಲ್ಲಾಡಳಿತವು ಉದ್ದಿಮೆದಾರರಿಗೆ ಸೂಕ್ತ ನೆರವು ಕಲ್ಪಿಸಲಾಗುತ್ತಿದೆ ಎಂದು  ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೈಗಾರಿಕಾ ಕೇಂದ್ರದ 

ಉಪ ನಿರ್ದೇಶಕರಾದ ಕೆ.ಟಿ.ನಾರಾಯಣಸ್ವಾಮಿ ಅವರು ಮಾತನಾಡಿ ರಾಜ್ಯ ಸರ್ಕಾರವು 2020-25ರ ಕೈಗಾರಿಕಾ ನೀತಿಯಲ್ಲಿ ರಫ್ತು ಚಟುವಟಿಕೆಯನ್ನು ಪ್ರೋತ್ಸಾಹಿಸಲು ಹಲವಾರು ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ಕಲ್ಪಿಸಿದೆ. ಈ ಸೌಲಭ್ಯವನ್ನು ಜಿಲ್ಲೆಯ ರಫ್ತು ಕೈಗಾರಿಕೋದ್ಯಮಗಳು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ವಾಣಿಜ್ಯ ಸಪ್ತಾಹದಲ್ಲಿ ಜಿಲ್ಲೆಯ ಪ್ರಮುಖ ಕೈಗಾರಿಕೋದ್ಯಮಿಗಳು, ರಫ್ತುದಾರರು,‌ ವಿವಿಧ ಕೈಗಾರಿಕಾ ಸಂಘದವರು, ವಿವಿಧ ಇಲಾಖೆಯವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!