ಎಂಪಿಸಿಎಸ್ ನೌಕರರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ / ನೂತನ ಕಾರ್ಯಕಾರಿ ಮಂಡಳಿ ರಚನೆಗೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಸೂಚನೆ

ದೊಡ್ಡಬಳ್ಳಾಪುರ: ರೈತರಿದ್ದರೆ ಮಾತ್ರ ದೇಶ ಸಮೃದ್ಧವಾಗಿರುತ್ತದೆ. ಆದರೆ ರೈತರ ಪರ ಹೋರಾಟಗಳಿಗೆ ಯಾರೂ ಬರುವುದಿಲ್ಲ. ನ್ಯಾಯಯುತ ಹೋರಾಟಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.

ನಗರದ ಬಮೂಲ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಹಾಲು ಉತ್ಪಾದಕ ಸಹಕಾರ ಸಂಘಗಳ ನೌಕರರ ಸಂಘದ ನೂತನ ಕಾರ್ಯಕಾರಿ ಸಮಿತಿ ರಚನೆ ಹಾಗೂ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ 200ಕ್ಕೂ ಹೆಚ್ಚು ಕಾರ್ಯದರ್ಶಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಗಳು ಶಿಸ್ತುಬದ್ದವಾಗಿ ಕೆಲಸ ಮಾಡಿದಾಗ ಸಂಘಕ್ಕೆ ರೈತರಿಂದ ಹಾಲು ಪೂರೈಕೆ ಕ್ರಮೇಣವಾಗಿ ಹೆಚ್ಚಾಗುತ್ತದೆ. ಯಾವುದೇ ಹಾಲು ಕಲಬೆರಕೆ, ಸೋರಿಕೆಗೆ ಅವಕಾಶ ಇರುವುದಿಲ್ಲ. ಹೀಗಾಗಿ ಕಾರ್ಯದರ್ಶಿಗಳು ಸ್ವಚ್ಚ ಆಡಳಿತ ನೀಡಿದಾಗ ಆಯಾ ಎಂಪಿಸಿಎಸ್ ಗಳು ಶೀಘ್ರವಾಗಿ ಅಭಿವೃದ್ಧಿಯಾಗುತ್ತದೆ. ತಾಲೂಕಿನ ಎಲ್ಲಾ ಎಂಪಿಸಿಎಸ್ ಗಳ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಗಳ ಅನುಕೂಲಕ್ಕಾಗಿ ನೂತನ ಹಾಲು ಉತ್ಪಾದಕರ ನೌಕರರ ಸಂಘ ಅಸ್ತಿತ್ವಕ್ಕೆ ತರಲಾಗುವುದು. ಸಂಘ ಕೇವಲ ನೌಕರರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡಲಿದೆ. ಅನಾರೋಗ್ಯ, ಅಪಘಾತ, ಅತ್ಯಂತ ಅನಿವಾರ್ಯ ಸಂಧರ್ಬದಲ್ಲಿ ಆರ್ಥಿಕ ಸೌಲಭ್ಯ ನೀಡಲು ಸಂಘವು ಶ್ರಮಿಸಲಿದೆ. ಇದಕ್ಕಾಗಿ ಪ್ರತಿ ಎಂಪಿಸಿಎಸ್ ನಿಂದ ಪ್ರತಿ ತಿಂಗಳು ತಲಾ‌ ಒಂದೂವರೆ ಸಾವಿರ ತೆಗೆದಿಡಲು ನಿರ್ಧರಿಸಲಾಗಿದೆ. ಎಂಪಿಸಿಎಸ್ ನ ಯಾವುದೇ ಸಿಬ್ಬಂದಿ ಸಮಸ್ಯೆಯಲ್ಲಿದ್ದಾಗ ನೇರವಾಗಿ ನನ್ನ ಭೇಟಿಯಾಗಿ ತಿಳಿಸಿದರೆ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು.

ನೂತನ ಸಂಘಕ್ಕೆ 10ಲಕ್ಷ ರೂ: ನೂತನ ತಾಲೂಕು ಹಾಲು ಉತ್ಪಾದಕರ ಸಹಕಾರ ನೌಕರರ ಸಂಘದ ನಿಧಿಗೆ ವೈಯಕ್ತಿಕವಾಗಿ 10 ಲಕ್ಷ ರೂ. ನೀಡಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಈ ನಿಧಿಯನ್ನು ಒಂದು ಕೋಟಿ ರೂ.ಗೆ ಏರಿಸಿ ಸಂಘದ ನೌಕರರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಲು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರೋತ್ಸಾಹ ಧನ, ಪ್ರಶಸ್ತಿ, ಸನ್ಮಾನ: ಹೈನುಗಾರಿಕೆ ಮತ್ತು ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾಲೂಕು ಅತ್ಯುತ್ತಮ ಹಾಲು ಉತ್ಪಾದಕ ಸಹಕಾರ ಸಂಘ ಪ್ರ ಅತ್ಯುತ್ತಮ ಹಾಲು ಉತ್ಪಾದಕ ರೈತ, ಅತ್ಯುತ್ತಮ ಕಾರ್ಯದರ್ಶಿಗಳಿಗೆ ಪ್ರೋತ್ಸಾಹಧನ ನೀಡಿ ಅಭಿನಂದನೆ ಸಲ್ಲಿಸಲಾಯಿತು. 

ನೌಕರರ ಬೇಡಿಕೆ: ಇದೇ ವೇಳೆ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ ಮಾತನಾಡಿ ಕನಿಷ್ಠ 15 ವರ್ಷಗಳ ಕಾಲ ಸೇವೆ ಮಾಡಿ ವಯೋಸಹಜ, ಅಪಘಾತ, ಹೀಗೆ ಸೂಕ್ತ ಕಾರಣಗಳಿಂದ‌ ನಿವೃತ್ತಿಯಾದವರಿಗೆ ಮತ್ತು ಅಕಾಲಿಕ ಮರಣ ಹೊಂದಿದವರಿಗೆ 10 ಲಕ್ಷ ಪರಿಹಾರ ಧನ ಮತ್ತು ವೇತನ ಹೆಚ್ಚಳವಾಗಿ ಮೂರು ವರ್ಷವಾಗಿದೆ ಶೀಘ್ರವಾಗಿ ವೇತನ ಹೆಚ್ಚಳ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಹಾಲು ಉತ್ಪಾದಕರ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ರಾಜಕುಮಾರ್, ಪ್ರಧಾನಕಾರ್ಯದರ್ಶಿ ನಾರಾಯಣಪ್ಪ, ಖಜಾಂಚಿ ಆರ್.ಸತೀಶ್, ಎಂಪಿಸಿಎಸ್ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]