ಎಂಪಿಸಿಎಸ್ ನೌಕರರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ / ನೂತನ ಕಾರ್ಯಕಾರಿ ಮಂಡಳಿ ರಚನೆಗೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಸೂಚನೆ

ದೊಡ್ಡಬಳ್ಳಾಪುರ: ರೈತರಿದ್ದರೆ ಮಾತ್ರ ದೇಶ ಸಮೃದ್ಧವಾಗಿರುತ್ತದೆ. ಆದರೆ ರೈತರ ಪರ ಹೋರಾಟಗಳಿಗೆ ಯಾರೂ ಬರುವುದಿಲ್ಲ. ನ್ಯಾಯಯುತ ಹೋರಾಟಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.

ನಗರದ ಬಮೂಲ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಹಾಲು ಉತ್ಪಾದಕ ಸಹಕಾರ ಸಂಘಗಳ ನೌಕರರ ಸಂಘದ ನೂತನ ಕಾರ್ಯಕಾರಿ ಸಮಿತಿ ರಚನೆ ಹಾಗೂ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ 200ಕ್ಕೂ ಹೆಚ್ಚು ಕಾರ್ಯದರ್ಶಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಗಳು ಶಿಸ್ತುಬದ್ದವಾಗಿ ಕೆಲಸ ಮಾಡಿದಾಗ ಸಂಘಕ್ಕೆ ರೈತರಿಂದ ಹಾಲು ಪೂರೈಕೆ ಕ್ರಮೇಣವಾಗಿ ಹೆಚ್ಚಾಗುತ್ತದೆ. ಯಾವುದೇ ಹಾಲು ಕಲಬೆರಕೆ, ಸೋರಿಕೆಗೆ ಅವಕಾಶ ಇರುವುದಿಲ್ಲ. ಹೀಗಾಗಿ ಕಾರ್ಯದರ್ಶಿಗಳು ಸ್ವಚ್ಚ ಆಡಳಿತ ನೀಡಿದಾಗ ಆಯಾ ಎಂಪಿಸಿಎಸ್ ಗಳು ಶೀಘ್ರವಾಗಿ ಅಭಿವೃದ್ಧಿಯಾಗುತ್ತದೆ. ತಾಲೂಕಿನ ಎಲ್ಲಾ ಎಂಪಿಸಿಎಸ್ ಗಳ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಗಳ ಅನುಕೂಲಕ್ಕಾಗಿ ನೂತನ ಹಾಲು ಉತ್ಪಾದಕರ ನೌಕರರ ಸಂಘ ಅಸ್ತಿತ್ವಕ್ಕೆ ತರಲಾಗುವುದು. ಸಂಘ ಕೇವಲ ನೌಕರರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡಲಿದೆ. ಅನಾರೋಗ್ಯ, ಅಪಘಾತ, ಅತ್ಯಂತ ಅನಿವಾರ್ಯ ಸಂಧರ್ಬದಲ್ಲಿ ಆರ್ಥಿಕ ಸೌಲಭ್ಯ ನೀಡಲು ಸಂಘವು ಶ್ರಮಿಸಲಿದೆ. ಇದಕ್ಕಾಗಿ ಪ್ರತಿ ಎಂಪಿಸಿಎಸ್ ನಿಂದ ಪ್ರತಿ ತಿಂಗಳು ತಲಾ‌ ಒಂದೂವರೆ ಸಾವಿರ ತೆಗೆದಿಡಲು ನಿರ್ಧರಿಸಲಾಗಿದೆ. ಎಂಪಿಸಿಎಸ್ ನ ಯಾವುದೇ ಸಿಬ್ಬಂದಿ ಸಮಸ್ಯೆಯಲ್ಲಿದ್ದಾಗ ನೇರವಾಗಿ ನನ್ನ ಭೇಟಿಯಾಗಿ ತಿಳಿಸಿದರೆ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು.

ನೂತನ ಸಂಘಕ್ಕೆ 10ಲಕ್ಷ ರೂ: ನೂತನ ತಾಲೂಕು ಹಾಲು ಉತ್ಪಾದಕರ ಸಹಕಾರ ನೌಕರರ ಸಂಘದ ನಿಧಿಗೆ ವೈಯಕ್ತಿಕವಾಗಿ 10 ಲಕ್ಷ ರೂ. ನೀಡಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಈ ನಿಧಿಯನ್ನು ಒಂದು ಕೋಟಿ ರೂ.ಗೆ ಏರಿಸಿ ಸಂಘದ ನೌಕರರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಲು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರೋತ್ಸಾಹ ಧನ, ಪ್ರಶಸ್ತಿ, ಸನ್ಮಾನ: ಹೈನುಗಾರಿಕೆ ಮತ್ತು ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾಲೂಕು ಅತ್ಯುತ್ತಮ ಹಾಲು ಉತ್ಪಾದಕ ಸಹಕಾರ ಸಂಘ ಪ್ರ ಅತ್ಯುತ್ತಮ ಹಾಲು ಉತ್ಪಾದಕ ರೈತ, ಅತ್ಯುತ್ತಮ ಕಾರ್ಯದರ್ಶಿಗಳಿಗೆ ಪ್ರೋತ್ಸಾಹಧನ ನೀಡಿ ಅಭಿನಂದನೆ ಸಲ್ಲಿಸಲಾಯಿತು. 

ನೌಕರರ ಬೇಡಿಕೆ: ಇದೇ ವೇಳೆ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ ಮಾತನಾಡಿ ಕನಿಷ್ಠ 15 ವರ್ಷಗಳ ಕಾಲ ಸೇವೆ ಮಾಡಿ ವಯೋಸಹಜ, ಅಪಘಾತ, ಹೀಗೆ ಸೂಕ್ತ ಕಾರಣಗಳಿಂದ‌ ನಿವೃತ್ತಿಯಾದವರಿಗೆ ಮತ್ತು ಅಕಾಲಿಕ ಮರಣ ಹೊಂದಿದವರಿಗೆ 10 ಲಕ್ಷ ಪರಿಹಾರ ಧನ ಮತ್ತು ವೇತನ ಹೆಚ್ಚಳವಾಗಿ ಮೂರು ವರ್ಷವಾಗಿದೆ ಶೀಘ್ರವಾಗಿ ವೇತನ ಹೆಚ್ಚಳ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಹಾಲು ಉತ್ಪಾದಕರ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ರಾಜಕುಮಾರ್, ಪ್ರಧಾನಕಾರ್ಯದರ್ಶಿ ನಾರಾಯಣಪ್ಪ, ಖಜಾಂಚಿ ಆರ್.ಸತೀಶ್, ಎಂಪಿಸಿಎಸ್ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!