ಪ್ರವಾಸೋದ್ಯಮ ಆವರ್ತಕ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ  ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ವಿಶ್ವವಿಖ್ಯಾತ ನಂದಿ ಬೆಟ್ಟ, ರಂಗಸ್ಥಳ, ಶ್ರೀನಿವಾಸ ಸಾಗರ ಹಾಗೂ ಇನ್ನಿತರ ಪ್ರಸಿದ್ಧ  ಪ್ರವಾಸಿ ತಾಣಗಳನ್ನು ಒಳಗೊಂಡಂತೆ ಒಂದು ಪ್ರವಾಸಿ ಆವರ್ತಕವನ್ನು (Tourism circuit) ನಿರ್ಮಾಣ ಮಾಡಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಅವರು ಸೋಮವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ  ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ   ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಿಂಬಿಸುವ ಚಿತ್ರ ಕಲೆ ಬಿಡಿಸುವ ಚಿತ್ರ ಕಲಾ ಶಿಬಿರವನ್ನು ಸ್ವತ: ಡಿಸಿಯವರು ಕುಂಚದಲ್ಲಿ ಸಹಿ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳಿಂದ ಚಿತ್ರ ಕಲೆ ವೀಕ್ಷಣೆ: ಚಿತ್ರ ಕಲಾ ಶಿಬಿರದಲ್ಲಿ  ಚಿತ್ರಕಲಾ ಶಿಕ್ಷಕರು ಮತ್ತು ಚಿತ್ರಕಲಾ ಪರಿಷತ್ತಿನ ವಿದ್ಯಾರ್ಥಿಗಳಿಂದ  ಬಿಡಿಸಲ್ಪಟ್ಟಿರುವ ಜಿಲ್ಲೆಯ ಪ್ರವಾಸಿ ತಾಣಕ್ಕೆ ಹೆಸರುವಾಸಿಯಾದ ಚಿತ್ರಗಳು ಮತ್ತು  ಪ್ರವಾಸ ತಾಣಗಳನ್ನ ಬಿಂಬಿಸುವ ಚಿತ್ರಗಳು ಅಂದವಾಗಿ ಮೂಡಿಬಂದಿವೆ ಹಾಗೂ ಜನರ ಗಮನ ಸೆಳೆಯಲಿವೆ ಈ    ಎಲ್ಲಾ ಕಲಾ ಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶನಕ್ಕಿಡುವ ಮೂಲಕ ಸಂರಕ್ಷಿಸಲಾಗುವುದು ಜೊತೆಗೆ ಗಣ್ಯರಿಗೆ ಉಡುಗೊರೆ ನೀಡಲು ಸಹ ಬಳಸಿಕೊಳ್ಳಲಾಗುವುದು. ಈ ಶಿಬಿರ ಚಿತ್ರ ಕಲಾವಿದರಿಗೆ ವೇದಿಕೆ ಯಾಗಿ ಪ್ರತಿಭೆ  ಹೊರ ಹೊಮ್ಮಲು ಸಹಕಾರಿಯಾಗುವ ಜೊತೆಗೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೂ  ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿಗಳು  ಚಿತ್ರ ಕಲೆ ವೀಕ್ಷಣೆ ಮಾಡಿ ಅಭಿಪ್ರಾಯಪಟ್ಟರು.

ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಒಂದು ದಿನ ಪೂರ್ತಿ ಪ್ರವಾಸದ ಮೂಲಕ ಕಳೆಯಲು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ  ತಾಣಗಳನ್ನು ಸಂದರ್ಶಿಸಿ ಪ್ರವಾಸ ಮಾಡಲು ಅನುಕೂಲವಾಗುವ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಒಂದು ಪ್ರವಾಸಿ ಆವರ್ತಕವನ್ನು ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆದು ಜಿಲ್ಲೆಯ ಪ್ರವಾಸೋದ್ಯಮವನ್ನು  ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗುತ್ತಿದೆ. ವಿಶ್ವ ವಿಖ್ಯಾತ  ನಂದಿ  ಗಿರಿ ಧಾಮ ಸೇರಿದಂತೆ ಜಿಲ್ಲೆಯಲ್ಲಿ  ಸಾಕಷ್ಟು ಪ್ರಸಿದ್ಧ ಪ್ರವಾಸಿ ತಾಣಗಳಿದ್ದು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿಪುಲವಾದ ಅವಕಾಶಗಳಿವೆ.ಅಲ್ಲದೆ ಹೊಸದಾಗಿ  ಹಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ಎಕೋ ಥೀಮ್ ಪಾರ್ಕ್  ಕಾಮಗಾರಿ ಶಂಕುಸ್ಥಾಪನೆ: ಹೊಸದಾಗಿ  ಹಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಕೆ.ಆರ್.ಎಸ್.ಬೃಂದಾವನ ಮಾದರಿಯಲ್ಲಿ ಕಂದವಾರ ‘ಎಕೋ ಥೀಮ್ ಪಾರ್ಕ್’ನ್ನು 8.10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಈಗಾಗಲೇ ಕ್ರಮವಹಿಸಲಾಗಿದ್ದು,ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಹಾಗೂ ಆರ್ಥಿಕ ಬಿಡ್ಡ  ನ್ನು   ಸಹ ತೆರೆಯಲಾಗಿದೆ. ಸದ್ಯದಲ್ಲೆ  ಎಕೋ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ ನೆರವೇರಲಿದೆ.  ಸ್ವಯಂ ಚಾಲಿತ ಪರಿಸರ ಸ್ನೇಹಿ ಉದ್ಯಾನವನ ಪ್ರವಾಸಿಗರ ಮನಸೆಳೆಯುವ ಹಲವು ವೈಶಿಷ್ಟ್ಯಗಳನ್ನೊಳಗೊಂಡ ವಿಶಿಷ್ಟ ಮಾದರಿಗಳು ಈ ಪಾರ್ಕ್ ನಲ್ಲಿ ಮೈತಳೆಯಲಿವೆ.ಈ ಉದ್ಯಾನವನದಲ್ಲಿ ಸರಳ ಜಿಮ್, ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಅನುಕೂಲಗಳು, ಹಿರಿಯ ನಾಗರಿಕರ ವಿಶ್ರಾಂತಿ ಸ್ಥಳ, ಸಂಗೀತ ಕಾರಂಜಿ, ಬೋಟಿಂಗ್, ಕಲಾಗ್ರಾಮದ ಮಳಿಗೆಗಳು, ಪಾದಾಚಾರಿ ಸೇತುವೆ, ವನೌಷಧಿ ಸಸ್ಯಗಳು ಇತ್ಯಾದಿ ವಿಶೇಷ ಆಕರ್ಷಣೆಯೊಂದಿಗೆ ಪ್ರವಾಸಿಗರಿಗೆ ಮುದ ನೀಡಲಿದೆ. ಈ ಪಾರ್ಕ್ ನ ಯಾವುದೇ ಸ್ಥಳದಲ್ಲಿ ಕೂತರೂ ಸುಶ್ರಾವ್ಯ ಸಂಗೀತದ ನಾದ ಕೇಳುವಂತೆ  ನಿರ್ಮಾಣ ಮಾಡುತ್ತಿರುವುದು  ಈ ಪಾರ್ಕ್ ವಿಶೇಷತೆಯಾಗಲಿದೆ  ಒಟ್ಟಾರೆ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಶ್ರೀನಿವಾಸಾಗರ ಪಾರ್ಕ್ ನಿರ್ಮಾಣಕ್ಕೆ ಡಿಪಿಆರ್: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ  ಪುಣ್ಯ ಕ್ಷೇತ್ರ  ಶ್ರೀನಿವಾಸಾಗರದ ಬಳಿ  ಪಾರ್ಕ್ ನಿರ್ಮಾಣ ಮಾಡಿ  ಪ್ರವಾಸಿಗರ ಮನಸೆಳೆಯುವ ಪ್ರವಾಸಿ ತಾಣ ಮಾಡಲು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ರಂಗಸ್ಥಳದಲ್ಲಿ 21ಎಕರೆ ಜಾಗದಲ್ಲಿ ಪ್ರವಾಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ.ಸದ್ಯದಲ್ಲೇ ಅನುಮೋದನೆಯೂ ದೊರಕಲಿದೆ ಇದಲ್ಲದೇ ಅಮಾನಿ ಗೋಪಾಲಕೃಷ್ಣ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಯೂ ವಿವಿಧ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಹಾಗೂ ಚಿತ್ರಕಲಾ ಶಿಕ್ಷಕರು ಮತ್ತು ಚಿತ್ರಕಲಾ ಪರಿಷತ್ತಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!