ದೇಶದ ಆಂತರಿಕ ರಕ್ಷಣೆಯ ಜವಾಬ್ದಾರಿ ಪೊಲೀಸರ ಮೇಲಿದೆ: ಸಚಿವ ಆರಗ ಜ್ಞಾನೇಂದ್ರ

ಮೈಸೂರು: ಜಗತ್ತಿನಲ್ಲಿ ಅತ್ಯಂತ ದೊಡ್ಡ ಸೈನಿಕ ಪಡೆ ಇರುವಂತಹ ರಾಷ್ಟ್ರಗಳಲ್ಲಿ ಭಾರತವು ಒಂದಾಗಿದ್ದರೂ ಸಹ ದೇಶದ ಆಂತರಿಕ ರಕ್ಷಣೆಯ ಜವಬ್ದಾರಿ ಪೊಲೀಸರ ಮೇಲಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

ಜ್ಯೋತಿನಗರದ ಪೊಲೀಸ್ ತರಬೇತಿ ಶಾಲೆಯ ಮೈದಾನದಲ್ಲಿ ನಡೆದ 6ನೇ ತಂಡದ ಮಹಿಳಾ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಗಳ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದೇಶದಿಂದ ಆಕ್ರಮಣ ಮಾಡುವ ಶತ್ರುಗಳನ್ನು ದಮನ ಮಾಡಲು ಭಾರತೀಯ ಸೈನಿಕರು ಸನ್ನದ್ಧರಾಗಿದ್ದಾರೆ. ಹಾಗೇಯೇ ವಿವಿಧ ಧರ್ಮ, ಭಾಷೆ, ಪಂಥ ಹೊಂದಿರುವ ದೇಶದ ಆಂತರಿಕ ರಕ್ಷಣೆಯ ಜವಬ್ದಾರಿಯನ್ನು ಪೊಲೀಸ್ ಪಡೆಯು ಸವಾಲಾಗಿ ಸ್ವೀಕರಿಸಿದೆ ಎಂದರು.

ದೇಶದ ಆಂತರಿಕ ಭದ್ರತೆಯನ್ನು ಗಟ್ಟಿಗೊಳಿಸಿ ದೇಶದ ನಾಗರಿಕರ ಪ್ರಾಣ, ಸ್ವತ್ತು, ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಂತಹ ಹೊಣೆಗಾರಿಕೆಯನ್ನು ಪೊಲೀಸ್ ಇಲಾಖೆಯು ಮಾಡುತ್ತಿದೆ ಎಂದು ಹೇಳಿದರು.

ಪೊಲೀಸ್ ಎಂದಾಕ್ಷಾಣ ಗಂಡಸರು ಎನ್ನುವ ಪರಿಕಲ್ಪನೆ ಇತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರ ಪೊಲೀಸ್ ಪಡೆಯಲ್ಲಿ ಮಹಿಳೆಯರನ್ನು ನೇಮಕ ಮಾಡಲು ಮುಂದಾಗಿದೆ. ಪೊಲೀಸ್ ಪಡೆಯಲ್ಲಿ ಶೇ.100ಕ್ಕೆ ಶೇ.25 ಭಾಗ ಮಹಿಳೆಯರು ಇರಬೇಕು. ಪ್ರಸ್ತುತ ಕರ್ನಾಟಕ ಪೊಲೀಸ್ ಪಡೆಯಲ್ಲಿ ಶೇ.10ರಷ್ಟು ಮಹಿಳಾ ಪೊಲೀಸರು ಇದ್ದಾರೆ ಎಂದು ತಿಳಿಸಿದರು.

ಅಪರಾಧಿಗಳಿಗೆ, ಸಮಾಜಘಾತುಕರಿಗೆ ಪೊಲೀಸರು ಎಂದರೆ ಭಯ ಇರಬೇಕು. ಸಾಮಾನ್ಯ ಜನರಲ್ಲಿ ಪೊಲೀಸ್ ಎಂದರೆ ಭಯ ಇರಬಾರದು. ಸಾಮಾನ್ಯ ಜನರಲ್ಲಿ ಪೊಲೀಸ್ ಎಂದರೆ ರಕ್ಷಕರು, ಸ್ನೇಹಿತರು ಎನ್ನುವ ಭಾವನೆ ಇರಬೇಕು ಎಂದರು.

ನಾಗರಿಕ ಸ್ನೇಹಿಯಾಗಿ ಪೊಲೀಸರು ನಡೆದುಕೊಳ್ಳಬೇಕು. ರಾಜ್ಯದಲ್ಲಿ ಶೇ.35ರಷ್ಟು ಪ್ರಕರಣಗಳು ಮಹಿಳೆಯರು ಮತ್ತು ಮಕ್ಕಳ ಮೇಲಿನ ಪ್ರಕರಣಗಳದ್ದಾಗಿರುತ್ತದೆ. ಅನೇಕ ಸಂದರ್ಭದಲ್ಲಿ ಮಹಿಳೆ ದೂರು ಹೇಳಿಕೊಳ್ಳಲು ತನ್ನ ಎಲ್ಲಾ ನೋವನ್ನು ಹೇಳಿಕೊಳ್ಳಲು ಮುಜುಗರವಾಗುತ್ತದೆ. ಹೀಗಾಗಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕನಿಷ್ಠ 3 ಮಹಿಳಾ ಪೊಲೀಸರನ್ನು ನೇಮಿಸಲಾಗುತ್ತಿದೆ ಎಂದರು.

ಮಹಿಳೆಯರಿಗಾಗಿ 36 ಮಹಿಳಾ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ ಇದೆ. ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಹಲವಾರು ಕೆಲಸಗಳನ್ನು ಮಾಡಲಾಗುತ್ತಿದೆ. ವಿವಿಧ ಭಾಗದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಹೆಣ್ಣಿನ ಮೇಲೆ ದೌರ್ಜನ್ಯ ನಡೆಸುವ ಕಿರಾತಕ ಮನಸ್ಸುಗಳಿವೆ. ಅಂತಹವರಿಂದ ಹೆಣ್ಣು ಮಕ್ಕಳ ರಕ್ಷಣೆಯ ಜವಾಬ್ದಾರಿ ಪೊಲೀಸರ ಮೇಲಿದೆ. ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ನಡೆದಾಗ ಸಾಕ್ಷಿಗಳು ಲಭ್ಯವಿರುವುದಿಲ್ಲ. ಹೀಗಾಗಿ ಎಫ್.ಎಸ್.ಎಲ್ ಲ್ಯಾಬ್‌ಗಳನ್ನು ತೆರೆಯುವ ಮೂಲಕ 250 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಕೆ.ಪಿ.ಎ ನಿರ್ದೇಶಕರ ವಿಫುಲ್ ಕುಮಾರ್, ಐಜಿಪಿ ಪ್ರವೀಣ್ ಮಧುಕರ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿದಂತೆ ಇತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]