ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಲಸಿಕಾ ಮೇಳದ ಲಸಿಕಾಕರಣದಲ್ಲಿ ಮತ್ತೊಮ್ಮೆ ಪ್ರಥಮ

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 29ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 40ಸಾವಿರ ಲಸಿಕೆ ಹಾಕಲು  ಸರ್ಕಾರ ಗುರಿ ನಿಗದಿಪಡಿಸಿತ್ತು ಆ ಗುರಿಯಲ್ಲಿ ಶೆ.95 ರಷ್ಟು ಸಾಧನೆ ಮಾಡುವ  ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಲು ಕಾರಣೀಭೂತರಾದ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ  ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಈ ಸಹಕಾರ ಲಸಿಕಾಕರಣ ಶೇ.100ರಷ್ಟು ಪ್ರಗತಿಯಾಗುವವರೆಗೂ ಹೀಗೇಯೇ ಮುಂದುವರಿಯಲಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಜನರಲ್ಲಿ ಮನವಿ ಮಾಡಿದ್ದಾರೆ.

ಅವರು ಲಸಿಕಾ ಮೇಳದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿ ಲಸಿಕಾಕರಣದ ಬಗ್ಗೆ ಜನರಲ್ಲಿ  ಜಾಗೃತಿ ಮೂಡಿಸಿ ಮಾತನಾಡುತ್ತಾ ,  ಜಿಲ್ಲೆಯಲ್ಲಿ ಈವರೆಗೆ 11,83,467  ಡೋಸ್ ಗಳ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಈ ಪೈಕಿ ಮೊದಲ ಡೋಸ್ ಲಸಿಕೆಯನ್ನ 7,98,771 ಜನರಿಗೆ ನೀಡಲಾಗಿದ್ದು, ಎರಡನೆಯ ಡೋಸನ್ನು 3,84,696ಜನರು ಪಡೆದಿದ್ದಾರೆ .ಲಸಿಕಾ ಮೇಳ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಲ್ಲರೂ ಎರಡೂ ಡೋಸ್ ಲಸಿಕೆ ಪಡೆಯುವವರೆಗೆ ಲಸಿಕಾ ಮೇಳ ಆಗಬೇಕು ಎಂದರು.

ಶೇ.100ರಷ್ಟ ಕ್ಕಿಂತ ಅಧಿಕ ಸಾಧನೆಯ ವಿಶ್ವಾಸ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 30 ರಿಂದ 35ಸಾವಿರ ಲಸಿಕೆ ಹಾಕಲು ಗುರಿ ನಿಗಧಿಪಡಿಸಿಕೊಳ್ಳಲಾಗಿತ್ತು ಆ ಗುರಿಯನ್ನು ಮೀರಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ ತೋರಿಸಿಕೊಟ್ಟಿದ್ದರು ಹಾಗೂ ಸೆ.17 ರಂದು ರಾಷ್ಟ್ರಾದ್ಯಂತ ನಡೆದ ವಿಶೇಷ ಲಸಿಕಾ ಮೇಳದ ಭಾಗವಾಗಿ  ಜಿಲ್ಲೆಯಲ್ಲಿ ಒಂದೇ ದಿನ 88,570 ಜನರಿಗೆ ಲಸಿಕೆ ಹಾಕುವ ಮೂಲಕ  ಲಸಿಕಾಕರಣದಲ್ಲಿ ಈ ಹಿಂದಿನ ದಾಖಲೆಗಳನ್ನು ಮೀರಿದ ಸಾಧನೆ ಜಿಲ್ಲೆ  ಮಾಡಿತ್ತು. ಇಂದಿನ ಮೇಳದಲ್ಲಿಯೂ  ನಿಗದಿತ 40 ಸಾವಿರ ಗುರಿಯಲ್ಲಿ ಈವರೆಗೆ 37,128 ಜನರಿಗೆ ಲಸಿಕೆ ಹಾಕಲಾಗಿದೆ. ಜಿಲ್ಲೆಯಾದ್ಯಂತ  ಲಸಿಕಾಕರಣ ಇನ್ನೂ  ಮುಂದುವರಿಯುತ್ತಿದ್ದು ನಿಗದಿತ  ಗುರಿಯನ್ನು  ಮೀರಿದ  ಸಾಧನೆಯನ್ನು  ಇಂದೇ  ಮಾಡುತ್ತೇವೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೀರೀಕ್ಷೆಗೂ ಮೀರಿದ ಸಾಧನೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ  ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರು ಮಂಗಳವಾರ ಕೋವಿಡ್-19ರ ಲಸಿಕಾಕರಣ ಪ್ರಗತಿ ಪರಿಶೀಲನೆ  ಹಾಗೂ  ವಿಶೇಷ ಲಸಿಕಾ ಮೇಳ ಆಯೋಜಿಸುವ ಬಗ್ಗೆ ವಿಡಿಯೋ ಸಂವಾದ ಸಭೆ ನಡೆಸಿದ ವೇಳೆ  ನೀಡಿದ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಈ ಮಟ್ಟದ ಸಾಧನೆಗೆ ಪ್ರಮುಖ ಕಾರಣವಾಯಿತು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ ,ಜಿಲ್ಲಾಡಳಿದ ಇತರ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು,ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಪಡೆಗಳ ಸದಸ್ಯರು, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಆರೋಗ್ಯ ಇಲಾಖೆಗೆ ಉತ್ತಮ ಸಾತ್ ನೀಡಿದ್ದಾರೆ, ಮಾಧ್ಯಮದವರು ವ್ಯಾಪಕ ಪ್ರಚಾರ ನೀಡಿದ್ದಾರೆ ಎಲ್ಲಕ್ಕೂ ಮಿಗಿಲಾಗಿ ಜಿಲ್ಲೆಯ ಜನರು ಅದ್ಭುತ ಸ್ಪಂದನೆ ನೀಡಿದ್ದಾರೆ  ಇದೆಲ್ಲದರ ಪರಿಣಾಮ ಈ ಸಾಧನೆಗೈಯ್ಯಲು ಸಾಧ್ಯವಾಗಿದೆ,ಮುಂದೆಯೂ ನಿಮ್ಮೆಲ್ಲರ  ಸಹಕಾರ ಹೀಗೆಯೇ ಮುಂದುವರಿಯಲಿ ಎಂದು ಜನರಲ್ಲಿ ಮನವಿ ಮಾಡಿ ಎಲ್ಲರಿಗೂ ಧನ್ಯವಾದಗಳನ್ನ ಹಾಗೂ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆಯನ್ನು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]