ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಲಸಿಕಾ ಮೇಳದ ಲಸಿಕಾಕರಣದಲ್ಲಿ ಮತ್ತೊಮ್ಮೆ ಪ್ರಥಮ

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 29ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 40ಸಾವಿರ ಲಸಿಕೆ ಹಾಕಲು  ಸರ್ಕಾರ ಗುರಿ ನಿಗದಿಪಡಿಸಿತ್ತು ಆ ಗುರಿಯಲ್ಲಿ ಶೆ.95 ರಷ್ಟು ಸಾಧನೆ ಮಾಡುವ  ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಲು ಕಾರಣೀಭೂತರಾದ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ  ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಈ ಸಹಕಾರ ಲಸಿಕಾಕರಣ ಶೇ.100ರಷ್ಟು ಪ್ರಗತಿಯಾಗುವವರೆಗೂ ಹೀಗೇಯೇ ಮುಂದುವರಿಯಲಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಜನರಲ್ಲಿ ಮನವಿ ಮಾಡಿದ್ದಾರೆ.

ಅವರು ಲಸಿಕಾ ಮೇಳದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿ ಲಸಿಕಾಕರಣದ ಬಗ್ಗೆ ಜನರಲ್ಲಿ  ಜಾಗೃತಿ ಮೂಡಿಸಿ ಮಾತನಾಡುತ್ತಾ ,  ಜಿಲ್ಲೆಯಲ್ಲಿ ಈವರೆಗೆ 11,83,467  ಡೋಸ್ ಗಳ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಈ ಪೈಕಿ ಮೊದಲ ಡೋಸ್ ಲಸಿಕೆಯನ್ನ 7,98,771 ಜನರಿಗೆ ನೀಡಲಾಗಿದ್ದು, ಎರಡನೆಯ ಡೋಸನ್ನು 3,84,696ಜನರು ಪಡೆದಿದ್ದಾರೆ .ಲಸಿಕಾ ಮೇಳ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಲ್ಲರೂ ಎರಡೂ ಡೋಸ್ ಲಸಿಕೆ ಪಡೆಯುವವರೆಗೆ ಲಸಿಕಾ ಮೇಳ ಆಗಬೇಕು ಎಂದರು.

ಶೇ.100ರಷ್ಟ ಕ್ಕಿಂತ ಅಧಿಕ ಸಾಧನೆಯ ವಿಶ್ವಾಸ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 30 ರಿಂದ 35ಸಾವಿರ ಲಸಿಕೆ ಹಾಕಲು ಗುರಿ ನಿಗಧಿಪಡಿಸಿಕೊಳ್ಳಲಾಗಿತ್ತು ಆ ಗುರಿಯನ್ನು ಮೀರಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ ತೋರಿಸಿಕೊಟ್ಟಿದ್ದರು ಹಾಗೂ ಸೆ.17 ರಂದು ರಾಷ್ಟ್ರಾದ್ಯಂತ ನಡೆದ ವಿಶೇಷ ಲಸಿಕಾ ಮೇಳದ ಭಾಗವಾಗಿ  ಜಿಲ್ಲೆಯಲ್ಲಿ ಒಂದೇ ದಿನ 88,570 ಜನರಿಗೆ ಲಸಿಕೆ ಹಾಕುವ ಮೂಲಕ  ಲಸಿಕಾಕರಣದಲ್ಲಿ ಈ ಹಿಂದಿನ ದಾಖಲೆಗಳನ್ನು ಮೀರಿದ ಸಾಧನೆ ಜಿಲ್ಲೆ  ಮಾಡಿತ್ತು. ಇಂದಿನ ಮೇಳದಲ್ಲಿಯೂ  ನಿಗದಿತ 40 ಸಾವಿರ ಗುರಿಯಲ್ಲಿ ಈವರೆಗೆ 37,128 ಜನರಿಗೆ ಲಸಿಕೆ ಹಾಕಲಾಗಿದೆ. ಜಿಲ್ಲೆಯಾದ್ಯಂತ  ಲಸಿಕಾಕರಣ ಇನ್ನೂ  ಮುಂದುವರಿಯುತ್ತಿದ್ದು ನಿಗದಿತ  ಗುರಿಯನ್ನು  ಮೀರಿದ  ಸಾಧನೆಯನ್ನು  ಇಂದೇ  ಮಾಡುತ್ತೇವೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೀರೀಕ್ಷೆಗೂ ಮೀರಿದ ಸಾಧನೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ  ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರು ಮಂಗಳವಾರ ಕೋವಿಡ್-19ರ ಲಸಿಕಾಕರಣ ಪ್ರಗತಿ ಪರಿಶೀಲನೆ  ಹಾಗೂ  ವಿಶೇಷ ಲಸಿಕಾ ಮೇಳ ಆಯೋಜಿಸುವ ಬಗ್ಗೆ ವಿಡಿಯೋ ಸಂವಾದ ಸಭೆ ನಡೆಸಿದ ವೇಳೆ  ನೀಡಿದ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಈ ಮಟ್ಟದ ಸಾಧನೆಗೆ ಪ್ರಮುಖ ಕಾರಣವಾಯಿತು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ ,ಜಿಲ್ಲಾಡಳಿದ ಇತರ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು,ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಪಡೆಗಳ ಸದಸ್ಯರು, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಆರೋಗ್ಯ ಇಲಾಖೆಗೆ ಉತ್ತಮ ಸಾತ್ ನೀಡಿದ್ದಾರೆ, ಮಾಧ್ಯಮದವರು ವ್ಯಾಪಕ ಪ್ರಚಾರ ನೀಡಿದ್ದಾರೆ ಎಲ್ಲಕ್ಕೂ ಮಿಗಿಲಾಗಿ ಜಿಲ್ಲೆಯ ಜನರು ಅದ್ಭುತ ಸ್ಪಂದನೆ ನೀಡಿದ್ದಾರೆ  ಇದೆಲ್ಲದರ ಪರಿಣಾಮ ಈ ಸಾಧನೆಗೈಯ್ಯಲು ಸಾಧ್ಯವಾಗಿದೆ,ಮುಂದೆಯೂ ನಿಮ್ಮೆಲ್ಲರ  ಸಹಕಾರ ಹೀಗೆಯೇ ಮುಂದುವರಿಯಲಿ ಎಂದು ಜನರಲ್ಲಿ ಮನವಿ ಮಾಡಿ ಎಲ್ಲರಿಗೂ ಧನ್ಯವಾದಗಳನ್ನ ಹಾಗೂ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆಯನ್ನು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!